ಬ್ರೇಕಿಂಗ್ ನ್ಯೂಸ್
13-05-25 09:37 pm HK News Desk ಕರ್ನಾಟಕ
ದಾವಣಗೆರೆ, ಮೇ 13 : ಕರ್ತವ್ಯ ನಿಮಿತ್ತ ಲಾರಿ ನಿಲ್ಲಿಸಲು ಯತ್ನಿಸಿದ ಪೊಲೀಸ್ ಸಿಬ್ಬಂದಿ ಮೇಲೆ ಚಾಲಕ ಲಾರಿ ಹತ್ತಿಸಿದ ಪರಿಣಾಮ ಪೊಲೀಸ್ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳ ಟೋಲ್ ಗೇಟ್ ಬಳಿ ನಡೆದಿದೆ.
ಡಿಎಆರ್ ಕಾನ್ಸ್ಟೇಬಲ್ ರಾಮಪ್ಪ ಪೂಜಾರ್ ಸಾವನ್ನಪ್ಪಿದ ಸಿಬ್ಬಂದಿ. ಹೆಬ್ಬಾಳ ಟೋಲ್ ಗೇಟ್ ಬಳಿ ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ರಾಮಪ್ಪ ಪೂಜಾರ್ ಸಂಚಾರಿ ಪೊಲೀಸರೊಂದಿಗೆ ಲಾರಿ ನಿಲ್ಲಿಸಲು ಯತ್ನಿಸಿದ್ದಾರೆ. ಈ ವೇಳೆ, ಅತಿ ವೇಗದಲ್ಲಿ ಇದ್ದ ಲಾರಿ ಸಿಬ್ಬಂದಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ, ಚಾಲಕನನ್ನು ಹಿಡಿಯವ ಪ್ರಯತ್ನ ನಡೆಸಲಾಯಿತಾದರೂ ಆತ ಪರಾರಿಯಾಗಿದ್ದ. ಘಟನೆ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಮಾಹಿತಿ ಬೆನ್ನಲ್ಲೇ ಎಸ್ಪಿ ಉಮಾಪ್ರಶಾಂತ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳವಾಗಿರುವ ಟೋಲ್ ಗೇಟ್ ಬಳಿ ಯಾವುದೇ ಸಿಸಿಟಿವಿ ಕ್ಯಾಮರಾ ಅಳವಡಿಸದೇ ಇರುವ ಹಿನ್ನಲೆ ಎಸ್ಪಿ ಅಲ್ಲಿನ ಟೋಲ್ ಆಡಳಿತ ಹಾಗೂ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.
ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಮೃತರ ದೇಹ ಇಡಲಾಗಿದ್ದು, ಸ್ಥಳಕ್ಕೆ ಐಜಿಪಿ ರವಿಕಾಂತೇ ಗೌಡ ಅವರು ಭೇಟಿ ನೀಡಿದರು. ಮೃತ ಪೊಲೀಸ್ ಸಿಬ್ಬಂದಿಯ ಕುಟುಂಬಕ್ಕೆ ಧೈರ್ಯ ನೀಡಿ ಸಾಂತ್ವನ ಹೇಳಿದರು.
ಈ ವೇಳೆ ಮಾತನಾಡಿದ ಎಸ್ಪಿ ಉಮಾಪ್ರಶಾಂತ್, ಘಟನಾ ಸ್ಥಳಕ್ಕೆ ಭೇಟಿ ನೀಡಲಾಗಿದೆ. ಸಿಸಿಟಿವಿ ಕ್ಯಾಮರಾ ಅಳವಡಿಸದೆ ಇರುವುದರಿಂದ ಸಮಸ್ಯೆ ಆಗಿದೆ. ಈ ಕುರಿತು ಪರಿಶೀಲನೆ ನಡೆಸಿ ಮಾಹಿತಿ ಕೊಡುವಂತೆ ಎಚ್ಚರಿಕೆ ನೀಡಲಾಗಿದೆ ಎಂದರು.
ಚಾಲಕನ ಬಂಧನ:
ಅತಿವೇಗ ಮತ್ತು ನಿರ್ಲಕ್ಷ್ಯತನದ ಮೂಲಕ ಲಾರಿ ಚಲಾಯಿಸಿ ಪೊಲೀಸ್ ಸಿಬ್ಬಂದಿ ಸಾವಿಗೆ ಕಾರಣನಾದ ಆರೋಪಿಯನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ.
A police constable was killed on duty after being hit by a speeding truck he was attempting to stop near the Hebbalu toll gate in Davanagere district on Monday. The truck driver reportedly drove straight into the officer and fled the scene.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm