ಬ್ರೇಕಿಂಗ್ ನ್ಯೂಸ್
29-05-25 02:19 pm HK News Desk ಕರ್ನಾಟಕ
ಬಾಗಲಕೋಟೆ, ಮೇ 29 : ಕೊರೋನಾ ಆತಂಕದ ಮಧ್ಯೆ ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಬಾಗಲಕೋಟೆ ವ್ಯಾಪ್ತಿಯ ಸಾಕಾಣಿಕಾ ಕೇಂದ್ರಗಳ ಹಂದಿಗಳಲ್ಲಿ ಆಪ್ರಿಕನ್ ಹಂದಿ ಜ್ವರ ಕಂಡುಬಂದಿದ್ದು ಸಾಮೂಹಿಕ ಹತ್ಯೆಗೈದು ವಿಲೇವಾರಿ ಮಾಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕೇರಳ ಇಲ್ಲವೇ ಗೋವಾದಿಂದ ತರಿಸಿಕೊಂಡ ಹಂದಿಗಳಿಂದ ಜ್ವರ ಬಂದಿರುವ ಶಂಕೆಯಿದೆ. ಬಾಗಲಕೋಟೆ ಜಿಲ್ಲೆಯ
ಗೊರಬಾಳ ಗ್ರಾಮದ ಹಂದಿಗಳ ಸಾಕಾಣಿಕಾ ಕೇಂದ್ರದಲ್ಲಿ ಜ್ವರ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯಾದ್ಯಂತ ಈಗಾಗಲೇ 20ಕ್ಕೂ ಅಧಿಕ ಸಾಕಾಣಿಕೆ ಕೇಂದ್ರಗಳಿದ್ದು ಹಂದಿ ಸಾಕಾಣಿಕೆದಾರರು ಆತಂಕಗೊಂಡಿದ್ದಾರೆ.
ಆಫ್ರಿಕನ್ ಜ್ವರ ಕಾಣಿಸಿಕೊಂಡ ಸುತ್ತಮುತ್ತಲಿನ ಪ್ರದೇಶ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಮೇ 15ರಂದು ಬಾಗಲಕೋಟೆಯಿಂದ ಭೋಪಾಲ್ ನ ಲ್ಯಾಬೊರೇಟರಿಗೆ ಹಂದಿಗಳ ರಕ್ತದ ಮಾದರಿ ರವಾನಿಸಿದ್ದು ಮೇ 22ರಂದು ಬಂದಿರುವ ವರದಿಯಲ್ಲಿ ಹಂದಿಗಳಿಗೆ ಆಫ್ರಿಕನ್ ಜ್ವರ ಇರೋದು ಧೃಢವಾಗಿದೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧಿಸೂಚನೆ ಪ್ರಕಟಿಸಿದ್ದು ಸಾಮೂಹಿಕ ವಿಲೇವಾರಿಗೆ ಸೂಚನೆ ನೀಡಿದ್ದಾರೆ.
ಇದರಂತೆ, ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ರ್ಯಾಪಿಡ್ ಟೀಮ್ ಕಾರ್ಯಾಚರಣೆ ಮಾಡುತ್ತಿದ್ದು ಬಾಗಲಕೋಟೆ ಜಿಲ್ಲೆಯಿಂದ ಮೂರು ತಿಂಗಳ ಕಾಲ ಯಾವುದೇ ರೀತಿಯ ಹಂದಿಗಳನ್ನು ಆಮದು ಅಥವಾ ರಫ್ತು ಮಾಡುವುದು ನಿಷೇಧ ಮಾಡಲಾಗಿದೆ. ರೋಗ ಪತ್ತೆಯಾದ ಜಾಗದಿಂದ 1 ಕಿಮೀ ರೋಗಪೀಡಿತ ವಲಯ, 1 ರಿಂದ 10 ಕಿಮೀ ಜಾಗೃತ ವಲಯ ಎಂದು ಘೋಷಣೆ ಮಾಡಲಾಗಿದೆ.
ರೋಗ ಪೀಡಿತ ವಲಯ ವ್ಯಾಪ್ತಿಯ ಹಂದಿಗಳ ವಿಲೇವಾರಿಗೆ ಸೂಚನೆ ನೀಡಲಾಗಿದೆ. ಎರಡು ಹಂದಿಗಳ ಸಾಕಾಣಿಕೆ ಕೇಂದ್ರದ 130 ಹಂದಿಗಳ ವಧೆ ಮತ್ತು ವೈಜ್ಞಾನಿಕ ವಿಲೇವಾರಿಗೆ ಸೂಚಿಸಲಾಗಿದೆ. ಇದೇ ವೇಳೆ, ಬಾಗಲಕೋಟೆ ಜಿಲ್ಲೆಯ 18 ಸಾಕಾಣಿಕಾ ಕೇಂದ್ರದಲ್ಲಿರುವ 20 ಸಾವಿರ ಹಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ವ್ಯಾಕ್ಸಿನ್ ನೀಡಲಾಗಿದೆ.
Amid COVID Concerns, African Swine Fever Confirmed in Karnataka, Outbreak Detected in Bagalkote District, Ban on Pork Transport Imposed.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm