ಬ್ರೇಕಿಂಗ್ ನ್ಯೂಸ್
14-05-25 05:16 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14 : ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದ ಆರೋಪಿಯನ್ನು ವೈಟ್ಫೀಲ್ಡ್ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಛತ್ತೀಸ್ಗಢ ಮೂಲದ ಶುಭಾಂಶು ಶುಕ್ಲಾ (26) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇ. 9ರಂದು ವೈಟ್ಫೀಲ್ಡ್ನ ಪ್ರಶಾಂತ್ ಲೇಔಟ್ನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಆರೋಪ ಕೇಳಿಬಂದಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತಿಯಾಗಿ ಮೇ 7ರಂದು ಭಾರತೀಯ ರಕ್ಷಣಾ ಪಡೆಗಳು 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಮೂಲಕ ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳನ್ನು ನಾಶಪಡಿಸಿದ್ದವು.
ಭಾರತೀಯ ಕಾರ್ಯಾಚರಣೆಯ ಯಶಸ್ಸನ್ನು ಮೇ 9ರಂದು ಪ್ರಶಾಂತ್ ಲೇಔಟ್ನಲ್ಲಿ ಯುವಕರು ಸಂಭ್ರಮಿಸುತ್ತಿದ್ದರು. ಈ ವೇಳೆ ಪಿ.ಜಿಯ ಬಾಲ್ಕನಿಯಲ್ಲಿ ನಿಂತಿದ್ದ ಶುಭಾಂಶು ಶುಕ್ಲಾ, ಪಾಕ್ ಪರ ಘೋಷಣೆ ಕೂಗಿದ್ದಾರೆ. ಪಾಕ್ ಪರ ಘೋಷಣೆ ಕೇಳಿ ಗಾಬರಿಗೊಂಡ ಯುವಕರು ಗಮನಿಸಿದಾಗ ಇಬ್ಬರು ಯುವಕರು ಕಟ್ಟಡವೊಂದರ ಬಾಲ್ಕನಿಯಲ್ಲಿ ನಿಂತು ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್ ಸಹಾಯವಾಣಿಗೆ ಸ್ಥಳೀಯ ಯುವಕರು ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಧಾವಿಸಿದ ವೈಟ್ಫೀಲ್ಡ್ ಠಾಣೆ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಿಸಿದಾಗ ಶುಭಾಂಶು ಶುಕ್ಲಾ ಪಾಕ್ ಪರ ಘೋಷಣೆ ಕೂಗಿರುವುದು ಖಚಿತವಾಗಿದೆ. ಆರೋಪಿ ಶುಭಾಂಶು ಶುಕ್ಲಾ ಬೆಂಗಳೂರಿನ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದ, ಸದ್ಯ ಪ್ರಕರಣ ದಾಖಲಿಸಿಕೊಂಡು ಆತನನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಪರೇಷನ್ ಸಿಂಧೂರ ಬಗ್ಗೆ ಸ್ಟೇಟಸ್ ಹಾಕಿದಾತನ ವಿರುದ್ಧ ಪ್ರಕರಣ:
ಮತ್ತೊಂದೆಡೆ, ಆಪರೇಷನ್ ಸಿಂಧೂರ ವಿರೋಧಿಸಿ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದ ಆರೋಪದ ಮೇಲೆ ಶಿವಮೊಗ್ಗದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದರು. ಈತನ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 26-year-old techie from Chhattisgarh has been arrested by Whitefield police for allegedly shouting pro-Pakistan slogans in the city. The accused, identified as Shubhamshu Shukla, was taken into custody following complaints from the public.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm