ಬ್ರೇಕಿಂಗ್ ನ್ಯೂಸ್
21-05-25 09:16 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 21 : ಓಲಾ ಕಂಪನಿಯ ಎಐ ವಿಭಾಗದಲ್ಲಿ ಮೆಷಿನ್ ಲರ್ನಿಂಗ್ ಎಂಜಿನಿಯರ್ ಆಗಿದ್ದ ಮಹಾರಾಷ್ಟ್ರ ಮೂಲದ ನಿಖಿಲ್ ಸೋಮವಂಶಿ(24) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಎರಡು ವಾರಗಳ ಬಳಿಕ ಸಂಚಲನ ಎಬ್ಬಿಸಿದೆ. ಆತ್ಮಹತ್ಯೆಗೆ ಕಂಪನಿಯ ಮ್ಯಾನೇಜರ್ ಕಿರುಕುಳ ಕಾರಣ ಎನ್ನುವ ಮಾಹಿತಿ ಒಂದೆಡೆಯಾದರೆ, ಸಾವಿಗೂ ಮುನ್ನ, ತಾನು ಅಪಘಾತದಲ್ಲಿ ಮೃತಪಟ್ಟಿರುವುದಾಗಿ ಸಂಬಂಧಿಕರಿಗೆ ತಿಳಿಸುವಂತೆ ರೂಮ್ಮೇಟ್ಗೆ ಸಂದೇಶ ಕಳುಹಿಸಿದ್ದರು ಎಂಬ ಅಂಶ ಚರ್ಚೆಗೆ ಕಾರಣವಾಗಿದೆ.
ಮಹಾರಾಷ್ಟ್ರದ ಜಲಗಾಂವ್ ಮೂಲದ ಸೋಮವಂಶಿ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ವಾಸವಿದ್ದರು. ಮೇ 7ರಂದು ಕೊಠಡಿ ತೊರೆದಿದ್ದು, ಅವರ ಮೃತದೇಹ ಮೇ 8ರಂದು ಅಗರ ಕೆರೆಯಲ್ಲಿ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಇವರ ಆತ್ಮಹತ್ಯೆಗೆ ಕಂಪನಿಯ ಕಠಿಣ ಕೆಲಸದ ಒತ್ತಡ ಮತ್ತು ಕಿರುಕುಳ ನೀಡುತ್ತಿದ್ದ ಮ್ಯಾನೇಜರ್ ಕಾರಣ ಎಂದು ಆರೋಪ ಕೇಳಿಬಂದಿದೆ.
ಆಗಸ್ಟ್ 2024 ರಲ್ಲಿ ಓಲಾ ಕಂಪನಿಯ ಕ್ರುಟ್ರಿಮ್ಗೆ ಫ್ರೆಶರ್ ಆಗಿ ಸೇರಿದ್ದ ಸೋಮವಂಶಿ ಅವರಿಗೆ ಇಬ್ಬರು ಸಹೋದ್ಯೋಗಿಗಳ ರಾಜೀನಾಮೆ ನಂತರ ಟೀಂ ಲೀಡರ್ ಹುದ್ದೆ ವಹಿಸಲಾಗಿತ್ತು ಎಂದು ರೆಡ್ಡಿಟ್ ಜಾಲತಾಣದಲ್ಲಿ ಬಳಕೆದಾರರು ಬರೆದುಕೊಂಡಿದ್ದಾರೆ. ಇದೇ ವೇಳೆ, ರಾಜ್ಕಿರಣ್ ಪನುಗಂಟಿ ಎಂದು ಗುರುತಿಸಲಾದ ಅಮೆರಿಕ ಮೂಲದ ಕಂಪನಿ ಮ್ಯಾನೇಜರ್ ಜೂನಿಯರ್ ಸಿಬ್ಬಂದಿಗೆ ನಿರಂತರ ನಿಂದಿಸುತ್ತ ಒತ್ತಡ ಹೇರುತ್ತಿದ್ದರು ಎಂದು ಜಾಲತಾಣದಲ್ಲಿ ಆರೋಪಿಸಲಾಗಿದೆ.
ಇಂಜಿನಿಯರ್ ಸಾವಿನ ನಂತರವೂ ಕಂಪನಿಯಲ್ಲಿ ಯಾವುದೇ ವಿಮರ್ಶೆ ನಡೆದಿಲ್ಲ. ಘಟನೆ ಬಗ್ಗೆ ಚರ್ಚಿಸದಂತೆ ನೌಕರರಿಗೆ ಎಚ್ಚರಿಕೆ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ.
ಮ್ಯಾನೇಜರ್ ಹೊಸಬರನ್ನು ದಬ್ಬಾಳಿಕೆಯ ಧಾಟಿಯಲ್ಲಿ ನೋಡುತ್ತಿದ್ದರು. ಇದರಿಂದ ಒತ್ತಡದ ಸನ್ನಿವೇಶ ಸೃಷ್ಟಿಯಾಗಿತ್ತು. ಮ್ಯಾನೇಜರ್ ವರ್ತನೆಯಿಂದ ಬೇಸತ್ತು ಹಲವರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಹಲವರು ಇದರಿಂದ ನೊಂದುಕೊಂಡಿದ್ದಾರೆ ಎಂದು ಕೆಲವು ಬಳಕೆದಾರರು ಪೋಸ್ಟ್ ಮಾಡಿದ್ದಾರೆ.
Nearly two weeks after a machine learning engineer at Ola Krutrim, the company’s AI arm, was found dead in Bengaluru, allegations have cropped up on social media suggesting that the 25-year-old died by suicide due to “work pressure”.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm