ಬ್ರೇಕಿಂಗ್ ನ್ಯೂಸ್
13-05-25 09:50 pm HK News Desk ಕರ್ನಾಟಕ
ಹಾಸನ, ಮೇ 13 : ಅಪ್ಪನ ಎದುರೇ ಮಗಳನ್ನು ಯುವಕರ ಗುಂಪೊಂದು ಕಿಡ್ನಾಪ್ ಮಾಡಿದ್ದು ಮಗಳನ್ನು ಉಳಿಸಿಕೊಳ್ಳಲು ತಂದೆ ಪರದಾಟ ನಡೆಸಿದ ಘಟನೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ತಂದೆ, ಮಗಳು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರು ಯುವಕರು ಬಂದು ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ವೇಳೆ, ಹುಡುಗಿ ತಂದೆ ಕಾರನ್ನು ತಡೆದು ನಿಲ್ಲಿಸಲು ಹೋಗಿ ಡೋರ್ನಲ್ಲಿ ನೇತಾಡುತ್ತಿದ್ದರೂ ಬಿಡದ ದುರುಳರು ರಸ್ತೆಯುದ್ದಕ್ಕೂ ಎಳೆದೊಯ್ದಿದ್ದಾರೆ.
ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ತಂದೆ, ಮಗಳು ನಡೆದುಕೊಂಡು ಹೋಗುತ್ತಿದ್ದಾಗ ಅಡ್ಡಹಾಕಿದ ಯುವಕರು ಕೃತ್ಯ ಎಸಗಿದ್ದು 200 ಮೀಟರ್ ದೂರದ ವರೆಗೂ ತಂದೆಯನ್ನು ಎಳೆದೊಯ್ದಿದ್ದಾರೆ. ಕೊನೆಗೆ ಕಾರಿನಿಂದ ನೇತಾಡುತ್ತಲೇ ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತಂದೆ ಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಮೂಲಗಳ ಪ್ರಕಾರ, ಬೇಲೂರು ತಾಲ್ಲೂಕಿನ ಮಲಸಾವರ ಗ್ರಾಮದ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಕಿಡ್ನಾಪ್ ಆದ ಯುವತಿ ಎನ್ನಲಾಗಿದೆ. ಈಕೆಯನ್ನು ಚನ್ನರಾಯಪಟ್ಟಣ ಮೂಲದ ಪ್ರಜ್ವಲ್ (25) ಎಂಬ ಯುವಕ ಪ್ರೀತಿಸಿ ಎರಡು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದ. ಆದರೆ ಅದ್ಯಾವುದೋ ಗಲಾಟೆಯಲ್ಲಿ ಯುವತಿ ಗಂಡನನ್ನು ಬಿಟ್ಟು ಬಂದಿದ್ದು ಮಂಗಳವಾರ ಸಂಜೆ ತಂದೆ ಜೊತೆ ಅರೇಹಳ್ಳಿಗೆ ಬಂದಿದ್ದಳು. ಈ ವೇಳೆ, ಪ್ರಜ್ವಲ್ ಹಾಗೂ ಆತನ ಸ್ನೇಹಿತರು ಅಡ್ಡಹಾಕಿ ಯುವತಿಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ.
Daughter Abducted in Front of Father, Shocking Incident in Belur at Hassan as Goons Drag Father into Car While He Fights to Save He
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm