ಬ್ರೇಕಿಂಗ್ ನ್ಯೂಸ್
23-05-25 02:35 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 23 : ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದಿನ ಅಕ್ಟೋಬರ್, ನವೆಂಬರ್ ತಿಂಗಳ ವೇಳೆಗೆ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ತಿಳಿಸಿದ್ದಾರೆ.
ತಿಪಟೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಮಾಹಿತಿ ನೀಡಿದ್ದು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸರಕಾರ ಮೀಸಲಾತಿ ನಿಗದಿಪಡಿಸಿ ಪಟ್ಟಿಯನ್ನು ನೀಡಬೇಕಿದೆ. ಇದೇ ಮೇ 30ರ ಒಳಗೆ ಸರಕಾರ ಮೀಸಲಾತಿ ಪಟ್ಟಿಯನ್ನು ಆಯೋಗಕ್ಕೆ ನೀಡುವುವಾಗಿ ತಿಳಿಸಿದ್ದು ಅದಕ್ಕಾಗಿ ಕಾಯುತ್ತಿದ್ದೇವೆ. ಮೀಸಲಾತಿ ಪಟ್ಟಿ ನೀಡಿದ ಕೂಡಲೇ ಸಿದ್ಧತೆ ಪ್ರಾರಂಭಿಸುತ್ತೇವೆ. ಸಿದ್ಧತೆ ಹಾಗೂ ಚುನಾವಣಾ ತಯಾರಿಗಾಗಿ 2-3 ತಿಂಗಳು ಬೇಕಾಗುತ್ತದೆ. ಅಂದಾಜು ದಸರಾ ನಂತರ ನವೆಂಬರ್ನಲ್ಲಿ ಜಿಪಂ, ತಾಪಂ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದರು.
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಮಾತನಾಡುತ್ತ ಡಿಸಿಎಂ ಡಿ.ಕೆ. ಶಿವಕುಮಾರ್, "ನೀವು ವಿಧಾನಸಭಾ ಚುನಾವಣೆಗೆ ದುಡಿದಿದ್ದೀರಿ, ಲೋಕಸಭಾ ಚುನಾವಣೆಗೆ ಸಹ ಶ್ರಮಿಸಿದ್ದೀರಿ. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಇರುವುದರಿಂದ ಇನ್ನಷ್ಟು ಚುರುಕಿನಿಂದ ಕೆಲಸಕ್ಕೆ ಮುಂದಾಗಬೇಕು " ಎಂದು ಹೇಳಿದ್ದರು. ಶೀಘ್ರವೇ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದೂ ತಿಳಿಸಿದ್ದರು.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳ ಅವಧಿ ಮುಕ್ತಾಯಗೊಂಡು ಸಾಕಷ್ಟು ಸಮಯವಾಗಿದ್ದು, ಗ್ರಾಮೀಣ ಭಾಗದಲ್ಲಿ ಜನ ಚುನಾವಣೆ ಎದುರು ನೋಡುತ್ತಿದ್ದಾರೆ. ಇದೇ ವೇಳೆ, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ನಿಂದ ಆಕಾಂಕ್ಷಿಗಳು ನೆಟ್ಟಗಾಗಿದ್ದು ಸ್ಥಳೀಯ ಮಟ್ಟದಲ್ಲಿ ವರ್ಚಸ್ಸು ಹೆಚ್ಚಿಸಿಕೊಳ್ಳಲು ತಯಾರಿ ಮಾಡುತ್ತಿದ್ದಾರೆ.
State Election Commission Commissioner GS Sangreshi said that the Taluk Panchayat and Zilla Panchayat elections in the state are likely to be held in October-November.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm