ಬ್ರೇಕಿಂಗ್ ನ್ಯೂಸ್
29-04-25 04:28 pm HK News Desk ಕರ್ನಾಟಕ
ಬೆಂಗಳೂರು, ಎ.29 : ಮಂಗಳೂರಿನಲ್ಲಿ ಗಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ವ್ಯಕ್ತಿಯೊಬ್ಬ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಕ್ಕೆ ಅಪರಿಚಿತ ವ್ಯಕ್ತಿಯ ಮೇಲೆ ಗುಂಪಿನಿಂದ ಹಲ್ಲೆ ಆಗಿರುವ ಮಾಹಿತಿ ಲಭಿಸಿದೆ. ಹಲ್ಲೆ ನಂತರ, ಆ ವ್ಯಕ್ತಿ ಸಾವಿಗೀಡಾಗಿದ್ದಾನೆ. ವ್ಯಕ್ತಿಯ ಹೆಸರು ಗೊತ್ತಾಗಿಲ್ಲ. ಹೊರ ರಾಜ್ಯದ ವ್ಯಕ್ತಿ ಇರಬೇಕೆಂದು ಮಾಹಿತಿ ಇದೆ. ಘಟನೆ ಸಂಬಂಧಿಸಿ ಪೊಲೀಸರು 10-12 ಮಂದಿಯನ್ನು ಬಂಧಿಸಿದ್ದಾರೆ ಎಂದು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ರಾಷ್ಟ್ರೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಲೋಕಲ್ ಕ್ರಿಕೆಟ್ ಆಡುತ್ತಿದ್ದಾಗ ವ್ಯಕ್ತಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಇದರಿಂದ ಸಿಟ್ಟುಗೊಂಡ ಉದ್ರಿಕ್ತರು ಗುಂಪು ಸೇರಿ ಹಲ್ಲೆ ಕೃತ್ಯ ನಡೆಸಿದ್ದಾರೆ. ಇದರಿಂದ ಆತನಿಗೆ ಗಾಯವಾಗಿತ್ತು. ಗಾಯಗೊಂಡಿದ್ದ ವ್ಯಕ್ತಿ ಬಳಿಕ ಸಾವಿಗೀಡಾಗಿದ್ದಾನೆ. ಇನ್ನೂ ಆ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಆತನ ಹಿನ್ನೆಲೆ ಪತ್ತೆಗಾಗಿ ಪೊಲೀಸರು ತಂಡ ರಚಿಸಿದ್ದಾರೆ.
ಕರ್ನಾಟಕದಂತಹ ಶಾಂತಿಯುತ ರಾಜ್ಯದಲ್ಲಿ ಇಂತಹ ಸ್ಥಿತಿಯಾಗಬಾರದು. ಯಾವುದೇ ಕಾರಣಕ್ಕು ಕಾನೂನು ಕೈಗೆತ್ತಿಕೊಳ್ಳುವ ಸ್ಥಿತಿ ಬರಬಾರದು. ಘಟನೆ ಹಿಂದೆ ಯಾರಿದ್ದಾರೆ, ನಿರ್ದಿಷ್ಟವಾಗಿ ಯಾರಿದ್ದಾರೆ ಅಂತ ಗೊತ್ತಾಗಿಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಮಂಗಳೂರಿನಂತಹ ಕೋಮು ಸೂಕ್ಷ್ಮ ಪ್ರದೇಶದಲ್ಲಿ ಸಾರ್ವಜನಿಕರು ಶಾಂತಿ, ಸಾಮರಸ್ಯ ಕಾಪಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮಂಗಳೂರು ಪೊಲೀಸರು ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ 15 ಜನರನ್ನು ಬಂಧಿಸಿದ್ದಾರೆ. ಆದರೆ ಯಾವ ಕಾರಣಕ್ಕೆ ಗಲಾಟೆ ಆಗಿತ್ತು. ಹಲ್ಲೆ ಯಾವ ಕಾರಣಕ್ಕೆ ನಡೆಸಿದ್ದರು ಎನ್ನುವುದರ ಬಗ್ಗೆ ಮಾಹಿತಿ ನೀಡಿಲ್ಲ. ಆರೋಪಿಗಳನ್ನು ತನಿಖೆ ನಡೆಸಿದ ಬಳಿಕವಷ್ಟೇ ಇದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ, ದೇಶ ವಿರೋಧಿ ಘೋಷಣೆ ಕೂಗಿದ್ದಕ್ಕಾಗಿ ಗುಂಪು ಹಲ್ಲೆ ನಡೆಸಿರುವುದಾಗಿ ವದಂತಿ ಸೃಷ್ಟಿಯಾಗಿದೆ.
Mangalore Kudupu Mob Attack and Murder Incident, Man Allegedly Raised Anti National Slogans While Playing Cricket, Minister Parameshwar Responds.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm