ಬ್ರೇಕಿಂಗ್ ನ್ಯೂಸ್
08-05-25 12:23 pm HK News Desk ಕರ್ನಾಟಕ
ಕಾರವಾರ, ಮೇ 7 : ಪಾಕಿಸ್ತಾನ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಭಾರತದ ಅತಿದೊಡ್ಡ ನೌಕಾನೆಲೆ ಎನಿಸಿರುವ ಕಾರವಾರದ ಕದಂಬ ನೌಕಾನೆಲೆ ಮತ್ತು ಕಾರವಾರ ಬಂದರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಕಾರವಾರದ ಅರಗಾದಲ್ಲಿರುವ ಕದಂಬ ನೌಕಾ ನೆಲೆಯಲ್ಲಿ ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಇದೇ ವೇಳೆ, ಅನ್ಯ ದೇಶದಿಂದ ಬರುವ ಸರಕು ಸಾಗಾಟ ಹಡಗಿನಲ್ಲಿ ಚೀನಾ, ಪಾಕಿಸ್ತಾನ ಸಿಬ್ಬಂದಿಗಳಿದ್ದರೆ ಅಂತಹ ಹಡಗುಗಳಿಗೆ ಬಂದರಿನಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ.
ಯಾವುದೇ ದೇಶದ ಹಡಗಿನಲ್ಲಿ ಪಾಕಿಸ್ತಾನ, ಚೀನಾ ಸಿಬ್ಬಂದಿ ಇದ್ದರೆ ಅಂತಹ ಹಡಗುಗಳಿಗೆ ಕಾರವಾರ ಬಂದರಿನಲ್ಲಿ ನಿಲುಗಡೆಗೆ ನಿಷೇಧ ವಿಧಿಸಲಾಗಿದೆ. ಮೀನುಗಾರಿಕಾ ಬಂದರಿಗೆ ಬರುವ ಬೋಟ್, ಹಡಗುಗಳಲ್ಲಿ ಪೊಲೀಸರು ತೀವ್ರ ತಪಾಸಣೆ ಕೈಗೊಂಡಿದ್ದಾರೆ. ಎಲ್ಲ ಮಾದರಿಯ ಮೀನುಗಾರಿಕಾ ಬೋಟ್ ಗಳನ್ನೂ ಅಪರಿಚಿತ ವ್ಯಕ್ತಿಗಳಿದ್ದರೆ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಇದಲ್ಲದೆ, ಸಮುದ್ರದಲ್ಲಿ 12 ನಾಟಿಕಲ್ ಮೈಲ್ ದೂರದಿಂದ ಹೊರಕ್ಕೆ ಹೋಗದಂತೆ ಆಳ ಸಮುದ್ರ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ತೀರದಿಂದ 200 ಕಿಮೀ ದೂರದ ನಂತರ ಅಂತಾರಾಷ್ಟ್ರೀಯ ಮಟ್ಟದ ಜಲಸಂಚಾರ ಇರಲಿದ್ದು ಅಲ್ಲಿ ಪಾಕಿಸ್ತಾನ ಸೇರಿದಂತೆ ಯಾವುದೇ ದೇಶದ ಹಡಗು, ಬೋಟ್ಗಳು ಸಂಚರಿಸಬಹುದು. ಪಾಕಿಗಳ ಕೈಗೆ ಸಿಕ್ಕಿಬಿದ್ದು ಒದ್ದಾಡುವ ಬದಲು ಅಲ್ಲಿ ವರೆಗೆ ಹೋಗುವುದನ್ನು ತಪ್ಪಿಸಿ ಎಂದು ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ಸಾಮಾನ್ಯವಾಗಿ ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳಿದವರು 150- 200 ಕಿಮೀ ಗಡಿರೇಖೆಯ ವರೆಗೂ ಸಂಚಾರ ಮಾಡುತ್ತಾರೆ. ಸದ್ಯಕ್ಕೆ ಪಾಕಿಸ್ತಾನದ ಜೊತೆಗೆ ಸಂಘರ್ಷ ವಾತಾವರಣ ಇರುವುದರಿಂದ ಭಾರತದ ಮೀನುಗಾರರು ಅಲ್ಲಿ ವರೆಗೂ ತೆರಳದಂತೆ ಮೀನುಗಾರಿಕಾ ಇಲಾಖೆ ಸೂಚನೆ ನೀಡಿದೆ.
High Alert in Karwar, Fishermen Barred from Going Beyond 12 Nautical Miles; Foreign Vessels with Chinese or Pakistani Crew Restricted.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm