ಬ್ರೇಕಿಂಗ್ ನ್ಯೂಸ್
05-05-25 01:30 pm HK News Desk ಕರ್ನಾಟಕ
ಹಾಸನ, ಮೇ 05: ಹೆಡ್ ಕಾನ್ಸ್ಟೇಬಲ್ನಿಂದಲೇ ಮೀಟರ್ ಬಡ್ಡಿ ದಂಧೆ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯಲ್ಲಿ ನಡೆದಿದೆ. ಬಾಳ್ಳುಪೇಟೆಯ ಮೊಹಮ್ಮದ್ ತನ್ಜೀರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಹಾಸನ ಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ಸ್ಟೇಬಲ್ ಅರುಣ್ ವಿರುದ್ಧ ಮೀಟರ್ ಬಡ್ಡಿ ದಂಧೆ ಆರೋಪ ಕೇಳಿಬಂದಿದೆ.
80 ಸಾವಿರ ರೂ.ಗೆ 2 ಲಕ್ಷ ರೂ ಬಡ್ಡಿ ;
ಮೊಹಮ್ಮದ್ ತನ್ಜೀರ್ 2 ವರ್ಷದ ಹಿಂದೆ ಕೋಳಿ ಅಂಗಡಿ ಮಾಡಲು ಹೆಡ್ ಕಾನ್ಸ್ಟೇಬಲ್ ಅರುಣ್ ಬಳಿ ಸಾಲ ಪಡೆದಿದ್ದರು. 80 ಸಾವಿರ ರೂ ಹಣಕ್ಕೆ ವಾರಕ್ಕೆ 7,800 ರೂ. ಬಡ್ಡಿ ವಸೂಲಿ ಮಾಡಲಾಗುತ್ತಿತ್ತು. ತಿಂಗಳಿಗೆ 28 ಸಾವಿರ ರೂ. ಬಡ್ಡಿ ಕಟ್ಟಿ ತನ್ಜೀರ್ ಹೈರಾಣಾಗಿದ್ದರು. 80 ಸಾವಿರ ರೂ.ಗೆ 2 ಲಕ್ಷ ರೂ ಬಡ್ಡಿ ಕಟ್ಟಿದ್ರೂ ಬಿಡದೆ ಕಿರುಕುಳ ನೀಡುತ್ತಿರುವುದಾಗಿ ತನ್ಜೀರ್ ಆರೋಪಿಸಿದ್ದಾರೆ.
ಅರುಣ್ಗೆ ಬಡ್ಡಿ ಕಟ್ಟುವುದಕ್ಕಾಗಿ ತನ್ಜೀರ್ ವಕೀಲ ದುಶ್ಯತ್ ಸೇರಿ ಹಲವರಿಂದ ಸಾಲ ಪಡೆದಿದ್ದರು. ಎರಡು ವಾರದಿಂದ ಬಡ್ಡಿ ಕಟ್ಟದಿದ್ದಕ್ಕೆ ತನ್ಜೀರ್ಗೆ ಕಿರುಕುಳ ನೀಡಲಾಗಿದೆ. ಒಟ್ಟು 5 ಲಕ್ಷ ರೂ. ಸಾಲ ಮಾಡಿದ್ದ ತನ್ಜೀರ್, ಸಾಲಕ್ಕೆ ಬಡ್ಡಿ ಕಟ್ಟಲಾಗದೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ತನ್ಜೀರ್ಗೆ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮೀಟರ್ ಬಡ್ಡಿ ಆರೋಪ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.
ರಾಜ್ಯ ಸರ್ಕಾರ ಇತ್ತೀಚೆಗೆ ಸುಗ್ರೀವಾಜ್ಞೆ ಹೊರಡಿಸಿದರು ಕೂಡ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ಗಳ ಕಿರುಕುಳ ಮಾತ್ರ ಇನ್ನೂ ನಿಂತಿಲ್ಲ. ಅದೆಷ್ಟೋ ಬಡ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಹಾವೇರಿ ಜಿಲ್ಲೆಯಲ್ಲಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು.
Hassan Head Constable Runs Loan Shark Racket, Man Attempts Suicide Over Harassment by police constable Arun, who works at the SP office. Tanveer is the man who attempted suicide.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm