ಬ್ರೇಕಿಂಗ್ ನ್ಯೂಸ್
20-05-25 03:30 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20 : ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗಿದ್ದು ಎಲ್ಲಿ ನೋಡಿದರೂ ನೀರೇ ನೀರು ಎನ್ನುವಂತಾಗಿದೆ. ಒಂದೇ ಮಳೆಗೆ ಬೆಂದಕಾಳೂರಿನ ಜನರು ತತ್ತರಿಸಿದ್ದು ಬೆಂದು ಹೋಗಿದ್ದಾರೆ.
ಭಾರೀ ಮಳೆಯಿಂದಾಗಿ ಬೆಂಗಳೂರು ನಗರದಲ್ಲಿ ಅಂದಾಜು 500ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. 20 ಕೆರೆಗಳು ಉಕ್ಕಿ ಹರಿದು ಆಸುಪಾಸಿನ ಬಡಾವಣೆಗಳನ್ನು ಜಲಾವೃತವಾಗಿಸಿವೆ. ಮಧುವನ ಅಪಾರ್ಟ್ಮೆಂಟ್, ಡಾಲರ್ಸ್ ಕಾಲೋನಿ, ಬಿಟಿಎಂ ಲೇಔಟ್ನಲ್ಲಿ ಮಳೆ ನೀರು ತುಂಬಿಕೊಂಡಿದೆ. ಮಳೆಯಿಂದಾಗಿ 63 ವರ್ಷದ ಮನಮೋಹನ್ ಕಾಮತ್, ಭದ್ರತಾ ಸಿಬ್ಬಂದಿ ಮಗ 12 ವರ್ಷದ ದಿನೇಶ್ ಸೇರಿ ಮೂವರು ಮೃತ ಮೃತಪಟ್ಟಿದ್ದಾರೆ.







ವರುಣನ ಆರ್ಭಟಕ್ಕೆ ಸಾಯಿ ಲೇಔಟ್ನ ಜನರು ಹೈರಾಣಾಗಿ ಹೋಗಿದ್ದಾರೆ. ಜಲಾವೃತಗೊಂಡ ಮನೆಯಲ್ಲಿ ಸಿಲುಕಿದ್ದ ಜನರನ್ನು ರಕ್ಷಣಾ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಶ್ವಾನಗಳು, ಹಸುಗಳು ಮಳೆ ನೀರಿನಲ್ಲಿ ಪರದಾಡುವ ಸ್ಥಿತಿ ಉಂಟಾಗಿದೆ. ಬಿಬಿಎಂಪಿ ಸಿಬ್ಬಂದಿ ಬೋಟ್ನಲ್ಲಿ ತೆರಳಿ ಮನೆಯಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡುವುದರ ಜೊತೆಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದಾರೆ.




ನಂದಗೋಕುಲ ಲೇಔಟ್ನಲ್ಲೂ ಮಳೆ ಹೊಡೆತಕ್ಕೆ ಜನರು ಕುಸಿದು ಹೋಗಿದ್ದಾರೆ. ನಾಗವಾರ ಎಲಿಮೆಂಟ್ಸ್ ಮಾಲ್ ಎದುರು ನೀರು ನಿಂತು ಕೆರೆಯಂತಾಗಿದ್ದು ಜನರು ಓಡಾಡಲು ಪರದಾಡುತ್ತಿದ್ದಾರೆ. ಅಲ್ಲದೆ ನಗರದ ಪ್ರತಿಷ್ಠಿತ ಹೆಚ್ಎಸ್ಆರ್ ಲೇಔಟ್ನಲ್ಲೂ ಜಲಪ್ರವಾಹ ಉಂಟಾಗಿದೆ. ಧಾರಾಕಾರ ಮಳೆಯಿಂದಾಗಿ ಕಟ್ಟಡಗಳ ನೆಲ ಅಂತಸ್ತಿಗೆ ಮಳೆ ನೀರು ನುಗ್ಗಿದ್ದು, ನೆಲಮಹಡಿಯಲ್ಲಿರುವ ಕುಟುಂಬಗಳ ಸಂಕಷ್ಟಕ್ಕೀಡಾಗಿದ್ದಾರೆ. ಮೂರು ಜನರೇಟರ್, ಎರಡು ಬೈಕ್, ಇನ್ನಿತರ ಪ್ರಮುಖ ದಾಖಲೆಗಳು ನೀರುಪಾಲಾಗಿವೆ.
ದೀಪಿಕಾ ಲೇಔಟ್ನಲ್ಲೂ ಇದೇ ಸ್ಥಿತಿ ನಿರ್ಮಾಣವಾಗಿದ್ದು ಜನರು ನಲುಗಿ ಹೋಗಿದ್ದಾರೆ. ಮನೆ ವಸ್ತುಗಳು ನೀರಿನಲ್ಲಿ ತೇಲಿಕೊಂಡು ಹೋಗುತ್ತಿದ್ದು, ರಕ್ಷಣೆಗೆ ಜನ ಸುಸ್ತಾಗಿ ಹೋಗಿದ್ದಾರೆ. ಮಳೆಯಿಂದಾಗಿ ಹೆಣ್ಣೂರು ಕೂಡ ಜಲಾವೃತಗೊಂಡಿದೆ. ಮನೆ, ರಸ್ತೆ ಮಾತ್ರವಲ್ಲದೆ ಅನಾಥಾಶ್ರಮ ಕೂಡ ಜಲಾವೃತ ಆಗಿದೆ. ಅಡುಗೆ ಮನೆಗೂ ನೀರು ನುಗ್ಗಿದ್ದು ವೃದ್ಧ ಜನರ ಪರಿಸ್ಥಿತಿ ಕರಳು ಹಿಂಡುವಂತಿದೆ. ಜೊತೆಗೆ ಕೆಆರ್ ಸರ್ಕಲ್ ಕೂಡ ಜಲಾವೃತಗೊಂಡಿದ್ದು, ವಿಶ್ವೇಶ್ವರ್ ಕಾಲೇಜು ಬಳಿ ಬಸ್ಸ್ಟಾಂಡ್ ಧರಗೆ ಉರುಳಿದೆ. ಬೆಳಗ್ಗೆ ಈ ಘಟನೆ ನಡೆದಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
Heavy downpour in Bengaluru for the past 36 hours threw life out of gear here on Tuesday as well. People were seen walking through knee-deep water and traffic jams were reported in many places. The rain-related toll went up to five in the state, officials said.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm