ಬ್ರೇಕಿಂಗ್ ನ್ಯೂಸ್
22-05-25 11:09 pm HK News Desk ಕರ್ನಾಟಕ
ಮಡಿಕೇರಿ, ಮೇ 22 : 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಕೊಡಗು ಜನರಲ್ಲಿ ಅಕ್ಷರಶಃ ಭೀತಿ ಹುಟ್ಟಿಸಿತ್ತು. ಆನಂತರವೂ ಅಲ್ಲೊಂದು ಇಲ್ಲೊಂದು ಎನ್ನುವಂತೆ ಎಡವಟ್ಟು ಆಗಿತ್ತು. ಈ ಬಾರಿ ಎಂದಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮತ್ತೆ ಪ್ರಾಕೃತಿಕ ವಿಕೋಪ ಮರುಕಳಿಸುತ್ತಾ ಎನ್ನುವ ಭೀತಿ ಉಂಟಾಗಿದೆ.
ಭಾರತೀಯ ಭೂಗರ್ಭ ಶಾಸ್ತ್ರಜ್ಞರು ಸರ್ಕಾರಕ್ಕೆ ಈ ಬಗ್ಗೆ ವರದಿ ಸಲ್ಲಿಸಿದ್ದು, ಈ ಹಿಂದೆ ಪ್ರಾಕೃತಿಕ ವಿಕೋಪ ಸಂಭವಿಸಿದ್ದ ಸ್ಥಳದಲ್ಲೇ ಮತ್ತೆ ಅಪಾಯ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಕೊಡಗಿನ 43 ಪ್ರದೇಶಗಳು ಅಪಾಯಕಾರಿ
ಕೊಡಗಿನಲ್ಲಿ ಈ ಹಿಂದೆ ಅನಾಹುತ ಸಂಭವಿಸಿದ ಜಾಗ ಸೇರಿ 43 ಪ್ರದೇಶಗಳು ಅಪಾಯಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ, ಹಟ್ಟಿಹೊಳೆ ಕಾವೇರಿ ನದಿ ಹಾಗೂ ಲಕ್ಷ್ಮಣ ತೀರ್ಥ ನದಿಯ ತಟದಲ್ಲಿ ಇರುವವರು ಎಚ್ಚರ ವಹಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿರುವುದಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ.
ವರದಿಯ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತ ಈ ಬಾರಿಯ ಮಳೆಗಾಲವನ್ನು ಎದುರಿಸಲು ಸಿದ್ಧತೆ ಮಾಡಿದೆ. ತಜ್ಞರು ಸೂಚಿಸಿದ ಪ್ರದೇಶಗಳಲ್ಲಿ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಿದೆ. ಜನರಿಗೆ ಅಗತ್ಯ ಸೇವೆ ಲಭ್ಯವಿರುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಪೊಲೀಸ್ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ, ನೋಡಲ್ ಅಧಿಕಾರಿಗಳು ಹಾಗೂ ಸ್ವಯಂಸೇವಕರನ್ನು ನೇಮಿಸಿಕೊಳ್ಳಲಾಗಿದೆ. ಪ್ರವಾಹ ಎದುರಾಗುವ ಏರಿಯಾದ ಸುತ್ತ 100 ಕ್ಕೂ ಹೆಚ್ಚು ಆಶ್ರಯ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಿದ್ದು, ಎಲ್ಲಾ ಮೂಲಭೂತ ಸೌಕರ್ಯ ಸಿದ್ಧಪಡಿಸಿಕೊಳ್ಳಲಾಗಿದೆ. ಜನತೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.
Heavy Rainfall in Kodagu This Year; Experts Warn of Potential Natural Disasters.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm