ಬ್ರೇಕಿಂಗ್ ನ್ಯೂಸ್
27-04-25 09:22 pm HK News Desk ಕರ್ನಾಟಕ
ಗಂಗಾವತಿ, ಏ 26: ಪಾಕಿಸ್ತಾನದ ವಿರುದ್ದ ಯುದ್ದ ಬೇಡ ಎಂದು ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಓಲೈಕೆ ರಾಜಕೀಯದ ಕೊನೆಯ ಘಟ್ಟ ತಲುಪಿದ್ದಾರೆ. ಅವರು ಮುಂದಿನ ದಿನಗಳಲ್ಲಿ ಪಾಕಿಸ್ತಾನದಿಂದ `ದಿಲ್ ಸೇ ಪಾಕಿಸ್ತಾನ' ಪ್ರಶಸ್ತಿಗೆ ಭಾಜನರಾಗಬಹುದು ಎಂದು ಗಂಗಾವತಿ ಶಾಸಕ ಜಿ. ಜನಾರ್ದನರೆಡ್ಡಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಪಾಕಿಸ್ತಾನದೊಂದಿಗೆ ಯುದ್ಧ ಬೇಡ ಎಂದು ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರ ಹೇಳಿಕೆಗಳು ಪಾಕಿಸ್ತಾನದ ಮಾಧ್ಯಮಗಳಲ್ಲಿ ಸಿಎಂ ಸಿದ್ದರಾಮಯ್ಯ ಪರ ಸುದ್ದಿ ಪ್ರಸಾರವಾಗಿದ್ದಕ್ಕೆ ಶಾಸಕ ರೆಡ್ಡಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ (ಹಿಂದಿನ ಟ್ವಿಟ್ಟರ್) ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡುವ ಮೂಲಕ ಶಾಸಕ ಜನಾರ್ದನ ರೆಡ್ಡಿ ಪ್ರಕ್ರಿಯೆ ನೀಡಿದ್ದಾರೆ. ಯಾವ ಮುಖ್ಯಮಂತ್ರಿಯೂ ಶತ್ರು ರಾಷ್ಟ್ರದ ಹೃದಯ ಗೆದ್ದಿದ್ದಿಲ್ಲ. ಇದೀಗ ಸಿದ್ದರಾಮಯ್ಯನವರು ಪಾಕಿಸ್ತಾನದ ಹೃದಯ ಗೆದ್ದಿದ್ದಾರೆ. ಇದು ಸಿದ್ದರಾಮಯ್ಯನವರ ಓಲೈಕೆ ರಾಜಕೀಯಕ್ಕೆ ಸಂದ ಗೌರವ. ಕರ್ನಾಟಕದ ಮಾನವನ್ನು ಪಾಕಿಸ್ತಾನಕ್ಕೆ ಸಿದ್ದರಾಮಯ್ಯ ಅರ್ಪಿಸಿದ್ದಾರೆ ಎಂದು ರೆಡ್ಡಿ ಟೀಕಿಸಿದ್ದಾರೆ.
ಶತ್ರು ರಾಷ್ಟ್ರವಾದ ಪಾಕ್ ಮಾಧ್ಯಮಗಳ ಹೊಗಳಿಕೆಗೆ ಪಾತ್ರರಾದ ಸಿದ್ದರಾಮಯ್ಯಗೆ ಅಭಿನಂದನೆಗಳು ಎಂದು ಶಾಸಕ ರೆಡ್ಡಿ, ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನದಲ್ಲಿ ಪ್ರಸಾರವಾದ ಸುದ್ದಿಯ ಪೋಸ್ಟ್ ಹಾಕಿ, ಶಾಸಕ ರೆಡ್ಡಿ ಹರಿಹಾಯ್ದಿದ್ದಾರೆ.
ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ;
"ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ್ಮ ಈ ಕ್ಷಣದ ಆದ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಎರಡು ವರ್ಷ ಸರ್ಕಾರದ ಸಾಧನಾ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.
Siddaramaiah Wins Pakistan's Heart, MLA Janardhan Reddy Says He Deserves a 'Dil Se Pak' Award for Opposing War.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm