ಬ್ರೇಕಿಂಗ್ ನ್ಯೂಸ್
24-05-25 07:45 pm HK News Desk ಕರ್ನಾಟಕ
ಮೈಸೂರು, ಮೇ 24 : ಮಗಳು ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಕಾರಣ ಮನನೊಂದು ಒಂದೇ ಕುಟುಂಬದ ಮೂರು ಜನ ಹೆಬ್ಬಾಳ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದ ನಿವಾಸಿಗಳಾದ ಮಹಾದೇವ ಸ್ವಾಮಿ (55) ಮಂಜುಳಾ (45) ಹಾಗೂ ಇವರ ಕಿರಿಯ ಮಗಳು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡವರು.

ಇವರೆಲ್ಲ ತಾಲೂಕಿನ ಬುದನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಇಂದು ಬೆಳಗ್ಗೆ ಬೈಕ್ನಲ್ಲಿ ಜಲಾಶಯಕ್ಕೆ ಬಂದ ಇವರು ಬೈಕ್ ನಿಲ್ಲಿಸಿ, ಅಲ್ಲೆ ಚಪ್ಪಲಿ ಬಿಟ್ಟು ಡೆತ್ನೋಟ್ ಬರೆದಿಟ್ಟು ನೀರಿಗೆ ಹಾರಿದ್ದಾರೆ.
ಈ ಮಾರ್ಗವಾಗಿ ಹೋಗುತ್ತಿದ್ದ ಅದೇ ಗ್ರಾಮಸ್ಥರು ಬೈಕ್ ಗಮನಿಸಿ ಹತ್ತಿರ ಬಂದಾಗ ವಿಷಯ ತಿಳಿದಿದೆ. ತಕ್ಷಣ ಗ್ರಾಮಸ್ಥರು ಎಚ್.ಡಿ.ಕೋಟೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಮೂವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರಿಕ್ಷೆಗೆ ಎಚ್.ಡಿ.ಕೋಟಿ ಶವಾಗಾರಕ್ಕೆ ಕಳುಹಿಸಿದ್ದಾರೆ.
ಇತ್ತೀಚೆಗೆ ಮಹಾದೇವಸ್ವಾಮಿ ದಂಪತಿಯ ಮೊದಲ ಮಗಳು ಪ್ರೀತಿಸಿ ಮದುವೆಯಾಗಲು ಮನೆಬಿಟ್ಟು ಹೋದ ಕಾರಣ ಮರ್ಯಾದೆಗೆ ಅಂಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಡೆತ್ನೋಟ್ನಲ್ಲಿ ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತ ಪಡಿಸಿವೆ.
ಈ ಬಗ್ಗೆ ತನಿಖೆಯಿಂದ ಹೆಚ್ಚಿನ ವಿಷಯ ತಿಳಿದು ಬರಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಈಟಿವಿ ಭಾರತ್ಗೆ ಮಾಹಿತಿ ನೀಡಿದರು.
Girl Elopes with Lover; Three Family Members Die by Suicide in Mysuru, Shaken by Shame.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm