ಬ್ರೇಕಿಂಗ್ ನ್ಯೂಸ್
19-12-20 04:43 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.19; ಲೋಕಾಯುಕ್ತ ಸಂಸ್ಥೆಯನ್ನು ರದ್ದು ಮಾಡುವ ಮೂಲಕ ಸಿದ್ದರಾಮಯ್ಯ ಜೈಲಿಗೆ ಹೋಗುವುದನ್ನು ತಪ್ಪಿಸಿಕೊಂಡರು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಕಾವತಿ ಭೂ ಹಗರಣದ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗಬೇಕಾಗಿತ್ತು. ಆದರೆ, ಅದೇ ಸಂದರ್ಭದಲ್ಲಿ ತನಿಖೆ ನಡೆಸುತ್ತಿದ್ದ ಲೋಕಾಯುಕ್ತ ಸಂಸ್ಥೆಯನ್ನು ನಿರ್ಜೀವಗೊಳಿಸಿದರು. ಅದರ ಬದಲಿಗೆ, ಎಸಿಬಿ ಎಂಬ ಹೊಸ ವಿಭಾಗವನ್ನು ಆರಂಭಿಸಿ, ತಾವು ಜೈಲಿಗೆ ಹೋಗುವುದನ್ನು ತಪ್ಪಿಸಿಕೊಂಡರು. ಒಂದು ವೇಳೆ, ಅರ್ಕಾವತಿ ಹಗರಣ ಮತ್ತೆ ತೆರೆದುಕೊಂಡಲ್ಲಿ ಸಿದ್ದರಾಮಯ್ಯ ಎಲ್ಲಿ ಇರಬೇಕಾದೀತು ಎನ್ನುವುದನ್ನು ಊಹಿಸಿಕೊಳ್ಳಲಿ ಎಂದು ಟಾಂಗ್ ನೀಡಿದ್ದಾರೆ.
ಸಿದ್ದರಾಮಯ್ಯ ತಮ್ಮ ಸ್ವಕ್ಷೇತ್ರ ಚಾಮುಂಡೇಶ್ವರಿಯನ್ನು ಬಿಟ್ಟು ಓಡಿಹೋಗಿದ್ರು. ಅಲ್ಲಿ ಯಾಕೆ ಸೋಲಾಯ್ತು ಅನ್ನುವುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಿ. ನೀವು ಸ್ವತಃ ಕಾಂಗ್ರೆಸ್ ಪಕ್ಷವನ್ನು ಡೆಮಾಲಿಶ್ ಮಾಡಿದ್ರಿ. ಆದರೆ, ಕಾಂಗ್ರೆಸನ್ನು ಕಾಪಾಡಿದ್ದು ದಲಿತ ಸಮುದಾಯ. ನೀವು ವಿಮರ್ಶೆ ಮಾಡಿಕೊಳ್ಳದೆ ಮಾತನಾಡಬೇಡಿ. ಚಾಮುಂಡೇಶ್ವರಿಯಲ್ಲಿ ಸೋಲಿನ ಸುಳಿವು ಸಿಕ್ಕಿದ್ದರಿಂದಲೇ ನೀವು ಬಾದಾಮಿಗೆ ಓಡಿದ್ರಿ. ಯಾಕೆ ನಿಮ್ಮ ಯೋಜನೆಗಳು ಚಾಮುಂಡೇಶ್ವರಿಯಲ್ಲಿ ಫಲ ನೀಡಲಿಲ್ಲ. ನೀವು ಯಾರೋ ಚಮಚಾಗಳನ್ನು ನಂಬಿ ಸೋತಿರಿ.

ನಿಮ್ಮನ್ನು ಜೆಡಿಎಸ್, ಕಾಂಗ್ರೆಸ್ ನಾಯಕರು ಸೋಲಿಸಿದ್ದಲ್ಲ. ನಿಮ್ಮನ್ನು ಸೋಲಿಸಿದ್ದು ಅಲ್ಲಿನ ಜನರು. ಹಿಂದೆ ಕೊರಟಗೆರೆಯಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿದಾಗ, ಇದು ಗೊತ್ತಾಗಲಿಲ್ಲವೇ ಎಂದು ಪ್ರಶ್ನಿಸಿದ ವಿಶ್ವನಾಥ್, ಸದ್ಯಕ್ಕೆ ಕುಮಾರಸ್ವಾಮಿ ಸರಕಾರವನ್ನು ತಾವೇ ಬೀಳಿಸಿದ್ದು ಎಂದು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ನಮ್ಮ ಮೇಲೆ ಇದ್ದ ಅಪವಾದದಿಂದ ಮುಕ್ತವಾಗಿದ್ದೇವೆ. ಇದಕ್ಕಾಗಿ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಗೆ ಅಭಿನಂದಿಸುತ್ತೇನೆ ಎಂದರು.
ಸಿದ್ದರಾಮಯ್ಯರಿಗೆ ಇರುವಷ್ಟು ಹೊಟ್ಟೆಕಿಚ್ಚು ಬೇರೆ ಯಾರಿಗೂ ಇರಲಿಕ್ಕಿಲ್ಲ. ಸಿದ್ದರಾಮಯ್ಯ ಸೋಮನಹಳ್ಳಿಯ ಮುದುಕಿಯಂತಾಗಿದ್ದಾರೆ. ತಮ್ಮ ಕೋಳಿ ಕೂಗಿದರೆ ಮಾತ್ರ ಬೆಳಗಾಗೋದು ಅಂದ್ಕೊಂಡಿದ್ದಾರೆ. ಸುತ್ತ ಗಿರಕಿ ಹೊಡೆಯುವ ಮಂದಿಯೂ ಅದನ್ನೇ ಕಿವಿಗೆ ಊದುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ನಂಬಿಕೊಂಡು ಮೋಸ ಹೋಗುತ್ತಿದ್ದಾರೆ ಎಂದು ಕಟಕಿಯಾಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm