ಬ್ರೇಕಿಂಗ್ ನ್ಯೂಸ್
22-05-25 12:41 pm HK News Desk ಕರ್ನಾಟಕ
ಬಾಗಲಕೋಟೆ, ಮೇ 22 : ಮಂಗಗಳು ಮನುಷ್ಯರಷ್ಟೇ ಬುದ್ಧಿವಂತ ಜೀವಿಗಳು ಎಂಬುದು ಎಲ್ಲರಿಗೂ ತಿಳಿದಿದೆ. ಮಾತನಾಡಲು ಬರುವುದಿಲ್ಲ ಅಷ್ಟೇ ಆದರೆ, ಮನಷ್ಯನಂತೆ ಯೋಚಿಸುವ ಮತ್ತು ಕೆಲಸ ಮಾಡುವ ಸಾಮರ್ಥ್ಯವಿದೆ. ಅಲ್ಲದೆ, ಮನುಷ್ಯನೊಂದಿಗೆ ತನ್ನದೇ ಶೈಲಿಯಲ್ಲಿ ಸಂವಹನ ನಡೆಸುವ ಕಲೆಯನ್ನು ಸಹ ಮಂಗಗಳು ಹೊಂದಿವೆ.
ಇದು ಆಗಾಗ ಸಾಬೀತು ಕೂಡ ಆಗಿದ್ದು, ಇದೀಗ ಮತ್ತೊಮ್ಮೆ ಸಾಬೀತಾಗಿದೆ.
ಅಂದಹಾಗೆ, ಮನುಷ್ಯನಿಗೆ ಏನಾದರೂ ಆರೋಗ್ಯ ಸಮಸ್ಯೆಯಾದರೆ ತಕ್ಷಣ ಆಸ್ಪತ್ರೆಗೆ ಹೋಗುತ್ತಾನೆ. ಆದರೆ, ಮೂಕ ಪ್ರಾಣಿಗಳಿಗೆ ಸಮಸ್ಯೆಯಾದರೆ ಎಲ್ಲಿಗೆ ಹೋಗಬೇಕು? ಪಶುವೈದ್ಯಕೀಯ ಆಸ್ಪತ್ರೆಗಳಿದ್ದರು ಕೂಡ ಪ್ರಾಣಿಗಳಿಗೆ ಅದರ ಬಗ್ಗೆ ಅರಿವು ಇರುವುದಿಲ್ಲ. ಸಾಕು ಪ್ರಾಣಿಗಳಾದರೆ, ಅದರ ಮಾಲೀಕ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾನೆ. ಆದರೆ, ಸ್ವತಂತ್ರವಾಗಿ ಅಡ್ಡಾಡಿಕೊಂಡಿರುವ ಜೀವಿಗಳು ಎಲ್ಲಿಗೆ ಹೋಗಬೇಕು? ಆದರೆ, ಇಲ್ಲೊಂದು ಕೋತಿ ತಾನಾಗೇ ಪಶು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಎಲ್ಲರ ಹುಬ್ಬೇರಿಸಿದೆ.

ಹೌದು, ಕುಂಡೆ ನೋವು ಸಹಿಸಲಾರದೇ ಮಂಗವೊಂದು ತಾನಾಗೆ ಪಶು ಆಸ್ಪತ್ರೆಗೆ ಆಗಮಿಸಿದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೂಡೂರಿನಲ್ಲಿ ನಡೆದಿದೆ.
ಗೂಡೂರಿನ ಎಸ್ ಸಿ ಪಶು ಆಸ್ಪತ್ರೆಗೆ ಬಂದ ಮಂಗವೊಂದು, ಪಶು ವೈದ್ಯರಿಗೆ ತನ್ನ ಕುಂಡೆ ಕಡೆ ಕೈ ತೋರಿಸಿ, ತನ್ನ ಸಮಸ್ಯೆಯನ್ನು ಹೇಳಿಕೊಂಡಿದೆ. ತನಗಾದ ವೇದನೆಯನ್ನು ಕೈ ಸನ್ನೆ ಮೂಲಕ ಕಪಿರಾಯ ತೋರಿಸಿದ್ದಾನೆ. ತಕ್ಷಣ ಕೋತಿಯ ನೋವನ್ನು ಅರ್ಥ ಮಾಡಿಕೊಂಡ ಪಶುವೈದ್ಯ ಜಿ.ಜಿ. ಬಿಲ್ಲೋರ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಯನ್ನು ಪಡೆದ ಮಂಗ ನಂತರ ಅಲ್ಲಿಂದ ಹೊರಟು ಹೋಯಿತು. ಈ ದೃಶ್ಯವನ್ನು ಕಂಡ ಸ್ಥಳೀಯರು ಹುಬ್ಬೇರಿಸಿದ್ದು, ಕೋತಿಯ ಬುದ್ಧಿವಂತಿಕೆಯನ್ನು ಕೊಂಡಾಡಿದ್ದಾರೆ.
Bagalkot, Monkey Visits Animal Hospital Due to bum Pain, Shows Hand to Doctor and Gets Treated.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm