ಬ್ರೇಕಿಂಗ್ ನ್ಯೂಸ್
27-04-25 07:13 pm HK News Desk ಕರ್ನಾಟಕ
ಕಲಬುರಗಿ, ಏ 27: ಕಲಬುರಗಿ ನಗರದಲ್ಲಿ ಒಟ್ಟು 9 ಜನ ಪಾಕಿಸ್ತಾನದ ಪ್ರಜೆಗಳು ಅಧಿಕೃತವಾಗಿ ವಾಸವಿದ್ದು, ಅವರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಹಿಂತಿರುಗಲು ಸೂಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ತಿಳಿಸಿದ್ದಾರೆ.
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, "ಈ 9 ಜನರಲ್ಲಿ ಇಬ್ಬರು ದೀರ್ಘಾವಧಿ ವೀಸಾ ಹೊಂದಿದ್ದು, ಉಳಿದ 7 ಜನರು ಸಂದರ್ಶಕರ ವೀಸಾ ಹೊಂದಿದ್ದಾರೆ. ಇವರು ಕಳೆದ 20 ವರ್ಷಗಳಿಂದ ಕಲಬುರಗಿಯಲ್ಲಿ ವಾಸವಾಗಿದ್ದಾರೆ. ಎಲ್ಲರಿಗೂ ನಿಯಮಾನುಸಾರ ಹಿಂತಿರುಗುವಂತೆ ಸೂಚನೆ ನೀಡಲಾಗಿದೆ" ಎಂದು ಹೇಳಿದರು.
"ವಿಸಿಟರ್ಸ್ ವೀಸಾ ಹೊಂದಿದ ಏಳು ಜನರಲ್ಲಿ ಒಬ್ಬರು ಮಹಿಳೆ ಅನುಮತಿ ಪಡೆದು ಅಮೆರಿಕಾಕ್ಕೆ ತೆರಳಿದ್ದಾರೆ. ಉಳಿದ ಆರು ಜನರಲ್ಲಿ ಮೂವರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ" ಎಂದು ಮಾಹಿತಿ ನೀಡಿದರು.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್ನಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಕೊಂದಿದ್ದರು. ಇದರಿಂದ ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆ ರದ್ದುಗೊಳಿಸಿ ಪಾಕ್ಗೆ ಕಠಿಣ ಸಂದೇಶ ರವಾನಿಸಿದೆ. ಹೀಗಾಗಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ವಾಪಸ್ ತೆರಳಲು ಗಡುವು ನೀಡಲಾಗಿದೆ. ಕರ್ನಾಟಕದ ಮೈಸೂರು, ಉತ್ತರ ಕನ್ನಡ, ತುಮಕೂರು ಮತ್ತು ದಾವಣಗೆರೆ ಮುಂತಾದ ಕಡೆಗಳಲ್ಲಿ ಒಟ್ಟು 92 ಜನ ಪಾಕ್ ಪ್ರಜೆಗಳು ವಾಸವಿದ್ದಾರೆ ಎಂದು ಆಯಾ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಕಾರ್ಯಾಚರಣೆಯಲ್ಲಿ ತಿಳಿದು ಬಂದಿದೆ.
ಪ್ರಾದೇಶಿಕ ನೋಂದಣಿ ಕೇಂದ್ರ (FRRO) ದಲ್ಲಿ ನೋಂದಾಯಿಸಲ್ಪಟ್ಟಿರುವ ಪಾಕ್ ಪ್ರಜೆಗಳ ಕುರಿತು ಈಗಾಗಲೇ ಆಯಾ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ. ಅದರನ್ವಯ ಆಯಾ ಜಿಲ್ಲೆಗಳಲ್ಲಿರುವ ಪಾಕ್ ಪ್ರಜೆಗಳು ಭಾರತ ತೊರೆಯಬೇಕಿದೆ. ನೋಂದಾಯಿಸಲ್ಪಡದ ಹಾಗೂ ಅನಧಿಕೃತವಾಗಿ ನೆಲೆಸಿರುವವರನ್ನ ಸ್ಥಳಿಯ ಪೊಲೀಸರು ಪತ್ತೆಹಚ್ಚಿ ಬಂಧಿಸಿ ಬಂಧನ ಕೇಂದ್ರದಲ್ಲಿರಿಸುತ್ತಾರೆ. ನಂತರ ರಾಜ್ಯ ಗೃಹ ಇಲಾಖೆಯಿಂದ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಲಾಗುತ್ತದೆ.
ಕೇಂದ್ರ ಗೃಹ ಸಚಿವಾಲಯದ ಮೂಲಕ ಭಾರತದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗುತ್ತದೆ. ಬಳಿಕ ರಾಯಭಾರ ಕಚೇರಿಯ ಅಧಿಕಾರಿಗಳು ವೆರಿಫಿಕೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ ತಮ್ಮ ಪ್ರಜೆಗಳನ್ನ ವಾಪಾಸ್ ಕಳಿಸಬೇಕಾಗುತ್ತದೆ.
9 Pakistani Nationals Residing in Kalaburagi for 20 Years, Police Commissioner Sharanappa Issues Deportation Notice.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm