ಬ್ರೇಕಿಂಗ್ ನ್ಯೂಸ್
26-05-25 07:23 pm HK News Desk ಕರ್ನಾಟಕ
ಮಡಿಕೇರಿ, ಮೇ 26 : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಆರಂಭದಲ್ಲೇ ಮಳೆ ತೀವ್ರಗೊಂಡಿದ್ದು, ಮಳೆಯಿಂದಾಗಿ ಅನಾಹುತ ಉಂಟಾಗುವ ಸಾಧ್ಯತೆ ಇರುವುದರಿಂದ ಹೆದ್ದಾರಿ ಮತ್ತು ರಸ್ತೆಗಳ ಕುಸಿತ ಆಗುವುದನ್ನು ತಪ್ಪಿಸಲು ಕೊಡಗು ಜಿಲ್ಲೆಯಾದ್ಯಂತ ಎಲ್ಲ ರೀತಿಯ ಸರಕು ಸಾಗಾಟದ ಲಾರಿಗಳು, ಭಾರದ ಟ್ಯಾಂಕರ್ ಇನ್ನಿತರ ಘನ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕೈದು ವರ್ಷಗಳಲ್ಲಿ ಪ್ರತಿ ಬಾರಿಯೂ ಮಳೆಗಾಲದಲ್ಲಿ ಅನಾಹುತ ಸಂಭವಿಸಿದ್ದು, ರಸ್ತೆಗಳು ಕುಸಿತಗೊಂಡು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ ಸಾರ್ವಜನಿಕ ಆಸ್ತಿಯ ಸುರಕ್ಷತೆ ದೃಷ್ಟಿಯಿಂದ 18,500 ಕೇಜಿಗಿಂತ ಹೆಚ್ಚು ಭಾರವುಳ್ಳ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸೆಲ್ ಟ್ರಕ್ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೇನರ್ಸ್, ಲಾಂಗ್ ಚೇಸಿಸ್ ಆರ್ಟಿಕ್ಯುಲೇಟೆಡ್ ವಾಹನಗಳು, ಮರಳು ಸಾಗಾಟ- ಮರದ ದಿಮ್ಮಿ ಸಾಗಾಟದ ಎಲ್ಲ ರೀತಿಯ ವಾಹನಗಳನ್ನು ಕೊಡಗು ಜಿಲ್ಲೆಯಾದ್ಯಂತ ಒಂದು ತಿಂಗಳ ಕಾಲ ನಿಷೇಧಿಸಲಾಗಿದೆ.
ಸದ್ಯಕ್ಕೆ ಜೂನ್ 6ರಿಂದ ಜುಲೈ 5ರ ವರೆಗೆ ಘನ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯ ಯಾವುದೇ ರಸ್ತೆಯಲ್ಲಿ ಸಂಚರಿಸುವುದಕ್ಕೆ ನಿಷೇಧ ವಿಧಿಸಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದು, ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸೆಲ್ ಬಸ್ ಗಳು ಸೇರಿದಂತೆ) ಸಂಚಾರಕ್ಕೆ ವಿನಾಯ್ತಿ ನೀಡಲಾಗಿದೆ. ಕೊಡಗು ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಜಿಲ್ಲೆಯ ಗಡಿಭಾಗವಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ದಿನದ 24 ಗಂಟೆಯೂ ಸಿಬಂದಿ ನಿಯೋಜಿಸಿ ಆದೇಶ ಪಾಲನೆಯಾಗುವಂತೆ ನೋಡಿಕೊಳ್ಳಲು ಪೊಲೀಸರಿಗೆ ಮತ್ತು ಪ್ರಾದೇಶಿಕ ಸಾರಿಗೆ ಆಯುಕ್ತರಿಗೂ ಸೂಚಿಸಿದ್ದಾರೆ.
Heavy Rains Prompt Ban on Goods Trucks and Tankers Across Kodagu, Exemption Given to Transport Buses.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm