ಬ್ರೇಕಿಂಗ್ ನ್ಯೂಸ್
23-05-25 02:35 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 23 : ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದಿನ ಅಕ್ಟೋಬರ್, ನವೆಂಬರ್ ತಿಂಗಳ ವೇಳೆಗೆ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ತಿಳಿಸಿದ್ದಾರೆ.
ತಿಪಟೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಮಾಹಿತಿ ನೀಡಿದ್ದು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸರಕಾರ ಮೀಸಲಾತಿ ನಿಗದಿಪಡಿಸಿ ಪಟ್ಟಿಯನ್ನು ನೀಡಬೇಕಿದೆ. ಇದೇ ಮೇ 30ರ ಒಳಗೆ ಸರಕಾರ ಮೀಸಲಾತಿ ಪಟ್ಟಿಯನ್ನು ಆಯೋಗಕ್ಕೆ ನೀಡುವುವಾಗಿ ತಿಳಿಸಿದ್ದು ಅದಕ್ಕಾಗಿ ಕಾಯುತ್ತಿದ್ದೇವೆ. ಮೀಸಲಾತಿ ಪಟ್ಟಿ ನೀಡಿದ ಕೂಡಲೇ ಸಿದ್ಧತೆ ಪ್ರಾರಂಭಿಸುತ್ತೇವೆ. ಸಿದ್ಧತೆ ಹಾಗೂ ಚುನಾವಣಾ ತಯಾರಿಗಾಗಿ 2-3 ತಿಂಗಳು ಬೇಕಾಗುತ್ತದೆ. ಅಂದಾಜು ದಸರಾ ನಂತರ ನವೆಂಬರ್ನಲ್ಲಿ ಜಿಪಂ, ತಾಪಂ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದರು.
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಮಾತನಾಡುತ್ತ ಡಿಸಿಎಂ ಡಿ.ಕೆ. ಶಿವಕುಮಾರ್, "ನೀವು ವಿಧಾನಸಭಾ ಚುನಾವಣೆಗೆ ದುಡಿದಿದ್ದೀರಿ, ಲೋಕಸಭಾ ಚುನಾವಣೆಗೆ ಸಹ ಶ್ರಮಿಸಿದ್ದೀರಿ. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಇರುವುದರಿಂದ ಇನ್ನಷ್ಟು ಚುರುಕಿನಿಂದ ಕೆಲಸಕ್ಕೆ ಮುಂದಾಗಬೇಕು " ಎಂದು ಹೇಳಿದ್ದರು. ಶೀಘ್ರವೇ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದೂ ತಿಳಿಸಿದ್ದರು.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳ ಅವಧಿ ಮುಕ್ತಾಯಗೊಂಡು ಸಾಕಷ್ಟು ಸಮಯವಾಗಿದ್ದು, ಗ್ರಾಮೀಣ ಭಾಗದಲ್ಲಿ ಜನ ಚುನಾವಣೆ ಎದುರು ನೋಡುತ್ತಿದ್ದಾರೆ. ಇದೇ ವೇಳೆ, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ನಿಂದ ಆಕಾಂಕ್ಷಿಗಳು ನೆಟ್ಟಗಾಗಿದ್ದು ಸ್ಥಳೀಯ ಮಟ್ಟದಲ್ಲಿ ವರ್ಚಸ್ಸು ಹೆಚ್ಚಿಸಿಕೊಳ್ಳಲು ತಯಾರಿ ಮಾಡುತ್ತಿದ್ದಾರೆ.
State Election Commission Commissioner GS Sangreshi said that the Taluk Panchayat and Zilla Panchayat elections in the state are likely to be held in October-November.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm