ಬ್ರೇಕಿಂಗ್ ನ್ಯೂಸ್
22-05-25 11:09 pm HK News Desk ಕರ್ನಾಟಕ
ಮಡಿಕೇರಿ, ಮೇ 22 : 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಕೊಡಗು ಜನರಲ್ಲಿ ಅಕ್ಷರಶಃ ಭೀತಿ ಹುಟ್ಟಿಸಿತ್ತು. ಆನಂತರವೂ ಅಲ್ಲೊಂದು ಇಲ್ಲೊಂದು ಎನ್ನುವಂತೆ ಎಡವಟ್ಟು ಆಗಿತ್ತು. ಈ ಬಾರಿ ಎಂದಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮತ್ತೆ ಪ್ರಾಕೃತಿಕ ವಿಕೋಪ ಮರುಕಳಿಸುತ್ತಾ ಎನ್ನುವ ಭೀತಿ ಉಂಟಾಗಿದೆ.
ಭಾರತೀಯ ಭೂಗರ್ಭ ಶಾಸ್ತ್ರಜ್ಞರು ಸರ್ಕಾರಕ್ಕೆ ಈ ಬಗ್ಗೆ ವರದಿ ಸಲ್ಲಿಸಿದ್ದು, ಈ ಹಿಂದೆ ಪ್ರಾಕೃತಿಕ ವಿಕೋಪ ಸಂಭವಿಸಿದ್ದ ಸ್ಥಳದಲ್ಲೇ ಮತ್ತೆ ಅಪಾಯ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಕೊಡಗಿನ 43 ಪ್ರದೇಶಗಳು ಅಪಾಯಕಾರಿ
ಕೊಡಗಿನಲ್ಲಿ ಈ ಹಿಂದೆ ಅನಾಹುತ ಸಂಭವಿಸಿದ ಜಾಗ ಸೇರಿ 43 ಪ್ರದೇಶಗಳು ಅಪಾಯಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ, ಹಟ್ಟಿಹೊಳೆ ಕಾವೇರಿ ನದಿ ಹಾಗೂ ಲಕ್ಷ್ಮಣ ತೀರ್ಥ ನದಿಯ ತಟದಲ್ಲಿ ಇರುವವರು ಎಚ್ಚರ ವಹಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿರುವುದಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ.
ವರದಿಯ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತ ಈ ಬಾರಿಯ ಮಳೆಗಾಲವನ್ನು ಎದುರಿಸಲು ಸಿದ್ಧತೆ ಮಾಡಿದೆ. ತಜ್ಞರು ಸೂಚಿಸಿದ ಪ್ರದೇಶಗಳಲ್ಲಿ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಿದೆ. ಜನರಿಗೆ ಅಗತ್ಯ ಸೇವೆ ಲಭ್ಯವಿರುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಪೊಲೀಸ್ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ, ನೋಡಲ್ ಅಧಿಕಾರಿಗಳು ಹಾಗೂ ಸ್ವಯಂಸೇವಕರನ್ನು ನೇಮಿಸಿಕೊಳ್ಳಲಾಗಿದೆ. ಪ್ರವಾಹ ಎದುರಾಗುವ ಏರಿಯಾದ ಸುತ್ತ 100 ಕ್ಕೂ ಹೆಚ್ಚು ಆಶ್ರಯ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಿದ್ದು, ಎಲ್ಲಾ ಮೂಲಭೂತ ಸೌಕರ್ಯ ಸಿದ್ಧಪಡಿಸಿಕೊಳ್ಳಲಾಗಿದೆ. ಜನತೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.
Heavy Rainfall in Kodagu This Year; Experts Warn of Potential Natural Disasters.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm