ಬ್ರೇಕಿಂಗ್ ನ್ಯೂಸ್
22-05-25 12:41 pm HK News Desk ಕರ್ನಾಟಕ
ಬಾಗಲಕೋಟೆ, ಮೇ 22 : ಮಂಗಗಳು ಮನುಷ್ಯರಷ್ಟೇ ಬುದ್ಧಿವಂತ ಜೀವಿಗಳು ಎಂಬುದು ಎಲ್ಲರಿಗೂ ತಿಳಿದಿದೆ. ಮಾತನಾಡಲು ಬರುವುದಿಲ್ಲ ಅಷ್ಟೇ ಆದರೆ, ಮನಷ್ಯನಂತೆ ಯೋಚಿಸುವ ಮತ್ತು ಕೆಲಸ ಮಾಡುವ ಸಾಮರ್ಥ್ಯವಿದೆ. ಅಲ್ಲದೆ, ಮನುಷ್ಯನೊಂದಿಗೆ ತನ್ನದೇ ಶೈಲಿಯಲ್ಲಿ ಸಂವಹನ ನಡೆಸುವ ಕಲೆಯನ್ನು ಸಹ ಮಂಗಗಳು ಹೊಂದಿವೆ.
ಇದು ಆಗಾಗ ಸಾಬೀತು ಕೂಡ ಆಗಿದ್ದು, ಇದೀಗ ಮತ್ತೊಮ್ಮೆ ಸಾಬೀತಾಗಿದೆ.
ಅಂದಹಾಗೆ, ಮನುಷ್ಯನಿಗೆ ಏನಾದರೂ ಆರೋಗ್ಯ ಸಮಸ್ಯೆಯಾದರೆ ತಕ್ಷಣ ಆಸ್ಪತ್ರೆಗೆ ಹೋಗುತ್ತಾನೆ. ಆದರೆ, ಮೂಕ ಪ್ರಾಣಿಗಳಿಗೆ ಸಮಸ್ಯೆಯಾದರೆ ಎಲ್ಲಿಗೆ ಹೋಗಬೇಕು? ಪಶುವೈದ್ಯಕೀಯ ಆಸ್ಪತ್ರೆಗಳಿದ್ದರು ಕೂಡ ಪ್ರಾಣಿಗಳಿಗೆ ಅದರ ಬಗ್ಗೆ ಅರಿವು ಇರುವುದಿಲ್ಲ. ಸಾಕು ಪ್ರಾಣಿಗಳಾದರೆ, ಅದರ ಮಾಲೀಕ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾನೆ. ಆದರೆ, ಸ್ವತಂತ್ರವಾಗಿ ಅಡ್ಡಾಡಿಕೊಂಡಿರುವ ಜೀವಿಗಳು ಎಲ್ಲಿಗೆ ಹೋಗಬೇಕು? ಆದರೆ, ಇಲ್ಲೊಂದು ಕೋತಿ ತಾನಾಗೇ ಪಶು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಎಲ್ಲರ ಹುಬ್ಬೇರಿಸಿದೆ.

ಹೌದು, ಕುಂಡೆ ನೋವು ಸಹಿಸಲಾರದೇ ಮಂಗವೊಂದು ತಾನಾಗೆ ಪಶು ಆಸ್ಪತ್ರೆಗೆ ಆಗಮಿಸಿದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೂಡೂರಿನಲ್ಲಿ ನಡೆದಿದೆ.
ಗೂಡೂರಿನ ಎಸ್ ಸಿ ಪಶು ಆಸ್ಪತ್ರೆಗೆ ಬಂದ ಮಂಗವೊಂದು, ಪಶು ವೈದ್ಯರಿಗೆ ತನ್ನ ಕುಂಡೆ ಕಡೆ ಕೈ ತೋರಿಸಿ, ತನ್ನ ಸಮಸ್ಯೆಯನ್ನು ಹೇಳಿಕೊಂಡಿದೆ. ತನಗಾದ ವೇದನೆಯನ್ನು ಕೈ ಸನ್ನೆ ಮೂಲಕ ಕಪಿರಾಯ ತೋರಿಸಿದ್ದಾನೆ. ತಕ್ಷಣ ಕೋತಿಯ ನೋವನ್ನು ಅರ್ಥ ಮಾಡಿಕೊಂಡ ಪಶುವೈದ್ಯ ಜಿ.ಜಿ. ಬಿಲ್ಲೋರ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಯನ್ನು ಪಡೆದ ಮಂಗ ನಂತರ ಅಲ್ಲಿಂದ ಹೊರಟು ಹೋಯಿತು. ಈ ದೃಶ್ಯವನ್ನು ಕಂಡ ಸ್ಥಳೀಯರು ಹುಬ್ಬೇರಿಸಿದ್ದು, ಕೋತಿಯ ಬುದ್ಧಿವಂತಿಕೆಯನ್ನು ಕೊಂಡಾಡಿದ್ದಾರೆ.
Bagalkot, Monkey Visits Animal Hospital Due to bum Pain, Shows Hand to Doctor and Gets Treated.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm