ಬ್ರೇಕಿಂಗ್ ನ್ಯೂಸ್
02-05-25 10:52 am Bangalore Correspondent ಕರ್ನಾಟಕ
ಬೆಂಗಳೂರು, ಮೇ 2 : ಮಂಗಳೂರಿನ ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಅತ್ಯಂತ ಭೀಭತ್ಸ ಮತ್ತು ಆಘಾತಕಾರಿ. ಈ ಘಟನೆಯಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ. ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು ಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ ಕ್ರಿಮಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಇಲ್ಲಿ ಯಾರ ಓಲೈಕೆಯೂ ಇಲ್ಲ. ಯಾರ ತುಷ್ಟೀಕರಣವೂ ಇಲ್ಲ. ಈಗಾಗಲೇ ಈ ಕೃತ್ಯದ ಕುರಿತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಹತ್ಯೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದೇನೆ.
ಬಿಜೆಪಿಯವರು ಈಗಾಗಲೇ ಸುಹಾಸ್ ಪ್ರಕರಣವನ್ನು ರಾಜಕೀಯ ಮಾಡಲು ಹೊರಟಿದ್ದಾರೆ. ಹೆಣದ ಮೇಲೆ ರಾಜಕೀಯ ಮಾಡಲು ಹೊರಟಿರುವ ಬಿಜೆಪಿಯವರಿಗೆ ಒಂದು ಮಾತು. ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ನಿಮ್ಮದು ಕೂಡ ಇದೆ. ದ್ವೇಷ ಹರಡುವ ಮೂಲಕ, ಪ್ರಚೋದಿಸುವ ಮೂಲಕ ಮಂಗಳೂರಿನಲ್ಲಿ ಶಾಂತಿ ಭಂಗ ಮಾಡುವ ದುಷ್ಟ ಕೆಲಸಕ್ಕೆ ಕೈ ಹಾಕಬೇಡಿ. ಜವಾಬ್ದಾರಿಯಿಂದ ವರ್ತಿಸಿ.
ಕೊಲೆಯಾದ ಸುಹಾಸ್ ಕುಟುಂಬಕ್ಕೆ ನ್ಯಾಯ ಕೊಡಿಸುವುದು ನಮ್ಮ ಸರ್ಕಾರದ ಜವಾಬ್ದಾರಿ. ನಾವು ಕೇವಲ ಬಾಯಿ ಮಾತಿನಲ್ಲಿ ಕಠಿಣ ಕ್ರಮದ ಭರವಸೆ ನೀಡುವವರಲ್ಲ. ಬದಲಿಗೆ ಕಾನೂನಿನ ಅನುಸಾರ ಈ ಕೃತ್ಯ ಎಸಗಿದವರಿಗೆ ತಕ್ಕ ಪಾಠ ಕಲಿಸುವವರು. ಇದು ನಿಶ್ಚಿತ. ಅಂತಿಮವಾಗಿ ಭೀಕರ ಕೃತ್ಯದಲ್ಲಿ ಜೀವ ಕಳೆದುಕೊಂಡ ಸುಹಾಸ್ ಶೆಟ್ಟಿ ಆತ್ಮಕ್ಕೆ ಶಾಂತಿ ಬೇಡುತ್ತೇನೆ. ಸುಹಾಸ್ ಅಗಲಿಕೆಯ ನೋವಿನಿಂದ ಬಳಲುತ್ತಿರುವ ಅವರ ಕುಟುಂಬಕ್ಕೆ ನನ್ನ ಕಡೆಯಿಂದ ಮನಃಪೂರ್ವಕ ಸಾಂತ್ವನಗಳು ಎಂದು ದಿನೇಶ್ ಗುಂಡೂರಾವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Incharge Minister Dinesh Gundu Rao has assured that swift and decisive action will be taken against those responsible for the murder of Suhas Shetty. Speaking to the media, Rao emphasized that the government is committed to ensuring justice and will not tolerate criminal activities that threaten public safety.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm