ಬ್ರೇಕಿಂಗ್ ನ್ಯೂಸ್
08-05-25 11:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8 : ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ ಏಳು ವರ್ಷಗಳ ಶಿಕ್ಷೆ ಪ್ರಕಟವಾದ ಬೆನ್ನಲ್ಲೇ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹ ಮಾಡಲಾಗಿದೆ. ಈ ಬಗ್ಗೆ ವಿಧಾನಸಭೆ ಸಚಿವಾಲಯ ಆದೇಶ ಹೊರಡಿಸಿದೆ.
ಕೋರ್ಟ್ ತೀರ್ಪು ಪ್ರಕಟವಾದ ಮೇ 6 ರಿಂದ ಅನ್ವಯವಾಗುವಂತೆ ಜನಾರ್ದನ ರೆಡ್ಡಿ ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ರೆಡ್ಡಿ ವಿಧಾನಸಭೆಗೆ ಆಯ್ಕೆಯಾಗಿದ್ದು ಅಲ್ಲಿನ ಶಾಸಕ ಸ್ಥಾನ ಖಾಲಿಯಾದಂತಾಗಿದೆ.
ಸಂವಿಧಾನದ 191 (1) ವಿಧಿ ಅನ್ವಯ ಹಾಗೂ ಜನತಾ ಪ್ರಾತಿನಿಧ್ಯ ಕಾಯಿದೆ 1951 ರ ಸೆಕ್ಷನ್ 8 ರಡಿ ಜನಾರ್ದನ ರೆಡ್ಡಿ ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಶಿಕ್ಷೆಯ ತೀರ್ಪಿಗೆ ಮೇಲಿನ ಕೋರ್ಟ್ ತಡೆಯಾಜ್ಞೆ ನೀಡದ ಹೊರತು ಮುಂದಿನ 6 ವರ್ಷಗಳ ಅವಧಿಗೆ ಅನರ್ಹತೆ ಜಾರಿಯಲ್ಲಿ ಇರಲಿದೆ. ಇದರೊಂದಿಗೆ ಕರ್ನಾಟಕ ವಿಧಾನಸಭೆಯಲ್ಲಿ ಒಂದು ಸ್ಥಾನ ತೆರವಾದಂತಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯವು ಶಾಸಕ ಜನಾರ್ದನ ರೆಡ್ಡಿ ಅವರಿಗೆ ಏಳು ವರ್ಷಗಳ ಶಿಕ್ಷೆ ವಿಧಿಸಿತ್ತು. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದ ಖಾದರ್, ಕೋರ್ಟ್ ತೀರ್ಪು ಬಗ್ಗೆ ಪತ್ರಿಕೆಗಳ ಮೂಲಕ ಗಮನಿಸಿದ್ದೇನೆ. ನ್ಯಾಯಾಲಯದ ಅಧಿಕೃತ ಆದೇಶ ಪ್ರತಿ ತಲುಪಿದ ಬಳಿಕ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭಾಧ್ಯಕ್ಷ ಯುಟಿ ಖಾದರ್ ಹೇಳಿದ್ದರು.
Former Minister and BJP leader, Gali Janardhana Reddy, representing Gangavati in the Legislative Assembly, has been disqualified from the House following his conviction by the court of Principal Special Judge for CBI cases in Hyderabad.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm