ಬ್ರೇಕಿಂಗ್ ನ್ಯೂಸ್
20-05-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20 : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್ ಸೇರಿ ಇತರ ಆರೋಪಿಗಳ ವಿರುದ್ಧ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ತನಿಖಾಧಿಕಾರಿ ಸಲ್ಲಿಸಿದ್ದಾರೆ.
ಪ್ರಕರಣ ಸಂಬಂಧ ಮೊದಲು ದೋಷಾರೋಪ ಪಟ್ಟಿಯಲ್ಲಿ 262 ಸಾಕ್ಷಿಗಳನ್ನು ಹೆಸರಿಸಲಾಗಿತ್ತು. ಈಗ 10 ಮಂದಿ ಹೆಚ್ಚುವರಿ ಸಾಕ್ಷಿದಾರರ ಹೇಳಿಕೆ ದಾಖಲಿಸಲಾಗಿದೆ. ಜತೆಗೆ, ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಪೋಟೋಗಳ ಎಫ್ಎಸ್ಎಲ್ ವರದಿ ಹಾಗೂ ದೂರವಾಣಿ ಕರೆಗಳ ವಿವರ ಸೇರಿ ವಿವಿಧ ದಾಖಲೆಗಳನ್ನೊಳಗೊಂಡ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ತನಿಖಾ ಮೂಲಗಳು ತಿಳಿಸಿವೆ.


ನಟ ದರ್ಶನ್ ಕೋರ್ಟ್ಗೆ ಹಾಜರು
ಈ ನಧಿಡುವೆ, ಆರೋಪಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 16 ಮಂದಿ ಆರೋಪಿಗಳು ಮಂಗಳವಾರ ಸಿಸಿಎಚ್ 57ನೇ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಿದ್ದರು. ಆರೋಪಿ ಪವನ್ ಗೈರಾಗಿದ್ದರು. ಹಾಜರಾತಿ ದಾಖಲಿಸಿಕೊಂಡು ನ್ಯಾಯಾಲಯ ಜುಲೈ 10ಕ್ಕೆ ವಿಚಾರಣೆ ಮುಂದೂಡಿತು.
ಸಿಆರ್ಪಿಸಿ 207 ರ ಅನ್ವಯ ಪೊಲೀಸರು, ಪ್ರಕರಣದ ತನಿಖಾ ವರದಿಯನ್ನು ನ್ಯಾಯಾಧೀಶರ ಸಮ್ಮುಖದಲ್ಲಿಆರೋಪಿಗಳಿಗೆ ನೀಡಬೇಕು. ಆದರೆ, ಈ ಪ್ರಕರಣದಲ್ಲಿಹೆಚ್ಚುವರಿ ದೋಷಾರೋಪ ಪಟ್ಟಿ ನೀಡಿಲ್ಲ ಎಂದು ವಿವರಿಸಿದರು. ಬಳಿಕ ನ್ಯಾಯಾಲಯದ ಸೂಚನೆ ಮೇರೆಗೆ ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ಪೊಲೀಸರು ನೀಡಿದರು. ಆರೋಪಿ ನಟಿ ಪವಿತ್ರಾಗೌಡ ಕೆಲಸದ ಸಲುವಾಗಿ ಹೊರರಾಜ್ಯಕ್ಕೆ ತೆರಳಲು ಕೋರಿದ್ದ ಅನುಮತಿ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, 15 ದಿನ ಹೊರರಾಜ್ಯಕ್ಕೆ ಹೋಗಲು ಅನುಮತಿಸಿತು. ಅಷ್ಟೇ ಅಲ್ಲದೆ, ಪ್ರಕರಣದ 11ನೇ ಆರೋಪಿ ನಾಗರಾಜು ಬೇರೊಂದು ಪ್ರಕರಣದ ವಿಚಾರಣೆ ಸಲುವಾಗಿ ಹೊಸಪೇಟೆಗೆ ತೆರಳಲು ಅವಕಾಶ ನೀಡಿತು.
ದರ್ಶನ್ - ಪವಿತ್ರಾ ಮುಖಾಮುಖಿ!
ಹಲವು ತಿಂಗಳ ಬಳಿಕ ನಟ ದರ್ಶನ್ ಹಾಗೂ ಆಪ್ತ ಗೆಳತಿ ಪವಿತ್ರಾಗೌಡ ಮಂಗಳವಾರ ನ್ಯಾಯಾಲಯದಲ್ಲಿ ಮುಖಾಮುಖಿಯಾದರು. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಒಟ್ಟಿಗೆ ಜೈಲು ಸೇರಿದ್ದ ಇಬ್ಬರೂ ಆರೋಪಿಗಳು ಜಾಮೀನು ಪಡೆದಿದ್ದರು. ನಟ ಧನ್ವೀರ್ ಹಾಗೂ ಅಂಗರಕ್ಷಕರ ಜತೆ ನಟ ದರ್ಶನ್ ನ್ಯಾಯಾಲಯಕ್ಕೆ ಆಗಮಿಸಿದ್ದರು. ಪವಿತ್ರಾಗೌಡ ತಮ್ಮ ವಕೀಲರ ಜತೆ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ನ್ಯಾಯಾಲಯದ ಕಲಾಪ ಮುಗಿದ ಬಳಿಕ ಲಿಫ್ಟ್ನಲ್ಲಿ ಇಬ್ಬರೂ ಒಟ್ಟಿಗೆ ಜತೆಯಾಗಿ ಬಂದರು. ಈ ವೇಳೆ ಮುಖಾಮುಖಿಯಾಗಿದ್ದು ಸಣ್ಣ ನಗುವಿನಲ್ಲಿಯೇ ಉಭಯಕುಶಲೋಪರಿ ನಡೆಯಿತು ಎನ್ನಲಾಗಿದೆ. ಅಷ್ಟೇ ಅಲ್ಲದೆ, ಪವಿತ್ರಾಗೌಡ, ಹಠ ಮಾಡಿ ದರ್ಶನ್ ದೂರವಾಣಿ ಸಂಖ್ಯೆ ನೀಡುವಂತೆ ಕೇಳಿದ್ದು, ದರ್ಶನ್ ಅವರು ಪವಿತ್ರಾ ಮೊಬೈಲ್ ಪಡೆದು ನಂಬರ್ ನಮೂದಿಸಿ ಕೊಟ್ಟರು ಎನ್ನಲಾಗಿದೆ.
Sandalwood actor Darshan, accused in the Renukaswamy murder case, and Pavithra Gowda met each other while appearing before court on Tuesday.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm