ಬ್ರೇಕಿಂಗ್ ನ್ಯೂಸ್
19-05-25 04:00 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ 19 : ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ಬರೀ ಕಲೆಕ್ಷನ್ ದಂಧೆಯಲ್ಲಿ ತೊಡಗಿದ್ದಾರೆ. ಪಾಕಿಸ್ತಾನ ಮೂಲದವರು ಇಲ್ಲಿನ ಸ್ಲಂ ಏರಿಯಾಗಳಲ್ಲಿ ಬಂದು ಅಡಗಿ ಕುಳಿತಿದ್ದಾರೆ ಎಂದು ಪತ್ರ ಬರೆದು ಗಮನಕ್ಕೆ ತಂದರೂ ಯಾವುದೇ ಏಕ್ಷನ್ ಮಾಡ್ತಿಲ್ಲ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಆರೋಪಿಸಿದ್ದಾರೆ.
15 ದಿನಗಳ ಹಿಂದೆ ಹುಬ್ಬಳ್ಳಿಯ ಜನ್ನತ್ ನಗರ ಮತ್ತು ಇನ್ನಿತರ ಸ್ಲಂ ಏರಿಯಾಗಳ ಮಸೀದಿಗಳಲ್ಲಿ ಪಾಕಿಸ್ತಾನ ಮೂಲದವರು ಇದ್ದಾರೆಂಬ ತನಗೆ ಸಿಕ್ಕಿದ ಮಾಹಿತಿಯನ್ನು ಪೊಲೀಸ್ ಕಮಿಷನರ್ ಅವರಿಗೆ ತಿಳಿಸಿದ್ದೆ. ಪತ್ರ ಬರೆದು ವಿಚಾರ ತಿಳಿಸಿದ್ದಲ್ಲದೆ, ಕಮಿಷನರ್ ಶಶಿಕುಮಾರ್ ಅವರಿಗೆ ಕರೆ ಮಾಡಿಯೂ ತಿಳಿಸಿದ್ದೆ. ರಾಜ್ಯದ ಗೃಹ ಸಚಿವರ ಗಮನಕ್ಕೂ ತಂದಿದ್ದೆ. ಆದರೆ ಪೊಲೀಸ್ ಕಮಿಷನರ್ ತನಗೇನೂ ಪತ್ರ ಸಿಕ್ಕಿಲ್ಲ ಎಂದು ಹೇಳಿ ಕಾಗೆ ಹಾರಿಸುವ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರಕಾರದ ಅಣತಿಯಂತೆ ಪಾಕಿಸ್ತಾನ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಪೊಲೀಸ್ ಕಮಿಷನರ್ ವಿರುದ್ಧ ಶಾಸಕ ಅರವಿಂದ ಬೆಲ್ಲದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೆ ನೀಡಿರುವ ಮಾಹಿತಿ ನೀಡಿದವರು ಬಾಂಗ್ಲಾದೇಶಿಗರ ರೀತಿ ಇಲ್ಲ. ಪಾಕಿಸ್ತಾನದ ಜನರ ರೀತಿ ಇದ್ದಾರೆ. ಮಸೀದಿ ವ್ಯಾಪ್ತಿಯಲ್ಲಿ ಅಡ್ಡಾಡುತ್ತಿದ್ದಾರೆ. ವಿಷಯ ಸೂಕ್ಷ್ಮ ಇದ್ದುದರಿಂದ ಪೊಲೀಸ್ ಕಮಿಷನರ್ ಗಮನಕ್ಕೆ ತಂದಿದ್ದೆ. ನನಗೆ ತಿಳಿದ ಮಟ್ಟಿಗೆ ಈತನಕವೂ ಪೊಲೀಸರು ತನಿಖೆ ನಡೆಸಿಲ್ಲ. ಪತ್ರಿಕೆಯಲ್ಲಿ ನೋಡಿದರೆ ನನಗೆ ಯಾವ ಮಾಹಿತಿ ಇಲ್ಲ ಎಂದು ಕಮಿಷನರ್ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಮಂತ್ರಿಯವರಿಗೆ ಫೋನ್ ಮಾಡಿಲ್ಲ. ಸ್ಥಳೀಯ ಕಮಿಷನರ್ ಆಗಿದ್ದರಿಂದ ಹೇಳಿದ್ದೆ. ಇದು ಬಹಳ ಬೇಜವಾಬ್ದಾರಿ ಕೆಲಸ. ಇವರು ಇಲ್ಲಿ ಕಮಿಷನ್ ದಂಧೆ ನಡೆಸುವುದು ಬಿಟ್ಟು ಏನು ಕೆಲಸ ಇದೆಯೋ ಅದನ್ನು ಮಾಡಲಿ.
ಭಯೋತ್ಪಾದಕರ ರೀತಿ ಕಂಡಿದ್ದಾರೆ, ಏನು ವಿಚಾರ ಅಂತ ತನಿಖೆ ಮಾಡ್ರೀ ಅಂತ ಹೇಳಿದ್ದೆ. ವಿಷಯ ಸೂಕ್ಷ್ಮ ಇದ್ದುದರಿಂದ ಮಾಧ್ಯಮಕ್ಕೆ ಹೇಳಿರಲಿಲ್ಲ. ಮಾಧ್ಯಮದಲ್ಲಿ ಬಂದ ಕೂಡಲೇ ಎಲರ್ಟ್ ಆಗುತ್ತಾರೆ. ಅಲ್ಲಿ ಏಳೆಂಟು ಜನರು ಇದ್ದಾರೆಂದು ನನಗೆ ಮಾಹಿತಿ ನೀಡಿದವರು ಹೇಳಿದ್ದರು. ಪೊಲೀಸರು ಮಾಹಿತಿ ನೀಡಿದ್ರೂ ಬೇಜವಾಬ್ದಾರಿ ನಡೆ ತೋರಿಸಿದ್ದಾರೆ. ಇದು ಭಾರೀ ಬೇಸರದ ಸಂಗತಿ. ಪಾಕಿಸ್ತಾನ ಜೊತೆಗೆ ಯುದ್ಧ ಸನ್ನಿವೇಶ ಇರುವಾಗ ಇಂತಹ ಸ್ಥಿತಿಯಾಗಬಾರದಿತ್ತು ಎಂದು ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿದ್ದಾರೆ.
In a startling statement, MLA Aravind Bellad has alleged the presence of Pakistan nationals residing illegally in the twin cities of Hubballi and Dharwad.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm