ಬ್ರೇಕಿಂಗ್ ನ್ಯೂಸ್
08-05-25 12:23 pm HK News Desk ಕರ್ನಾಟಕ
ಕಾರವಾರ, ಮೇ 7 : ಪಾಕಿಸ್ತಾನ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಭಾರತದ ಅತಿದೊಡ್ಡ ನೌಕಾನೆಲೆ ಎನಿಸಿರುವ ಕಾರವಾರದ ಕದಂಬ ನೌಕಾನೆಲೆ ಮತ್ತು ಕಾರವಾರ ಬಂದರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಕಾರವಾರದ ಅರಗಾದಲ್ಲಿರುವ ಕದಂಬ ನೌಕಾ ನೆಲೆಯಲ್ಲಿ ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಇದೇ ವೇಳೆ, ಅನ್ಯ ದೇಶದಿಂದ ಬರುವ ಸರಕು ಸಾಗಾಟ ಹಡಗಿನಲ್ಲಿ ಚೀನಾ, ಪಾಕಿಸ್ತಾನ ಸಿಬ್ಬಂದಿಗಳಿದ್ದರೆ ಅಂತಹ ಹಡಗುಗಳಿಗೆ ಬಂದರಿನಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ.
ಯಾವುದೇ ದೇಶದ ಹಡಗಿನಲ್ಲಿ ಪಾಕಿಸ್ತಾನ, ಚೀನಾ ಸಿಬ್ಬಂದಿ ಇದ್ದರೆ ಅಂತಹ ಹಡಗುಗಳಿಗೆ ಕಾರವಾರ ಬಂದರಿನಲ್ಲಿ ನಿಲುಗಡೆಗೆ ನಿಷೇಧ ವಿಧಿಸಲಾಗಿದೆ. ಮೀನುಗಾರಿಕಾ ಬಂದರಿಗೆ ಬರುವ ಬೋಟ್, ಹಡಗುಗಳಲ್ಲಿ ಪೊಲೀಸರು ತೀವ್ರ ತಪಾಸಣೆ ಕೈಗೊಂಡಿದ್ದಾರೆ. ಎಲ್ಲ ಮಾದರಿಯ ಮೀನುಗಾರಿಕಾ ಬೋಟ್ ಗಳನ್ನೂ ಅಪರಿಚಿತ ವ್ಯಕ್ತಿಗಳಿದ್ದರೆ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಇದಲ್ಲದೆ, ಸಮುದ್ರದಲ್ಲಿ 12 ನಾಟಿಕಲ್ ಮೈಲ್ ದೂರದಿಂದ ಹೊರಕ್ಕೆ ಹೋಗದಂತೆ ಆಳ ಸಮುದ್ರ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ತೀರದಿಂದ 200 ಕಿಮೀ ದೂರದ ನಂತರ ಅಂತಾರಾಷ್ಟ್ರೀಯ ಮಟ್ಟದ ಜಲಸಂಚಾರ ಇರಲಿದ್ದು ಅಲ್ಲಿ ಪಾಕಿಸ್ತಾನ ಸೇರಿದಂತೆ ಯಾವುದೇ ದೇಶದ ಹಡಗು, ಬೋಟ್ಗಳು ಸಂಚರಿಸಬಹುದು. ಪಾಕಿಗಳ ಕೈಗೆ ಸಿಕ್ಕಿಬಿದ್ದು ಒದ್ದಾಡುವ ಬದಲು ಅಲ್ಲಿ ವರೆಗೆ ಹೋಗುವುದನ್ನು ತಪ್ಪಿಸಿ ಎಂದು ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ಸಾಮಾನ್ಯವಾಗಿ ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳಿದವರು 150- 200 ಕಿಮೀ ಗಡಿರೇಖೆಯ ವರೆಗೂ ಸಂಚಾರ ಮಾಡುತ್ತಾರೆ. ಸದ್ಯಕ್ಕೆ ಪಾಕಿಸ್ತಾನದ ಜೊತೆಗೆ ಸಂಘರ್ಷ ವಾತಾವರಣ ಇರುವುದರಿಂದ ಭಾರತದ ಮೀನುಗಾರರು ಅಲ್ಲಿ ವರೆಗೂ ತೆರಳದಂತೆ ಮೀನುಗಾರಿಕಾ ಇಲಾಖೆ ಸೂಚನೆ ನೀಡಿದೆ.
High Alert in Karwar, Fishermen Barred from Going Beyond 12 Nautical Miles; Foreign Vessels with Chinese or Pakistani Crew Restricted.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm