ಬ್ರೇಕಿಂಗ್ ನ್ಯೂಸ್
20-05-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20 : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್ ಸೇರಿ ಇತರ ಆರೋಪಿಗಳ ವಿರುದ್ಧ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ತನಿಖಾಧಿಕಾರಿ ಸಲ್ಲಿಸಿದ್ದಾರೆ.
ಪ್ರಕರಣ ಸಂಬಂಧ ಮೊದಲು ದೋಷಾರೋಪ ಪಟ್ಟಿಯಲ್ಲಿ 262 ಸಾಕ್ಷಿಗಳನ್ನು ಹೆಸರಿಸಲಾಗಿತ್ತು. ಈಗ 10 ಮಂದಿ ಹೆಚ್ಚುವರಿ ಸಾಕ್ಷಿದಾರರ ಹೇಳಿಕೆ ದಾಖಲಿಸಲಾಗಿದೆ. ಜತೆಗೆ, ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಪೋಟೋಗಳ ಎಫ್ಎಸ್ಎಲ್ ವರದಿ ಹಾಗೂ ದೂರವಾಣಿ ಕರೆಗಳ ವಿವರ ಸೇರಿ ವಿವಿಧ ದಾಖಲೆಗಳನ್ನೊಳಗೊಂಡ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ತನಿಖಾ ಮೂಲಗಳು ತಿಳಿಸಿವೆ.


ನಟ ದರ್ಶನ್ ಕೋರ್ಟ್ಗೆ ಹಾಜರು
ಈ ನಧಿಡುವೆ, ಆರೋಪಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 16 ಮಂದಿ ಆರೋಪಿಗಳು ಮಂಗಳವಾರ ಸಿಸಿಎಚ್ 57ನೇ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಿದ್ದರು. ಆರೋಪಿ ಪವನ್ ಗೈರಾಗಿದ್ದರು. ಹಾಜರಾತಿ ದಾಖಲಿಸಿಕೊಂಡು ನ್ಯಾಯಾಲಯ ಜುಲೈ 10ಕ್ಕೆ ವಿಚಾರಣೆ ಮುಂದೂಡಿತು.
ಸಿಆರ್ಪಿಸಿ 207 ರ ಅನ್ವಯ ಪೊಲೀಸರು, ಪ್ರಕರಣದ ತನಿಖಾ ವರದಿಯನ್ನು ನ್ಯಾಯಾಧೀಶರ ಸಮ್ಮುಖದಲ್ಲಿಆರೋಪಿಗಳಿಗೆ ನೀಡಬೇಕು. ಆದರೆ, ಈ ಪ್ರಕರಣದಲ್ಲಿಹೆಚ್ಚುವರಿ ದೋಷಾರೋಪ ಪಟ್ಟಿ ನೀಡಿಲ್ಲ ಎಂದು ವಿವರಿಸಿದರು. ಬಳಿಕ ನ್ಯಾಯಾಲಯದ ಸೂಚನೆ ಮೇರೆಗೆ ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ಪೊಲೀಸರು ನೀಡಿದರು. ಆರೋಪಿ ನಟಿ ಪವಿತ್ರಾಗೌಡ ಕೆಲಸದ ಸಲುವಾಗಿ ಹೊರರಾಜ್ಯಕ್ಕೆ ತೆರಳಲು ಕೋರಿದ್ದ ಅನುಮತಿ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, 15 ದಿನ ಹೊರರಾಜ್ಯಕ್ಕೆ ಹೋಗಲು ಅನುಮತಿಸಿತು. ಅಷ್ಟೇ ಅಲ್ಲದೆ, ಪ್ರಕರಣದ 11ನೇ ಆರೋಪಿ ನಾಗರಾಜು ಬೇರೊಂದು ಪ್ರಕರಣದ ವಿಚಾರಣೆ ಸಲುವಾಗಿ ಹೊಸಪೇಟೆಗೆ ತೆರಳಲು ಅವಕಾಶ ನೀಡಿತು.
ದರ್ಶನ್ - ಪವಿತ್ರಾ ಮುಖಾಮುಖಿ!
ಹಲವು ತಿಂಗಳ ಬಳಿಕ ನಟ ದರ್ಶನ್ ಹಾಗೂ ಆಪ್ತ ಗೆಳತಿ ಪವಿತ್ರಾಗೌಡ ಮಂಗಳವಾರ ನ್ಯಾಯಾಲಯದಲ್ಲಿ ಮುಖಾಮುಖಿಯಾದರು. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಒಟ್ಟಿಗೆ ಜೈಲು ಸೇರಿದ್ದ ಇಬ್ಬರೂ ಆರೋಪಿಗಳು ಜಾಮೀನು ಪಡೆದಿದ್ದರು. ನಟ ಧನ್ವೀರ್ ಹಾಗೂ ಅಂಗರಕ್ಷಕರ ಜತೆ ನಟ ದರ್ಶನ್ ನ್ಯಾಯಾಲಯಕ್ಕೆ ಆಗಮಿಸಿದ್ದರು. ಪವಿತ್ರಾಗೌಡ ತಮ್ಮ ವಕೀಲರ ಜತೆ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ನ್ಯಾಯಾಲಯದ ಕಲಾಪ ಮುಗಿದ ಬಳಿಕ ಲಿಫ್ಟ್ನಲ್ಲಿ ಇಬ್ಬರೂ ಒಟ್ಟಿಗೆ ಜತೆಯಾಗಿ ಬಂದರು. ಈ ವೇಳೆ ಮುಖಾಮುಖಿಯಾಗಿದ್ದು ಸಣ್ಣ ನಗುವಿನಲ್ಲಿಯೇ ಉಭಯಕುಶಲೋಪರಿ ನಡೆಯಿತು ಎನ್ನಲಾಗಿದೆ. ಅಷ್ಟೇ ಅಲ್ಲದೆ, ಪವಿತ್ರಾಗೌಡ, ಹಠ ಮಾಡಿ ದರ್ಶನ್ ದೂರವಾಣಿ ಸಂಖ್ಯೆ ನೀಡುವಂತೆ ಕೇಳಿದ್ದು, ದರ್ಶನ್ ಅವರು ಪವಿತ್ರಾ ಮೊಬೈಲ್ ಪಡೆದು ನಂಬರ್ ನಮೂದಿಸಿ ಕೊಟ್ಟರು ಎನ್ನಲಾಗಿದೆ.
Sandalwood actor Darshan, accused in the Renukaswamy murder case, and Pavithra Gowda met each other while appearing before court on Tuesday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm