ಬ್ರೇಕಿಂಗ್ ನ್ಯೂಸ್
29-04-25 04:28 pm HK News Desk ಕರ್ನಾಟಕ
ಬೆಂಗಳೂರು, ಎ.29 : ಮಂಗಳೂರಿನಲ್ಲಿ ಗಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ವ್ಯಕ್ತಿಯೊಬ್ಬ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಕ್ಕೆ ಅಪರಿಚಿತ ವ್ಯಕ್ತಿಯ ಮೇಲೆ ಗುಂಪಿನಿಂದ ಹಲ್ಲೆ ಆಗಿರುವ ಮಾಹಿತಿ ಲಭಿಸಿದೆ. ಹಲ್ಲೆ ನಂತರ, ಆ ವ್ಯಕ್ತಿ ಸಾವಿಗೀಡಾಗಿದ್ದಾನೆ. ವ್ಯಕ್ತಿಯ ಹೆಸರು ಗೊತ್ತಾಗಿಲ್ಲ. ಹೊರ ರಾಜ್ಯದ ವ್ಯಕ್ತಿ ಇರಬೇಕೆಂದು ಮಾಹಿತಿ ಇದೆ. ಘಟನೆ ಸಂಬಂಧಿಸಿ ಪೊಲೀಸರು 10-12 ಮಂದಿಯನ್ನು ಬಂಧಿಸಿದ್ದಾರೆ ಎಂದು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ರಾಷ್ಟ್ರೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಲೋಕಲ್ ಕ್ರಿಕೆಟ್ ಆಡುತ್ತಿದ್ದಾಗ ವ್ಯಕ್ತಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಇದರಿಂದ ಸಿಟ್ಟುಗೊಂಡ ಉದ್ರಿಕ್ತರು ಗುಂಪು ಸೇರಿ ಹಲ್ಲೆ ಕೃತ್ಯ ನಡೆಸಿದ್ದಾರೆ. ಇದರಿಂದ ಆತನಿಗೆ ಗಾಯವಾಗಿತ್ತು. ಗಾಯಗೊಂಡಿದ್ದ ವ್ಯಕ್ತಿ ಬಳಿಕ ಸಾವಿಗೀಡಾಗಿದ್ದಾನೆ. ಇನ್ನೂ ಆ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಆತನ ಹಿನ್ನೆಲೆ ಪತ್ತೆಗಾಗಿ ಪೊಲೀಸರು ತಂಡ ರಚಿಸಿದ್ದಾರೆ.
ಕರ್ನಾಟಕದಂತಹ ಶಾಂತಿಯುತ ರಾಜ್ಯದಲ್ಲಿ ಇಂತಹ ಸ್ಥಿತಿಯಾಗಬಾರದು. ಯಾವುದೇ ಕಾರಣಕ್ಕು ಕಾನೂನು ಕೈಗೆತ್ತಿಕೊಳ್ಳುವ ಸ್ಥಿತಿ ಬರಬಾರದು. ಘಟನೆ ಹಿಂದೆ ಯಾರಿದ್ದಾರೆ, ನಿರ್ದಿಷ್ಟವಾಗಿ ಯಾರಿದ್ದಾರೆ ಅಂತ ಗೊತ್ತಾಗಿಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಮಂಗಳೂರಿನಂತಹ ಕೋಮು ಸೂಕ್ಷ್ಮ ಪ್ರದೇಶದಲ್ಲಿ ಸಾರ್ವಜನಿಕರು ಶಾಂತಿ, ಸಾಮರಸ್ಯ ಕಾಪಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮಂಗಳೂರು ಪೊಲೀಸರು ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ 15 ಜನರನ್ನು ಬಂಧಿಸಿದ್ದಾರೆ. ಆದರೆ ಯಾವ ಕಾರಣಕ್ಕೆ ಗಲಾಟೆ ಆಗಿತ್ತು. ಹಲ್ಲೆ ಯಾವ ಕಾರಣಕ್ಕೆ ನಡೆಸಿದ್ದರು ಎನ್ನುವುದರ ಬಗ್ಗೆ ಮಾಹಿತಿ ನೀಡಿಲ್ಲ. ಆರೋಪಿಗಳನ್ನು ತನಿಖೆ ನಡೆಸಿದ ಬಳಿಕವಷ್ಟೇ ಇದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ, ದೇಶ ವಿರೋಧಿ ಘೋಷಣೆ ಕೂಗಿದ್ದಕ್ಕಾಗಿ ಗುಂಪು ಹಲ್ಲೆ ನಡೆಸಿರುವುದಾಗಿ ವದಂತಿ ಸೃಷ್ಟಿಯಾಗಿದೆ.
Mangalore Kudupu Mob Attack and Murder Incident, Man Allegedly Raised Anti National Slogans While Playing Cricket, Minister Parameshwar Responds.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm