ಬ್ರೇಕಿಂಗ್ ನ್ಯೂಸ್
22-04-25 01:00 pm Bangalore Correspondent ಕರ್ನಾಟಕ
ಬೆಂಗಳೂರು, ಎ.22 : ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಭಾರೀ ಆಕ್ರೋಶಕ್ಕೆ ಗುರಿಯಾಗಿ ತೀವ್ರ ವಿವಾದಕ್ಕೆ ತಿರುಗಿದೆ. ಇದರ ಬೆನ್ನಲ್ಲೇ ಆಕ್ರೋಶದ ಕಾವನ್ನು ಕಡಿಮೆಗೊಳಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳ ಕ್ರಮಕ್ಕೆ ರಾಜ್ಯ ಸರ್ಕಾರವೇ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ವಿವಾದ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿ.ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಕ್ರಮ ನಿಯಮ ಬಾಹಿರವಾದುದ್ದು. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ಅದು ಬಿಟ್ಟು ಅನವಶ್ಯಕವಾಗಿ ಇತರರ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದ ನಿಯಮ ಹೇರಿಕೆ ಮಾಡಬಾರದು. ಇಂಥದ್ದನ್ನು ನಾವು ಸಹಿಸುವುದಿಲ್ಲ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದೇ ವೇಳೆ ರೋಹಿತ್ ವೆಮುಲಾ ಕಾಯ್ದೆ ಕುರಿತು ಮಾತನಾಡಿದ ಅವರು, ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ, ಈ ಬಗ್ಗೆ ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದೇನೆ. ಸಾಧ್ಯತೆಗಳನ್ನು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜನಿವಾರ ವಿವಾದಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರೂ ಖಂಡನೆ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಜನಿವಾರ ಕಳಚಿದ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ನೀಡಲು ಸರ್ಕಾರ ಬದ್ಧ ಎಂದು ಹೇಳಿದ್ದಾರೆ. ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ಕರ್ಮ ಹಲವಾದರೂ ನಿಷ್ಠೆ ಒಂದೇ, ದೇವನೊಬ್ಬ ನಾಮ ಹಲವು. ಧರ್ಮದ ಆಚರಣೆ ವಿಚಾರದಲ್ಲಿ ಸರ್ಕಾರ ಎಂದಿಗೂ ಮಧ್ಯಪ್ರವೇಶ ಮಾಡುವುದಿಲ್ಲ. ಆಯಾ ಧರ್ಮ ಉಳಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ನಮ್ಮ ಸರ್ಕಾರ ಎಲ್ಲರನ್ನೂ ಸಾಮರಸ್ಯದಿಂದ ಒಗ್ಗೂಡಿಸಿಕೊಂಡು ಹೋಗುವ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯುತ್ತದೆ. ಬುಧವಾರ ಆದಿಚುಂಚನಗಿರಿ ಪಿಯು ಕಾಲೇಜು ಪರೀಕ್ಷಾ ಕೇಂದ್ರದ ಭದ್ರತಾ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯುವಂತೆ ಹೇಳಿದ್ದಾರೆ. ಈ ವೇಳೆ ವಿದ್ಯಾರ್ಥಿಯೊಬ್ಬ ಜನಿವಾರ ತೆಗೆಯಲು ನಿರಾಕರಿಸಿದರೆ, ಮತ್ತಿಬ್ಬರು ಜನಿವಾರ ತೆಗೆದು ಪರೀಕ್ಷಾ ಕೊಠಡಿ ಪ್ರವೇಶಿಸಿದ್ದರು.
Call for Reform, New Internal Reservation Policy Advocated to Address Inequities for Children of Street Sweepers and District Collectors.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm