ಬ್ರೇಕಿಂಗ್ ನ್ಯೂಸ್
22-05-25 11:09 pm HK News Desk ಕರ್ನಾಟಕ
ಮಡಿಕೇರಿ, ಮೇ 22 : 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಕೊಡಗು ಜನರಲ್ಲಿ ಅಕ್ಷರಶಃ ಭೀತಿ ಹುಟ್ಟಿಸಿತ್ತು. ಆನಂತರವೂ ಅಲ್ಲೊಂದು ಇಲ್ಲೊಂದು ಎನ್ನುವಂತೆ ಎಡವಟ್ಟು ಆಗಿತ್ತು. ಈ ಬಾರಿ ಎಂದಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮತ್ತೆ ಪ್ರಾಕೃತಿಕ ವಿಕೋಪ ಮರುಕಳಿಸುತ್ತಾ ಎನ್ನುವ ಭೀತಿ ಉಂಟಾಗಿದೆ.
ಭಾರತೀಯ ಭೂಗರ್ಭ ಶಾಸ್ತ್ರಜ್ಞರು ಸರ್ಕಾರಕ್ಕೆ ಈ ಬಗ್ಗೆ ವರದಿ ಸಲ್ಲಿಸಿದ್ದು, ಈ ಹಿಂದೆ ಪ್ರಾಕೃತಿಕ ವಿಕೋಪ ಸಂಭವಿಸಿದ್ದ ಸ್ಥಳದಲ್ಲೇ ಮತ್ತೆ ಅಪಾಯ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಕೊಡಗಿನ 43 ಪ್ರದೇಶಗಳು ಅಪಾಯಕಾರಿ
ಕೊಡಗಿನಲ್ಲಿ ಈ ಹಿಂದೆ ಅನಾಹುತ ಸಂಭವಿಸಿದ ಜಾಗ ಸೇರಿ 43 ಪ್ರದೇಶಗಳು ಅಪಾಯಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ, ಹಟ್ಟಿಹೊಳೆ ಕಾವೇರಿ ನದಿ ಹಾಗೂ ಲಕ್ಷ್ಮಣ ತೀರ್ಥ ನದಿಯ ತಟದಲ್ಲಿ ಇರುವವರು ಎಚ್ಚರ ವಹಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿರುವುದಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ.
ವರದಿಯ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತ ಈ ಬಾರಿಯ ಮಳೆಗಾಲವನ್ನು ಎದುರಿಸಲು ಸಿದ್ಧತೆ ಮಾಡಿದೆ. ತಜ್ಞರು ಸೂಚಿಸಿದ ಪ್ರದೇಶಗಳಲ್ಲಿ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಿದೆ. ಜನರಿಗೆ ಅಗತ್ಯ ಸೇವೆ ಲಭ್ಯವಿರುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಪೊಲೀಸ್ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ, ನೋಡಲ್ ಅಧಿಕಾರಿಗಳು ಹಾಗೂ ಸ್ವಯಂಸೇವಕರನ್ನು ನೇಮಿಸಿಕೊಳ್ಳಲಾಗಿದೆ. ಪ್ರವಾಹ ಎದುರಾಗುವ ಏರಿಯಾದ ಸುತ್ತ 100 ಕ್ಕೂ ಹೆಚ್ಚು ಆಶ್ರಯ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಿದ್ದು, ಎಲ್ಲಾ ಮೂಲಭೂತ ಸೌಕರ್ಯ ಸಿದ್ಧಪಡಿಸಿಕೊಳ್ಳಲಾಗಿದೆ. ಜನತೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.
Heavy Rainfall in Kodagu This Year; Experts Warn of Potential Natural Disasters.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm