ಬ್ರೇಕಿಂಗ್ ನ್ಯೂಸ್
13-05-25 01:14 pm HK News Desk ಕರ್ನಾಟಕ
ವಿಜಯಪುರ, ಮೇ 13 : ಕದನ ಘೋಷಣೆ ಮಾಡಿದಾಗ ನಮ್ಮ ಸಂಪೂರ್ಣ ಬೆಂಬಲ ಕೊಟ್ಟಿದ್ದೆವು. ಪಾಕಿಸ್ತಾನ ಇನ್ನೊಮ್ಮೆ ಇಂತಹ ದುಸ್ಸಾಹಸಕ್ಕೆ ಕೈ ಹಾಕಬಾರದು, ಹಾಗೆ ಪಾಠ ಕಲಿಸಬೇಕು ಎಂದು ಬೆಂಬಲಿಸಿದ್ದೇವು. ಯಾವ ಉದ್ದೇಶ ಗುರಿ ಇಟ್ಟುಕೊಂಡು ಕದನ ಆರಂಭ ಮಾಡಿದ್ದೆವೋ ಆ ಗುರಿ ಈಡೇರಿತಾ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಪಾಕ್ ಜೊತೆಗೆ ಕದನ ವಿರಾಮ ವಿಚಾರದಲ್ಲಿ ವಿಜಯಪುರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪಾಕಿಸ್ತಾನಕ್ಕೆ ಪಾಠ ಕಲಿಸಬೇಕು ಅಂದುಕೊಂಡಿದ್ದೆವೋ ಆ ಪಾಠ ಈಡೇರಿತಾ ಎಂಬ ಪ್ರಶ್ನೆ ಇದೆ. ಮೂರ್ನಾಲ್ಕು ದಿನ ಪ್ರಯತ್ನ ಮಾಡಿ ಅಲ್ಲಿಗೆ ಬಿಟ್ಟರೆ ಪಾಕಿಸ್ತಾನಕ್ಕೆ ಇನ್ನಷ್ಟು ಇಂಬು ಕೊಟ್ಟಂತಾಗುತ್ತದೆ ಎಂಬುದು ಅನುಮಾನ ಹುಟ್ಟಲು ಶುರುವಾಗುತ್ತೆ. ಸ್ಪಷ್ಟವಾದ ಉತ್ತರ ಇಲ್ಲದ ಪ್ರಶ್ನೆ ಎಂದರೆ ನಾವು ಕದನ ಮಾಡುವುದು ಸರಿ. ಅರ್ಧಕ್ಕೆ ನಿಲ್ಲಿಸುವುದು ಏಕೆನ್ನುವುದಕ್ಕೆ ಉತ್ತರ ಇಲ್ಲ.
ನಮ್ಮ ಆಂತರಿಕ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಬೆರಳು ತೋರಿಸುತ್ತಾರೆ. ಅಮೇರಿಕಾದವರು ಹೇಳಿದು ಅಂತೇಳಿ ಯುದ್ದ ನಿಲ್ಲಿಸುವುದಾ..? ಅಮೇರಿಕಾ ನಮ್ಮ ಆಂತರಿಕ ವಿಚಾರ ತೀರ್ಮಾನ ಮಾಡುವುದಾದರೆ ನಮ್ಮ ಸಾರ್ವಭೌಮತ್ವದ ವಿಷಯ ಏನು..?
ಕಾಶ್ಮೀರದ ವಿಚಾರದಲ್ಲಿ ಅಮೇರಿಕಾದವರು ಮದ್ಯಸ್ಥಿಕೆ ವಹಿಸುತ್ತೇವೆ ಅಂತಾರೆ. ಇದಕ್ಕಿಂತ ಭಾರತಕ್ಕೆ ದೊಡ್ಡ ಹಿನ್ನಡೆಯಿಲ್ಲ. ಇದು ಆಂತರಿಕ ವಿಚಾರ, ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಬೇರೆ ದೇಶದವರು ಬಂದು ನಮ್ಮ ಆಂತರಿಕ ವಿಚಾರದಲ್ಲಿ ನ್ಯಾಯ ಪಂಚಾಯತಿ ಮಾಡಿದರೆ ಅಲ್ಲಿಗೆ ಕಾಶ್ಮೀರ ಸಮಸ್ಯೆ ಮುಗಿದು ಹೋಗುತ್ತಾ ಅಥವಾ ಮರಳಿ ಸಮಸ್ಯೆ ಆರಂಭ ಆಗುತ್ತಾ....? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲದಂತೆ ಆಗಿದೆ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಸ್ಪಷ್ಟ ಉತ್ತರ ಕೊಡಬೇಕು ಎಂದು ಸಚಿವ ಕೃಷ್ಣಭೈರೇಗೌಡ ಆಗ್ರಹಿಸಿದ್ದಾರೆ.
After going to war, there should have been a logical end. Instead, how about stopping the conflict as soon as America says so? Minister Krishna Byre Gowda has questioned the central government whether all our objectives have been fulfilled due to this ceasefire.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm