ಬ್ರೇಕಿಂಗ್ ನ್ಯೂಸ್
26-05-25 07:23 pm HK News Desk ಕರ್ನಾಟಕ
ಮಡಿಕೇರಿ, ಮೇ 26 : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಆರಂಭದಲ್ಲೇ ಮಳೆ ತೀವ್ರಗೊಂಡಿದ್ದು, ಮಳೆಯಿಂದಾಗಿ ಅನಾಹುತ ಉಂಟಾಗುವ ಸಾಧ್ಯತೆ ಇರುವುದರಿಂದ ಹೆದ್ದಾರಿ ಮತ್ತು ರಸ್ತೆಗಳ ಕುಸಿತ ಆಗುವುದನ್ನು ತಪ್ಪಿಸಲು ಕೊಡಗು ಜಿಲ್ಲೆಯಾದ್ಯಂತ ಎಲ್ಲ ರೀತಿಯ ಸರಕು ಸಾಗಾಟದ ಲಾರಿಗಳು, ಭಾರದ ಟ್ಯಾಂಕರ್ ಇನ್ನಿತರ ಘನ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕೈದು ವರ್ಷಗಳಲ್ಲಿ ಪ್ರತಿ ಬಾರಿಯೂ ಮಳೆಗಾಲದಲ್ಲಿ ಅನಾಹುತ ಸಂಭವಿಸಿದ್ದು, ರಸ್ತೆಗಳು ಕುಸಿತಗೊಂಡು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ ಸಾರ್ವಜನಿಕ ಆಸ್ತಿಯ ಸುರಕ್ಷತೆ ದೃಷ್ಟಿಯಿಂದ 18,500 ಕೇಜಿಗಿಂತ ಹೆಚ್ಚು ಭಾರವುಳ್ಳ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸೆಲ್ ಟ್ರಕ್ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೇನರ್ಸ್, ಲಾಂಗ್ ಚೇಸಿಸ್ ಆರ್ಟಿಕ್ಯುಲೇಟೆಡ್ ವಾಹನಗಳು, ಮರಳು ಸಾಗಾಟ- ಮರದ ದಿಮ್ಮಿ ಸಾಗಾಟದ ಎಲ್ಲ ರೀತಿಯ ವಾಹನಗಳನ್ನು ಕೊಡಗು ಜಿಲ್ಲೆಯಾದ್ಯಂತ ಒಂದು ತಿಂಗಳ ಕಾಲ ನಿಷೇಧಿಸಲಾಗಿದೆ.
ಸದ್ಯಕ್ಕೆ ಜೂನ್ 6ರಿಂದ ಜುಲೈ 5ರ ವರೆಗೆ ಘನ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯ ಯಾವುದೇ ರಸ್ತೆಯಲ್ಲಿ ಸಂಚರಿಸುವುದಕ್ಕೆ ನಿಷೇಧ ವಿಧಿಸಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದು, ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸೆಲ್ ಬಸ್ ಗಳು ಸೇರಿದಂತೆ) ಸಂಚಾರಕ್ಕೆ ವಿನಾಯ್ತಿ ನೀಡಲಾಗಿದೆ. ಕೊಡಗು ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಜಿಲ್ಲೆಯ ಗಡಿಭಾಗವಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ದಿನದ 24 ಗಂಟೆಯೂ ಸಿಬಂದಿ ನಿಯೋಜಿಸಿ ಆದೇಶ ಪಾಲನೆಯಾಗುವಂತೆ ನೋಡಿಕೊಳ್ಳಲು ಪೊಲೀಸರಿಗೆ ಮತ್ತು ಪ್ರಾದೇಶಿಕ ಸಾರಿಗೆ ಆಯುಕ್ತರಿಗೂ ಸೂಚಿಸಿದ್ದಾರೆ.
Heavy Rains Prompt Ban on Goods Trucks and Tankers Across Kodagu, Exemption Given to Transport Buses.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm