ಬ್ರೇಕಿಂಗ್ ನ್ಯೂಸ್
04-05-25 01:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.04: ಸುಹಾಸ್ ಶೆಟ್ಟಿ ಮೇಲೂ ಕೊಲೆ ಸೇರಿದಂತೆ ಐದು ಕೇಸ್ಗಳಿವೆ. ಹೀಗಾಗಿ, ನಾವು ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡಿದರು.
ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದಿಂದ ಭೇಟಿ ನೀಡಿ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೂ ಕೇಸ್ಗಳಿವೆ, ಐದು ಕೇಸ್ಗಳು ಅವರ ಮೇಲಿವೆ. ಹಾಗಾಗಿ, ನಾವು ಭೇಟಿ ಕೊಟ್ಟಿಲ್ಲ. ಆದರೆ, ಸುಹಾಸ್ ಶೆಟ್ಟಿ ಮನೆಗೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ಹಿಂದೂ ಕಾರ್ಯರ್ಕನ ಕೊಲೆ ಪ್ರಕರಣದಲ್ಲಿ ಬಂಧಿತರು ನಿಜವಾದ ಆರೋಪಿಗಳಾ ಎಂಬ ಅನುಮಾನ ವ್ಯಕ್ತವಾಗ್ತಿರುವ ಕುರಿತು ಪ್ರತಿಕ್ರಿಯಿಸಿ, ಯಾರನ್ನೋ ಹೇಗೆ ಆರೋಪಿ ಅಂತ ಹೇಳಲು ಆಗುತ್ತಾ? ಕೊಲೆ ಪ್ರಕರಣದಲ್ಲಿ ಯರ್ಯಾರನ್ನೋ ಬಂಧಿಸಲು ಆಗಲ್ಲ ಎಂದು ತಿಳಿಸಿದರು.
ನಿನ್ನೆ ಮುಸ್ಲಿಂ ಸಮುದಾಯದ ಪ್ರಮುಖರು ಅವರೇ ಬಂದು ನನ್ನ ಭೇಟಿ ಮಾಡಿದ್ರು. ಬರೋರಿಗೆ ಬೇಡ ಅನ್ನೋಕ್ಕಾಗುತ್ತಾ? ಬೇರೆ ಸಮುದಾಯದವರೂ ಬರಬಹುದಿತ್ತು. ಯಾರೂ ಬರಲಿಲ್ಲ ಎಂದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ವಹಿಸಲು ಬಿಜೆಪಿ ಒತ್ತಾಯದ ಬಗ್ಗೆ ಮಾತನಾಡಿ, ಅದು ಬಿಜೆಪಿಯವರ ಅಭಿಪ್ರಾಯ. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡ್ತಾ ಇದೆ. ಎಂಟು ಜನರನ್ನ ಪ್ರಕರಣದಲ್ಲಿ ಬಂಧಿಸಲಾಗಿದೆ. ತನಿಖೆ ಚೆನ್ನಾಗಿ ನಡೆಯುತ್ತಿದೆ ಎಂಬುದು ನಮ್ಮ ಅಭಿಪ್ರಾಯ. ಹಾಗಾಗಿ, ಈ ಪ್ರಕರಣ ಎನ್ಐಎಗೆ ಕೊಟ್ಟಿಲ್ಲ. ಆ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡ್ತೇವೆ. ಬಿಜೆಪಿ ಆರೋಪ ಸರಿಯಲ್ಲ, ಬಿಜೆಪಿಯವರ ಕಾಲದಲ್ಲೂ ಮರ್ಡರ್ಗಳು ಆಗಿವೆ ಎಂದು ಹೇಳಿದರು.
ನಾವು ಎಲ್ಲಾ ರೀತಿಯ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದೇವೆ. ಮರ್ಡರ್ ಆಗುತ್ತೆ ಎಂದು ಕ್ಲೂ ಸಿಕ್ಕಿದರೂ ಅಲರ್ಟ್ ಮಾಡಿ ತಡೆಯುವ ಕೆಲಸ ಆಗ್ತಿದೆ. ಕೊಲೆ ನಂತರವೂ ಆರೋಪಿಗಳನ್ನು ಬಂಧಿಸಲಾಗ್ತಿದೆ. ಎಲ್ಲಾ ಎಚ್ಚರಿಕೆಗಳನ್ನೂ, ಸೂಚನೆಗಳನ್ನ ಎಸ್ಪಿಗಳಿಗೆ ಕೊಟ್ಟಿದ್ದೇವೆ ಎಂದರು.
Why Hand Over Suhas Shetty Murder Case to NIA? Our Police Are Capable, Says Parameshwar, Claims Suhas Faced 5 Cases, Yet No Visits to His Home
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm