ಬ್ರೇಕಿಂಗ್ ನ್ಯೂಸ್
20-05-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20 : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್ ಸೇರಿ ಇತರ ಆರೋಪಿಗಳ ವಿರುದ್ಧ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ತನಿಖಾಧಿಕಾರಿ ಸಲ್ಲಿಸಿದ್ದಾರೆ.
ಪ್ರಕರಣ ಸಂಬಂಧ ಮೊದಲು ದೋಷಾರೋಪ ಪಟ್ಟಿಯಲ್ಲಿ 262 ಸಾಕ್ಷಿಗಳನ್ನು ಹೆಸರಿಸಲಾಗಿತ್ತು. ಈಗ 10 ಮಂದಿ ಹೆಚ್ಚುವರಿ ಸಾಕ್ಷಿದಾರರ ಹೇಳಿಕೆ ದಾಖಲಿಸಲಾಗಿದೆ. ಜತೆಗೆ, ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಪೋಟೋಗಳ ಎಫ್ಎಸ್ಎಲ್ ವರದಿ ಹಾಗೂ ದೂರವಾಣಿ ಕರೆಗಳ ವಿವರ ಸೇರಿ ವಿವಿಧ ದಾಖಲೆಗಳನ್ನೊಳಗೊಂಡ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ತನಿಖಾ ಮೂಲಗಳು ತಿಳಿಸಿವೆ.


ನಟ ದರ್ಶನ್ ಕೋರ್ಟ್ಗೆ ಹಾಜರು
ಈ ನಧಿಡುವೆ, ಆರೋಪಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 16 ಮಂದಿ ಆರೋಪಿಗಳು ಮಂಗಳವಾರ ಸಿಸಿಎಚ್ 57ನೇ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಿದ್ದರು. ಆರೋಪಿ ಪವನ್ ಗೈರಾಗಿದ್ದರು. ಹಾಜರಾತಿ ದಾಖಲಿಸಿಕೊಂಡು ನ್ಯಾಯಾಲಯ ಜುಲೈ 10ಕ್ಕೆ ವಿಚಾರಣೆ ಮುಂದೂಡಿತು.
ಸಿಆರ್ಪಿಸಿ 207 ರ ಅನ್ವಯ ಪೊಲೀಸರು, ಪ್ರಕರಣದ ತನಿಖಾ ವರದಿಯನ್ನು ನ್ಯಾಯಾಧೀಶರ ಸಮ್ಮುಖದಲ್ಲಿಆರೋಪಿಗಳಿಗೆ ನೀಡಬೇಕು. ಆದರೆ, ಈ ಪ್ರಕರಣದಲ್ಲಿಹೆಚ್ಚುವರಿ ದೋಷಾರೋಪ ಪಟ್ಟಿ ನೀಡಿಲ್ಲ ಎಂದು ವಿವರಿಸಿದರು. ಬಳಿಕ ನ್ಯಾಯಾಲಯದ ಸೂಚನೆ ಮೇರೆಗೆ ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ಪೊಲೀಸರು ನೀಡಿದರು. ಆರೋಪಿ ನಟಿ ಪವಿತ್ರಾಗೌಡ ಕೆಲಸದ ಸಲುವಾಗಿ ಹೊರರಾಜ್ಯಕ್ಕೆ ತೆರಳಲು ಕೋರಿದ್ದ ಅನುಮತಿ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, 15 ದಿನ ಹೊರರಾಜ್ಯಕ್ಕೆ ಹೋಗಲು ಅನುಮತಿಸಿತು. ಅಷ್ಟೇ ಅಲ್ಲದೆ, ಪ್ರಕರಣದ 11ನೇ ಆರೋಪಿ ನಾಗರಾಜು ಬೇರೊಂದು ಪ್ರಕರಣದ ವಿಚಾರಣೆ ಸಲುವಾಗಿ ಹೊಸಪೇಟೆಗೆ ತೆರಳಲು ಅವಕಾಶ ನೀಡಿತು.
ದರ್ಶನ್ - ಪವಿತ್ರಾ ಮುಖಾಮುಖಿ!
ಹಲವು ತಿಂಗಳ ಬಳಿಕ ನಟ ದರ್ಶನ್ ಹಾಗೂ ಆಪ್ತ ಗೆಳತಿ ಪವಿತ್ರಾಗೌಡ ಮಂಗಳವಾರ ನ್ಯಾಯಾಲಯದಲ್ಲಿ ಮುಖಾಮುಖಿಯಾದರು. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಒಟ್ಟಿಗೆ ಜೈಲು ಸೇರಿದ್ದ ಇಬ್ಬರೂ ಆರೋಪಿಗಳು ಜಾಮೀನು ಪಡೆದಿದ್ದರು. ನಟ ಧನ್ವೀರ್ ಹಾಗೂ ಅಂಗರಕ್ಷಕರ ಜತೆ ನಟ ದರ್ಶನ್ ನ್ಯಾಯಾಲಯಕ್ಕೆ ಆಗಮಿಸಿದ್ದರು. ಪವಿತ್ರಾಗೌಡ ತಮ್ಮ ವಕೀಲರ ಜತೆ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ನ್ಯಾಯಾಲಯದ ಕಲಾಪ ಮುಗಿದ ಬಳಿಕ ಲಿಫ್ಟ್ನಲ್ಲಿ ಇಬ್ಬರೂ ಒಟ್ಟಿಗೆ ಜತೆಯಾಗಿ ಬಂದರು. ಈ ವೇಳೆ ಮುಖಾಮುಖಿಯಾಗಿದ್ದು ಸಣ್ಣ ನಗುವಿನಲ್ಲಿಯೇ ಉಭಯಕುಶಲೋಪರಿ ನಡೆಯಿತು ಎನ್ನಲಾಗಿದೆ. ಅಷ್ಟೇ ಅಲ್ಲದೆ, ಪವಿತ್ರಾಗೌಡ, ಹಠ ಮಾಡಿ ದರ್ಶನ್ ದೂರವಾಣಿ ಸಂಖ್ಯೆ ನೀಡುವಂತೆ ಕೇಳಿದ್ದು, ದರ್ಶನ್ ಅವರು ಪವಿತ್ರಾ ಮೊಬೈಲ್ ಪಡೆದು ನಂಬರ್ ನಮೂದಿಸಿ ಕೊಟ್ಟರು ಎನ್ನಲಾಗಿದೆ.
Sandalwood actor Darshan, accused in the Renukaswamy murder case, and Pavithra Gowda met each other while appearing before court on Tuesday.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm