ಬ್ರೇಕಿಂಗ್ ನ್ಯೂಸ್
05-05-25 01:30 pm HK News Desk ಕರ್ನಾಟಕ
ಹಾಸನ, ಮೇ 05: ಹೆಡ್ ಕಾನ್ಸ್ಟೇಬಲ್ನಿಂದಲೇ ಮೀಟರ್ ಬಡ್ಡಿ ದಂಧೆ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯಲ್ಲಿ ನಡೆದಿದೆ. ಬಾಳ್ಳುಪೇಟೆಯ ಮೊಹಮ್ಮದ್ ತನ್ಜೀರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಹಾಸನ ಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ಸ್ಟೇಬಲ್ ಅರುಣ್ ವಿರುದ್ಧ ಮೀಟರ್ ಬಡ್ಡಿ ದಂಧೆ ಆರೋಪ ಕೇಳಿಬಂದಿದೆ.
80 ಸಾವಿರ ರೂ.ಗೆ 2 ಲಕ್ಷ ರೂ ಬಡ್ಡಿ ;
ಮೊಹಮ್ಮದ್ ತನ್ಜೀರ್ 2 ವರ್ಷದ ಹಿಂದೆ ಕೋಳಿ ಅಂಗಡಿ ಮಾಡಲು ಹೆಡ್ ಕಾನ್ಸ್ಟೇಬಲ್ ಅರುಣ್ ಬಳಿ ಸಾಲ ಪಡೆದಿದ್ದರು. 80 ಸಾವಿರ ರೂ ಹಣಕ್ಕೆ ವಾರಕ್ಕೆ 7,800 ರೂ. ಬಡ್ಡಿ ವಸೂಲಿ ಮಾಡಲಾಗುತ್ತಿತ್ತು. ತಿಂಗಳಿಗೆ 28 ಸಾವಿರ ರೂ. ಬಡ್ಡಿ ಕಟ್ಟಿ ತನ್ಜೀರ್ ಹೈರಾಣಾಗಿದ್ದರು. 80 ಸಾವಿರ ರೂ.ಗೆ 2 ಲಕ್ಷ ರೂ ಬಡ್ಡಿ ಕಟ್ಟಿದ್ರೂ ಬಿಡದೆ ಕಿರುಕುಳ ನೀಡುತ್ತಿರುವುದಾಗಿ ತನ್ಜೀರ್ ಆರೋಪಿಸಿದ್ದಾರೆ.
ಅರುಣ್ಗೆ ಬಡ್ಡಿ ಕಟ್ಟುವುದಕ್ಕಾಗಿ ತನ್ಜೀರ್ ವಕೀಲ ದುಶ್ಯತ್ ಸೇರಿ ಹಲವರಿಂದ ಸಾಲ ಪಡೆದಿದ್ದರು. ಎರಡು ವಾರದಿಂದ ಬಡ್ಡಿ ಕಟ್ಟದಿದ್ದಕ್ಕೆ ತನ್ಜೀರ್ಗೆ ಕಿರುಕುಳ ನೀಡಲಾಗಿದೆ. ಒಟ್ಟು 5 ಲಕ್ಷ ರೂ. ಸಾಲ ಮಾಡಿದ್ದ ತನ್ಜೀರ್, ಸಾಲಕ್ಕೆ ಬಡ್ಡಿ ಕಟ್ಟಲಾಗದೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ತನ್ಜೀರ್ಗೆ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮೀಟರ್ ಬಡ್ಡಿ ಆರೋಪ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.
ರಾಜ್ಯ ಸರ್ಕಾರ ಇತ್ತೀಚೆಗೆ ಸುಗ್ರೀವಾಜ್ಞೆ ಹೊರಡಿಸಿದರು ಕೂಡ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ಗಳ ಕಿರುಕುಳ ಮಾತ್ರ ಇನ್ನೂ ನಿಂತಿಲ್ಲ. ಅದೆಷ್ಟೋ ಬಡ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಹಾವೇರಿ ಜಿಲ್ಲೆಯಲ್ಲಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು.
Hassan Head Constable Runs Loan Shark Racket, Man Attempts Suicide Over Harassment by police constable Arun, who works at the SP office. Tanveer is the man who attempted suicide.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm