ಬ್ರೇಕಿಂಗ್ ನ್ಯೂಸ್
21-05-25 11:33 am HK News Desk ಕರ್ನಾಟಕ
ವಿಜಯಪುರ, ಮೇ 21 : ಮನಗೂಳಿ ಬಳಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಧಾರುಣವಾಗಿ ಸಾವಿಗೀಡಾಗಿದ್ದಾರೆ.
ಮಹಿಂದ್ರಾ TUV 300 ನಲ್ಲಿದ ತೆಲಂಗಾಣದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಮಗಳು ಜೋಸ್ನಾ, ಚಾಲಕ ವಿಜಯಪುರ ಜಿಲ್ಲೆಯ ಹೊರ್ತಿಯ ವಿಕಾಸ ಶಿವಪ್ಪ ಮಕನಿ ಹಾಗೂ ವಿಆರ್ಎಲ್ ಬಸ್ ಚಾಲಕ ಕಲಗುಟಗಿ ತಾಂಡಾದ ಬಸವರಾಜ ರಾಠೋಡ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.



ಭಾಸ್ಕರನ್ ಅವರ ಪುತ್ರ ಪ್ರವೀಣತೇಜ ಹಾಗೂ ಲಾರಿ ಚಾಲಕ ಹುಲಜಂತಿಯ ಚನ್ನಬಸು ಸಿದ್ದಪ್ಪ ಮಾಳಿ ಗಾಯಗೊಂಡಿದ್ದು, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಲಾಪುರದತ್ತ ತೆರಳುತ್ತಿದ್ದ ಮಹೀಂದ್ರಾ ಕಾರು ಆರಂಭದಲ್ಲಿ ಹೆದ್ದಾರಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಾರಿ, ಮುಂಬೈನಿಂದ ಬಳ್ಳಾರಿಗೆ ತೆರಳುತ್ತಿದ್ದ ವಿಆರ್ಎಲ್ ಬಸ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಇದೇ ಮಾರ್ಗದಲ್ಲಿ ಬರುತ್ತಿದ್ದ ಲಾರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಹಾಗೂ ಬಸ್ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ವಿಆರ್ ಎಲ್ ಬಸ್ನಲ್ಲಿ ಸಾಕಷ್ಟು ಪ್ರಯಾಣಿಕರು ಇದ್ದರು. ಆದರೆ ಚಾಲಕ ಭಾರೀ ಅಪಘಾತವಾಗುವುದನ್ನು ತಪ್ಪಿಸಿ ಅಲ್ಲಿದ್ದವರ ಜೀವ ಉಳಿಸಿ ತನ್ನ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.
ಬೆಳಗಿನ ಜಾವವಾಗಿದ್ದರಿಂದ ಏನಾಯಿತು ಎನ್ನುವುದು ಗೊತ್ತಾಗಲಿಲ್ಲ.ಏಕಾಏಕಿ ಭಾರೀ ಶಬ್ದ ಕೇಳಿತು. ನಮ್ಮ ಬಸ್ ಪಕ್ಕಕ್ಕೆ ನಿಂತಿತ್ತು. ಹೊರಗೆ ಇಳಿದು ನೋಡಿದರೆ ವಾಹನಗಳ ನಡುವೆ ಅಪಘಾತ ಆಗಿರುವುದು ಕಂಡು ಬಂದಿತು.ಅಪಘಾತದ ಸನ್ನಿವೇಶ ನೋಡಿ ಭಯವಾಯಿತು ಎಂದು ಪ್ರತ್ಯಕ್ಷದರ್ಶಿಗಳು ವಿವರಣೆ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Accident in Vijaypura, Mahindra TUV 300 Crashes into Divider, Collides with VRL Volvo Bus and Truck, 5 Killed on Spot. According to Laxman Nimbargi, Superintendent Of Police, Vijaypura , a Mahindra SUV 300 vehicle traveling towards Solapur jumped the median and collided with a private bus coming from Mumbai to Ballari.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm