ಬ್ರೇಕಿಂಗ್ ನ್ಯೂಸ್
04-05-25 01:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.04: ಸುಹಾಸ್ ಶೆಟ್ಟಿ ಮೇಲೂ ಕೊಲೆ ಸೇರಿದಂತೆ ಐದು ಕೇಸ್ಗಳಿವೆ. ಹೀಗಾಗಿ, ನಾವು ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡಿದರು.
ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದಿಂದ ಭೇಟಿ ನೀಡಿ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೂ ಕೇಸ್ಗಳಿವೆ, ಐದು ಕೇಸ್ಗಳು ಅವರ ಮೇಲಿವೆ. ಹಾಗಾಗಿ, ನಾವು ಭೇಟಿ ಕೊಟ್ಟಿಲ್ಲ. ಆದರೆ, ಸುಹಾಸ್ ಶೆಟ್ಟಿ ಮನೆಗೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ಹಿಂದೂ ಕಾರ್ಯರ್ಕನ ಕೊಲೆ ಪ್ರಕರಣದಲ್ಲಿ ಬಂಧಿತರು ನಿಜವಾದ ಆರೋಪಿಗಳಾ ಎಂಬ ಅನುಮಾನ ವ್ಯಕ್ತವಾಗ್ತಿರುವ ಕುರಿತು ಪ್ರತಿಕ್ರಿಯಿಸಿ, ಯಾರನ್ನೋ ಹೇಗೆ ಆರೋಪಿ ಅಂತ ಹೇಳಲು ಆಗುತ್ತಾ? ಕೊಲೆ ಪ್ರಕರಣದಲ್ಲಿ ಯರ್ಯಾರನ್ನೋ ಬಂಧಿಸಲು ಆಗಲ್ಲ ಎಂದು ತಿಳಿಸಿದರು.
ನಿನ್ನೆ ಮುಸ್ಲಿಂ ಸಮುದಾಯದ ಪ್ರಮುಖರು ಅವರೇ ಬಂದು ನನ್ನ ಭೇಟಿ ಮಾಡಿದ್ರು. ಬರೋರಿಗೆ ಬೇಡ ಅನ್ನೋಕ್ಕಾಗುತ್ತಾ? ಬೇರೆ ಸಮುದಾಯದವರೂ ಬರಬಹುದಿತ್ತು. ಯಾರೂ ಬರಲಿಲ್ಲ ಎಂದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ವಹಿಸಲು ಬಿಜೆಪಿ ಒತ್ತಾಯದ ಬಗ್ಗೆ ಮಾತನಾಡಿ, ಅದು ಬಿಜೆಪಿಯವರ ಅಭಿಪ್ರಾಯ. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡ್ತಾ ಇದೆ. ಎಂಟು ಜನರನ್ನ ಪ್ರಕರಣದಲ್ಲಿ ಬಂಧಿಸಲಾಗಿದೆ. ತನಿಖೆ ಚೆನ್ನಾಗಿ ನಡೆಯುತ್ತಿದೆ ಎಂಬುದು ನಮ್ಮ ಅಭಿಪ್ರಾಯ. ಹಾಗಾಗಿ, ಈ ಪ್ರಕರಣ ಎನ್ಐಎಗೆ ಕೊಟ್ಟಿಲ್ಲ. ಆ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡ್ತೇವೆ. ಬಿಜೆಪಿ ಆರೋಪ ಸರಿಯಲ್ಲ, ಬಿಜೆಪಿಯವರ ಕಾಲದಲ್ಲೂ ಮರ್ಡರ್ಗಳು ಆಗಿವೆ ಎಂದು ಹೇಳಿದರು.
ನಾವು ಎಲ್ಲಾ ರೀತಿಯ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದೇವೆ. ಮರ್ಡರ್ ಆಗುತ್ತೆ ಎಂದು ಕ್ಲೂ ಸಿಕ್ಕಿದರೂ ಅಲರ್ಟ್ ಮಾಡಿ ತಡೆಯುವ ಕೆಲಸ ಆಗ್ತಿದೆ. ಕೊಲೆ ನಂತರವೂ ಆರೋಪಿಗಳನ್ನು ಬಂಧಿಸಲಾಗ್ತಿದೆ. ಎಲ್ಲಾ ಎಚ್ಚರಿಕೆಗಳನ್ನೂ, ಸೂಚನೆಗಳನ್ನ ಎಸ್ಪಿಗಳಿಗೆ ಕೊಟ್ಟಿದ್ದೇವೆ ಎಂದರು.
Why Hand Over Suhas Shetty Murder Case to NIA? Our Police Are Capable, Says Parameshwar, Claims Suhas Faced 5 Cases, Yet No Visits to His Home
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm