ಬ್ರೇಕಿಂಗ್ ನ್ಯೂಸ್
29-05-25 02:19 pm HK News Desk ಕರ್ನಾಟಕ
ಬಾಗಲಕೋಟೆ, ಮೇ 29 : ಕೊರೋನಾ ಆತಂಕದ ಮಧ್ಯೆ ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಬಾಗಲಕೋಟೆ ವ್ಯಾಪ್ತಿಯ ಸಾಕಾಣಿಕಾ ಕೇಂದ್ರಗಳ ಹಂದಿಗಳಲ್ಲಿ ಆಪ್ರಿಕನ್ ಹಂದಿ ಜ್ವರ ಕಂಡುಬಂದಿದ್ದು ಸಾಮೂಹಿಕ ಹತ್ಯೆಗೈದು ವಿಲೇವಾರಿ ಮಾಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕೇರಳ ಇಲ್ಲವೇ ಗೋವಾದಿಂದ ತರಿಸಿಕೊಂಡ ಹಂದಿಗಳಿಂದ ಜ್ವರ ಬಂದಿರುವ ಶಂಕೆಯಿದೆ. ಬಾಗಲಕೋಟೆ ಜಿಲ್ಲೆಯ
ಗೊರಬಾಳ ಗ್ರಾಮದ ಹಂದಿಗಳ ಸಾಕಾಣಿಕಾ ಕೇಂದ್ರದಲ್ಲಿ ಜ್ವರ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯಾದ್ಯಂತ ಈಗಾಗಲೇ 20ಕ್ಕೂ ಅಧಿಕ ಸಾಕಾಣಿಕೆ ಕೇಂದ್ರಗಳಿದ್ದು ಹಂದಿ ಸಾಕಾಣಿಕೆದಾರರು ಆತಂಕಗೊಂಡಿದ್ದಾರೆ.
ಆಫ್ರಿಕನ್ ಜ್ವರ ಕಾಣಿಸಿಕೊಂಡ ಸುತ್ತಮುತ್ತಲಿನ ಪ್ರದೇಶ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಮೇ 15ರಂದು ಬಾಗಲಕೋಟೆಯಿಂದ ಭೋಪಾಲ್ ನ ಲ್ಯಾಬೊರೇಟರಿಗೆ ಹಂದಿಗಳ ರಕ್ತದ ಮಾದರಿ ರವಾನಿಸಿದ್ದು ಮೇ 22ರಂದು ಬಂದಿರುವ ವರದಿಯಲ್ಲಿ ಹಂದಿಗಳಿಗೆ ಆಫ್ರಿಕನ್ ಜ್ವರ ಇರೋದು ಧೃಢವಾಗಿದೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧಿಸೂಚನೆ ಪ್ರಕಟಿಸಿದ್ದು ಸಾಮೂಹಿಕ ವಿಲೇವಾರಿಗೆ ಸೂಚನೆ ನೀಡಿದ್ದಾರೆ.
ಇದರಂತೆ, ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ರ್ಯಾಪಿಡ್ ಟೀಮ್ ಕಾರ್ಯಾಚರಣೆ ಮಾಡುತ್ತಿದ್ದು ಬಾಗಲಕೋಟೆ ಜಿಲ್ಲೆಯಿಂದ ಮೂರು ತಿಂಗಳ ಕಾಲ ಯಾವುದೇ ರೀತಿಯ ಹಂದಿಗಳನ್ನು ಆಮದು ಅಥವಾ ರಫ್ತು ಮಾಡುವುದು ನಿಷೇಧ ಮಾಡಲಾಗಿದೆ. ರೋಗ ಪತ್ತೆಯಾದ ಜಾಗದಿಂದ 1 ಕಿಮೀ ರೋಗಪೀಡಿತ ವಲಯ, 1 ರಿಂದ 10 ಕಿಮೀ ಜಾಗೃತ ವಲಯ ಎಂದು ಘೋಷಣೆ ಮಾಡಲಾಗಿದೆ.
ರೋಗ ಪೀಡಿತ ವಲಯ ವ್ಯಾಪ್ತಿಯ ಹಂದಿಗಳ ವಿಲೇವಾರಿಗೆ ಸೂಚನೆ ನೀಡಲಾಗಿದೆ. ಎರಡು ಹಂದಿಗಳ ಸಾಕಾಣಿಕೆ ಕೇಂದ್ರದ 130 ಹಂದಿಗಳ ವಧೆ ಮತ್ತು ವೈಜ್ಞಾನಿಕ ವಿಲೇವಾರಿಗೆ ಸೂಚಿಸಲಾಗಿದೆ. ಇದೇ ವೇಳೆ, ಬಾಗಲಕೋಟೆ ಜಿಲ್ಲೆಯ 18 ಸಾಕಾಣಿಕಾ ಕೇಂದ್ರದಲ್ಲಿರುವ 20 ಸಾವಿರ ಹಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ವ್ಯಾಕ್ಸಿನ್ ನೀಡಲಾಗಿದೆ.
Amid COVID Concerns, African Swine Fever Confirmed in Karnataka, Outbreak Detected in Bagalkote District, Ban on Pork Transport Imposed.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm