ಬ್ರೇಕಿಂಗ್ ನ್ಯೂಸ್
29-05-25 02:19 pm HK News Desk ಕರ್ನಾಟಕ
ಬಾಗಲಕೋಟೆ, ಮೇ 29 : ಕೊರೋನಾ ಆತಂಕದ ಮಧ್ಯೆ ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಬಾಗಲಕೋಟೆ ವ್ಯಾಪ್ತಿಯ ಸಾಕಾಣಿಕಾ ಕೇಂದ್ರಗಳ ಹಂದಿಗಳಲ್ಲಿ ಆಪ್ರಿಕನ್ ಹಂದಿ ಜ್ವರ ಕಂಡುಬಂದಿದ್ದು ಸಾಮೂಹಿಕ ಹತ್ಯೆಗೈದು ವಿಲೇವಾರಿ ಮಾಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕೇರಳ ಇಲ್ಲವೇ ಗೋವಾದಿಂದ ತರಿಸಿಕೊಂಡ ಹಂದಿಗಳಿಂದ ಜ್ವರ ಬಂದಿರುವ ಶಂಕೆಯಿದೆ. ಬಾಗಲಕೋಟೆ ಜಿಲ್ಲೆಯ
ಗೊರಬಾಳ ಗ್ರಾಮದ ಹಂದಿಗಳ ಸಾಕಾಣಿಕಾ ಕೇಂದ್ರದಲ್ಲಿ ಜ್ವರ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯಾದ್ಯಂತ ಈಗಾಗಲೇ 20ಕ್ಕೂ ಅಧಿಕ ಸಾಕಾಣಿಕೆ ಕೇಂದ್ರಗಳಿದ್ದು ಹಂದಿ ಸಾಕಾಣಿಕೆದಾರರು ಆತಂಕಗೊಂಡಿದ್ದಾರೆ.
ಆಫ್ರಿಕನ್ ಜ್ವರ ಕಾಣಿಸಿಕೊಂಡ ಸುತ್ತಮುತ್ತಲಿನ ಪ್ರದೇಶ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಮೇ 15ರಂದು ಬಾಗಲಕೋಟೆಯಿಂದ ಭೋಪಾಲ್ ನ ಲ್ಯಾಬೊರೇಟರಿಗೆ ಹಂದಿಗಳ ರಕ್ತದ ಮಾದರಿ ರವಾನಿಸಿದ್ದು ಮೇ 22ರಂದು ಬಂದಿರುವ ವರದಿಯಲ್ಲಿ ಹಂದಿಗಳಿಗೆ ಆಫ್ರಿಕನ್ ಜ್ವರ ಇರೋದು ಧೃಢವಾಗಿದೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧಿಸೂಚನೆ ಪ್ರಕಟಿಸಿದ್ದು ಸಾಮೂಹಿಕ ವಿಲೇವಾರಿಗೆ ಸೂಚನೆ ನೀಡಿದ್ದಾರೆ.
ಇದರಂತೆ, ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ರ್ಯಾಪಿಡ್ ಟೀಮ್ ಕಾರ್ಯಾಚರಣೆ ಮಾಡುತ್ತಿದ್ದು ಬಾಗಲಕೋಟೆ ಜಿಲ್ಲೆಯಿಂದ ಮೂರು ತಿಂಗಳ ಕಾಲ ಯಾವುದೇ ರೀತಿಯ ಹಂದಿಗಳನ್ನು ಆಮದು ಅಥವಾ ರಫ್ತು ಮಾಡುವುದು ನಿಷೇಧ ಮಾಡಲಾಗಿದೆ. ರೋಗ ಪತ್ತೆಯಾದ ಜಾಗದಿಂದ 1 ಕಿಮೀ ರೋಗಪೀಡಿತ ವಲಯ, 1 ರಿಂದ 10 ಕಿಮೀ ಜಾಗೃತ ವಲಯ ಎಂದು ಘೋಷಣೆ ಮಾಡಲಾಗಿದೆ.
ರೋಗ ಪೀಡಿತ ವಲಯ ವ್ಯಾಪ್ತಿಯ ಹಂದಿಗಳ ವಿಲೇವಾರಿಗೆ ಸೂಚನೆ ನೀಡಲಾಗಿದೆ. ಎರಡು ಹಂದಿಗಳ ಸಾಕಾಣಿಕೆ ಕೇಂದ್ರದ 130 ಹಂದಿಗಳ ವಧೆ ಮತ್ತು ವೈಜ್ಞಾನಿಕ ವಿಲೇವಾರಿಗೆ ಸೂಚಿಸಲಾಗಿದೆ. ಇದೇ ವೇಳೆ, ಬಾಗಲಕೋಟೆ ಜಿಲ್ಲೆಯ 18 ಸಾಕಾಣಿಕಾ ಕೇಂದ್ರದಲ್ಲಿರುವ 20 ಸಾವಿರ ಹಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ವ್ಯಾಕ್ಸಿನ್ ನೀಡಲಾಗಿದೆ.
Amid COVID Concerns, African Swine Fever Confirmed in Karnataka, Outbreak Detected in Bagalkote District, Ban on Pork Transport Imposed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am