ಬ್ರೇಕಿಂಗ್ ನ್ಯೂಸ್
27-04-25 09:22 pm HK News Desk ಕರ್ನಾಟಕ
ಗಂಗಾವತಿ, ಏ 26: ಪಾಕಿಸ್ತಾನದ ವಿರುದ್ದ ಯುದ್ದ ಬೇಡ ಎಂದು ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಓಲೈಕೆ ರಾಜಕೀಯದ ಕೊನೆಯ ಘಟ್ಟ ತಲುಪಿದ್ದಾರೆ. ಅವರು ಮುಂದಿನ ದಿನಗಳಲ್ಲಿ ಪಾಕಿಸ್ತಾನದಿಂದ `ದಿಲ್ ಸೇ ಪಾಕಿಸ್ತಾನ' ಪ್ರಶಸ್ತಿಗೆ ಭಾಜನರಾಗಬಹುದು ಎಂದು ಗಂಗಾವತಿ ಶಾಸಕ ಜಿ. ಜನಾರ್ದನರೆಡ್ಡಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಪಾಕಿಸ್ತಾನದೊಂದಿಗೆ ಯುದ್ಧ ಬೇಡ ಎಂದು ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರ ಹೇಳಿಕೆಗಳು ಪಾಕಿಸ್ತಾನದ ಮಾಧ್ಯಮಗಳಲ್ಲಿ ಸಿಎಂ ಸಿದ್ದರಾಮಯ್ಯ ಪರ ಸುದ್ದಿ ಪ್ರಸಾರವಾಗಿದ್ದಕ್ಕೆ ಶಾಸಕ ರೆಡ್ಡಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ (ಹಿಂದಿನ ಟ್ವಿಟ್ಟರ್) ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡುವ ಮೂಲಕ ಶಾಸಕ ಜನಾರ್ದನ ರೆಡ್ಡಿ ಪ್ರಕ್ರಿಯೆ ನೀಡಿದ್ದಾರೆ. ಯಾವ ಮುಖ್ಯಮಂತ್ರಿಯೂ ಶತ್ರು ರಾಷ್ಟ್ರದ ಹೃದಯ ಗೆದ್ದಿದ್ದಿಲ್ಲ. ಇದೀಗ ಸಿದ್ದರಾಮಯ್ಯನವರು ಪಾಕಿಸ್ತಾನದ ಹೃದಯ ಗೆದ್ದಿದ್ದಾರೆ. ಇದು ಸಿದ್ದರಾಮಯ್ಯನವರ ಓಲೈಕೆ ರಾಜಕೀಯಕ್ಕೆ ಸಂದ ಗೌರವ. ಕರ್ನಾಟಕದ ಮಾನವನ್ನು ಪಾಕಿಸ್ತಾನಕ್ಕೆ ಸಿದ್ದರಾಮಯ್ಯ ಅರ್ಪಿಸಿದ್ದಾರೆ ಎಂದು ರೆಡ್ಡಿ ಟೀಕಿಸಿದ್ದಾರೆ.
ಶತ್ರು ರಾಷ್ಟ್ರವಾದ ಪಾಕ್ ಮಾಧ್ಯಮಗಳ ಹೊಗಳಿಕೆಗೆ ಪಾತ್ರರಾದ ಸಿದ್ದರಾಮಯ್ಯಗೆ ಅಭಿನಂದನೆಗಳು ಎಂದು ಶಾಸಕ ರೆಡ್ಡಿ, ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನದಲ್ಲಿ ಪ್ರಸಾರವಾದ ಸುದ್ದಿಯ ಪೋಸ್ಟ್ ಹಾಕಿ, ಶಾಸಕ ರೆಡ್ಡಿ ಹರಿಹಾಯ್ದಿದ್ದಾರೆ.
ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ;
"ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ್ಮ ಈ ಕ್ಷಣದ ಆದ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಎರಡು ವರ್ಷ ಸರ್ಕಾರದ ಸಾಧನಾ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.
Siddaramaiah Wins Pakistan's Heart, MLA Janardhan Reddy Says He Deserves a 'Dil Se Pak' Award for Opposing War.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm