ಬ್ರೇಕಿಂಗ್ ನ್ಯೂಸ್
03-05-25 09:38 pm HK News Desk ಕರ್ನಾಟಕ
ಕಾರ್ಕಳ, ಮೇ 03 : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರ ಜತೆ ಕಾನೂನು-ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಸ್ಲಿಂ ಮುಖಂಡರ ಜತೆಗೆ ಸಭೆ ನಡೆಸುವ ಮೂಲಕ ಪ್ರಕರಣದ ಹಾದಿ ತಪ್ಪಿಸಲು ಮುಂದಾಗಿದ್ದಾರೆ. ಅವಳಿ ಜಿಲ್ಲೆಯಲ್ಲಿ ಸರಕಾರ ಪ್ರಾರಂಭಿಸುವ ಆ್ಯಂಟಿ ಕಮ್ಯುನಲ್ ಫೋರ್ಸ್ ಹಿಂದುತ್ವದ ದಮನಕ್ಕೆ ಬಳಕೆಯಾಗಲಿದೆ ಬಿಜೆಪಿ ರಾಜ್ಯ ನಾಯಕ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಆರೋಪಿಸಿದ್ದಾರೆ.
ಗೃಹಸಚಿವರು ಪೊಲೀಸ್ ಅಧಿಕಾರಿಗಳ ಜತೆಗೆ ಸಭೆ ನಡೆಸುವುದಕ್ಕೆ ಮುನ್ನ ಮುಸ್ಲಿಂ ಮುಖಂಡರ ಜತೆ ಸಭೆ ನಡೆಸಿದ್ದಾರೆ. ಮುಸ್ಲಿಂ ಮುಖಂಡರು ಮೇಜು ಗುದ್ದಿ ಸರಕಾರಕ್ಕೆ ಧಮಕಿ ಹಾಕಿದ್ದಾರೆ. ಸರಕಾರದ ಮೇಲೆ ಸವಾರಿ ಮಾಡುವ ಹಂತಕ್ಕೆ ಇವರ ವರ್ತನೆ ತಲುಪಿದೆ. ಗೃಹ ಸಚಿವರು ಹಂತಕರ ರಾಗಕ್ಕೆ ತಾಳ ಹಾಕಲು ಹೊರಟಿದ್ದಾರೆ. ಗೃಹ ಇಲಾಖೆ ಕರಾವಳಿಯ ಜೆಹಾದಿಗಳ ಕಾಲ ಬುಡದಲ್ಲಿ ಅಡವಿಡುತ್ತೀರಾ ಎಂದು ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
ಆ್ಯಂಟಿ ಕಮ್ಯುನಲ್ ಪೋರ್ಸ್ ರಚನೆ ಮಾಡುವುದರ ಉದ್ದೇಶ ಸ್ಪಷ್ಟವಾಗಿದೆ. ಹಿಂದುತ್ವದ ಪರವಾಗಿರುವ ಧ್ವನಿಯನ್ನು ಪೊಲೀಸ್ ಬಲ ಬಳಸಿ ದಮನಿಸುವುದು ಸರ್ಕಾರದ ಉದ್ದೇಶ. ಸರಕಾರಕ್ಕೆ ಶಾಂತಿಯ ಬದಲು ಪಿಎಫ್ಐ ಉಗ್ರರ ಹಿತಾಸಕ್ತಿ ರಕ್ಷಣೆ ಮಾಡುವುದೆ ಆದ್ಯತೆಯಾಗಿದೆ ಎಂದು ಟೀಕಿಸಿದ್ದಾರೆ.
ನಿನ್ನೆಯಷ್ಟೇ ಸ್ಪೀಕರ್ ಯು.ಟಿ. ಖಾದರ್ ಅವರು ಫಾಜಿಲ್ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ್ದರು. ಆದರೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲಾ ಫಾಜಿಲ್ ಸೋದರನೇ ಈ ಕೊಲೆಗೆ ಐದು ಲಕ್ಷ ರೂ. ಸುಪಾರಿ ನೀಡಿದ್ದಾನೆ ಎಂದು ಹೇಳಿದ್ದಾರೆ. ಹಾಗಾದರೆ ಯಾವುದು ಸತ್ಯ? ಫಾಜಿಲ್ ಸೋದರ ಸುಪಾರಿ ಕೊಟ್ಟಿದ್ದೇ ನಿಜವಾದರೆ ಸ್ಪೀಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.
Karkala MLA Sunil Kumar Slams Anti-Communal Force Concept, Accuses Home Minister of Bowing to Muslim Leaders.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm