ಬ್ರೇಕಿಂಗ್ ನ್ಯೂಸ್
22-05-25 09:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.22: ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರು ನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆಮೂಲಕ ಕೇಂದ್ರ ಸಚಿವ ಕುಮಾರಸ್ವಾಮಿ ವಿರೋಧಿಸಿದರೂ ಡಿಕೆ ಶಿವಕುಮಾರ್ ಹಠ ಹಿಡಿದು ಗುರಿ ಸಾಧನೆ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿ ಮಾಧ್ಯಮಕ್ಕೆ ಮಾತನಾಡಿದ ಡಿಸಿಎಂ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವ ಬಗ್ಗೆ ತೀರ್ಮಾನವಾಗಿದೆ. ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಜಿಲ್ಲೆಯ ಹೆಸರನ್ನು ಮಾತ್ರ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗುವುದು ಎಂದು ಹೇಳಿದರು.

2025ನೇ ಸಾಲಿನ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಬಿಡಿಎನಲ್ಲಿ ಜಿ ಕೆಟಗರಿ ನಿವೇಶನ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಇದೇ ವೇಳೆ ಅವರು ತಿಳಿಸಿದರು. ಅಲ್ಲದೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ) ನಿಯಮಗಳು, 1989 ಅನ್ನು ಸಡಿಲಿಕೆ ಮಾಡಲಾಗಿದೆ. ಅದರ ಪ್ರಕಾರ, ಒಂದು ಬಾರಿಯ ಕ್ರಮವಾಗಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ಪಡೆದಿರುವ ವಿವಿಧ ಸಂಘ/ಸಂಸ್ಥೆಗಳು ಬಾಕಿ ಉಳಿಸಿರುವ ಸಂಪೂರ್ಣ ಗುತ್ತಿಗೆ ಮೌಲ್ಯವನ್ನು ಪ್ರಾಧಿಕಾರವು ಪ್ರಕಟಣೆ ನೀಡಿದ 120 ದಿನಗಳೊಳಗೆ ಪಾವತಿಸಿದರೆ, ನಿಯಮಾನುಸಾರ ವಿಧಿಸಲಾಗುವ ಬಡ್ಡಿಯ ಮೊತ್ತವನ್ನು ಸಂಪೂರ್ಣ ಮನ್ನಾ ಮಾಡಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಡಿಸಿಎಂ ತಿಳಿಸಿದರು.
ಬೆಂಗಳೂರು ಮೆಟ್ರೋ ರೈಲು ಹಂತ-3 ಯೋಜನೆಯ 40,425.02 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಡಿ.ಕೆ.ಶಿವಕುಮಾರ್ ವಿವರ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಉತ್ಪತಿಯಾಗುವ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ ತ್ಯಾಜ್ಯ ಮತ್ತು ರಸ್ತೆ ತ್ಯಾಜ್ಯದ ಸಂಗ್ರಹಣೆ ಹಾಗೂ ಸಾಗಾಣಿಕೆ ಸೇವೆಗಾಗಿ 7 ವರ್ಷಗಳ ಅವಧಿಗೆ 4,791.95 ಕೋಟಿ ರೂ. ಅಂದಾಜು ಮೊತ್ತದಲ್ಲಿ 33 ಪ್ಯಾಕೇಜ್ ಗಳಾಗಿ ವಿಂಗಡಿಸಿ, ಟೆಂಡರ್ ಮೂಲಕ ಗುತ್ತಿಗೆ ನೀಡಲು ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಡಿಸಿಎಂ ತಿಳಿಸಿದರು.
The state cabinet has decided that the Ramanagara district will be renamed as Bengaluru South from Thursday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm