ಬ್ರೇಕಿಂಗ್ ನ್ಯೂಸ್
23-05-25 11:54 am HK News Desk ಕರ್ನಾಟಕ
ಹಾಸನ, ಮೇ 23 : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೊಬ್ಬ ಕೂಲಿಯಾಳು ಮಹಿಳೆಯನ್ನು ಕಾಡಾನೆ ತುಳಿದು ಸಾಯಿಸಿದ ಘಟನೆ ನಡೆದಿದೆ. ಕಾಡಾನೆ ದಾಳಿಗೆ ಬಲಿಯಾದ ಮಹಿಳೆಯನ್ನು ಚಂದ್ರಮ್ಮ (45) ಎಂದು ಗುರುತಿಸಲಾಗಿದೆ.
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗಜೇಂದ್ರಪುರ ಗ್ರಾಮದ ಮಹಿಳೆ ಚಂದ್ರಮ್ಮ ಅವರು, ಡಾ.ಕರುಣ್ ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ ಇಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದಾಗ ಕಾಡಾನೆ ದಾಳಿ ನಡೆಸಿದೆ.
ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ್ದು ಸೊಂಡಿಲಿನಿಂದ ಎತ್ತಿ ಬಿಸಾಡಿ, ಕಾಲಿನಿಂದ ತುಳಿದು ಬರ್ಬರವಾಗಿ ಸಾಯಿಸಿ ಹಾಕಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟ್ಟಕ್ಕೆ ಹೊಂದಿಕೊಂಡಿರುವ ಹಾಸನ ಜಿಲ್ಲೆಯ ಬೇಲೂರು, ಸಕಲೇಶಪುರ, ಅರಕಲಗೂಡು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು ಜನರು ಭೀತಿಗೊಳಗಾಗಿದ್ದಾರೆ. ಇತ್ತೀಚೆಗೆ ಮೈಸೂರಿನಿಂದ ಸಾಕಾನೆಗಳನ್ನು ತಂದು ಕಾರ್ಯಾಚರಣೆ ನಡೆಸಿದರೂ, ಫಲಕಾರಿಯಾಗಲಿಲ್ಲ.
A wild elephant trampled a woman to death at Ankihalli in Belur taluk on May 23, intensifying the human-elephant conflict in Hassan district of Karnataka. Chandramma, 45, of Gajendrapura encountered the elephant while working in an estate in the village.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm