ಬ್ರೇಕಿಂಗ್ ನ್ಯೂಸ್
26-05-25 07:23 pm HK News Desk ಕರ್ನಾಟಕ
ಮಡಿಕೇರಿ, ಮೇ 26 : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಆರಂಭದಲ್ಲೇ ಮಳೆ ತೀವ್ರಗೊಂಡಿದ್ದು, ಮಳೆಯಿಂದಾಗಿ ಅನಾಹುತ ಉಂಟಾಗುವ ಸಾಧ್ಯತೆ ಇರುವುದರಿಂದ ಹೆದ್ದಾರಿ ಮತ್ತು ರಸ್ತೆಗಳ ಕುಸಿತ ಆಗುವುದನ್ನು ತಪ್ಪಿಸಲು ಕೊಡಗು ಜಿಲ್ಲೆಯಾದ್ಯಂತ ಎಲ್ಲ ರೀತಿಯ ಸರಕು ಸಾಗಾಟದ ಲಾರಿಗಳು, ಭಾರದ ಟ್ಯಾಂಕರ್ ಇನ್ನಿತರ ಘನ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕೈದು ವರ್ಷಗಳಲ್ಲಿ ಪ್ರತಿ ಬಾರಿಯೂ ಮಳೆಗಾಲದಲ್ಲಿ ಅನಾಹುತ ಸಂಭವಿಸಿದ್ದು, ರಸ್ತೆಗಳು ಕುಸಿತಗೊಂಡು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ ಸಾರ್ವಜನಿಕ ಆಸ್ತಿಯ ಸುರಕ್ಷತೆ ದೃಷ್ಟಿಯಿಂದ 18,500 ಕೇಜಿಗಿಂತ ಹೆಚ್ಚು ಭಾರವುಳ್ಳ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸೆಲ್ ಟ್ರಕ್ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೇನರ್ಸ್, ಲಾಂಗ್ ಚೇಸಿಸ್ ಆರ್ಟಿಕ್ಯುಲೇಟೆಡ್ ವಾಹನಗಳು, ಮರಳು ಸಾಗಾಟ- ಮರದ ದಿಮ್ಮಿ ಸಾಗಾಟದ ಎಲ್ಲ ರೀತಿಯ ವಾಹನಗಳನ್ನು ಕೊಡಗು ಜಿಲ್ಲೆಯಾದ್ಯಂತ ಒಂದು ತಿಂಗಳ ಕಾಲ ನಿಷೇಧಿಸಲಾಗಿದೆ.
ಸದ್ಯಕ್ಕೆ ಜೂನ್ 6ರಿಂದ ಜುಲೈ 5ರ ವರೆಗೆ ಘನ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯ ಯಾವುದೇ ರಸ್ತೆಯಲ್ಲಿ ಸಂಚರಿಸುವುದಕ್ಕೆ ನಿಷೇಧ ವಿಧಿಸಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದು, ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸೆಲ್ ಬಸ್ ಗಳು ಸೇರಿದಂತೆ) ಸಂಚಾರಕ್ಕೆ ವಿನಾಯ್ತಿ ನೀಡಲಾಗಿದೆ. ಕೊಡಗು ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಜಿಲ್ಲೆಯ ಗಡಿಭಾಗವಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ದಿನದ 24 ಗಂಟೆಯೂ ಸಿಬಂದಿ ನಿಯೋಜಿಸಿ ಆದೇಶ ಪಾಲನೆಯಾಗುವಂತೆ ನೋಡಿಕೊಳ್ಳಲು ಪೊಲೀಸರಿಗೆ ಮತ್ತು ಪ್ರಾದೇಶಿಕ ಸಾರಿಗೆ ಆಯುಕ್ತರಿಗೂ ಸೂಚಿಸಿದ್ದಾರೆ.
Heavy Rains Prompt Ban on Goods Trucks and Tankers Across Kodagu, Exemption Given to Transport Buses.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm