ಬ್ರೇಕಿಂಗ್ ನ್ಯೂಸ್
29-05-25 02:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರಿಗೆ ಸಿಎಂ ಸಿದ್ದರಾಮಯ್ಯ ಹೊಸ ಜವಾಬ್ದಾರಿ ನೀಡಿದ್ದಾರೆ. ಗುರುವಾರ ಸದಾಶಿವ ನಗರದಲ್ಲಿ ಇರುವ ಅವರ ನಿವಾಸಕ್ಕೆ ದಿಢೀರ್ ಭೇಟಿ ಕೊಟ್ಟ ಸಿಎಂ ಕೆಲ ಹೊತ್ತು ಮಾತುಕತೆ ನಡೆಸಿದರು. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜವಾಬ್ದಾರಿ ನೀಡಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಹರಿಪ್ರಸಾದ್ ಅವರು ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಹಾಗಾಗಿ ಬರುತ್ತೇನೆ ಎಂದಿದ್ದೆ. ಅದರಂತೆ ಇಲ್ಲಿಗೆ ಬಂದಿದ್ದೆ. ರಾಜಕೀಯ ಚರ್ಚೆ ಸೇರಿ ಮಂಗಳೂರಿನ ವಿಚಾರ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಭೇಟಿ ಸಂದರ್ಭದಲ್ಲಿ ರಾಜಕೀಯ ಚರ್ಚೆ ಅಂತ ಮಾಡಿಲ್ಲ. ಬದಲಾಗಿ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಅದರಲ್ಲಿ ಮಂಗಳೂರು ವಿಚಾರ ಚರ್ಚೆ ಯಾಗಿದೆ. ಅಲ್ಲಿ ಸೌಹಾರ್ದತೆ ಸೃಷ್ಟಿ ಆಗಬೇಕು. ಹಿಂದುಗಳು ಮುಸ್ಲಿಂ ನಡುವೆ ಯಾವುದೇ ದ್ವೇಷ ಇರಬಾರದು. ಈ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದೇವೆ ಎಂದರು.
ಮಂಗಳೂರಿಗೆ ಬಿಕೆ ಹರಿಪ್ರಸಾದ್;
ಬಿಕೆ ಹರಿಪ್ರಸಾದ್ ಗೆ ಮಂಗಳೂರಿಗೆ ಹೋಗಿ ಬನ್ನಿ ಎಂದಿದ್ದೇನೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕಿಸಿ ಬನ್ನಿ ಎಂದಿದ್ದೇನೆ ಎಂದರು.
ಮಂಗಳೂರಲ್ಲಿ ಸಾಲು ಸಾಲು ಹತ್ಯೆಗಳ ಬಗ್ಗೆ ಮಾತನಾಡಿ, ಯಾರೇ ಎಷ್ಟೇ ಪ್ರಭಾವಿ ಇದ್ದರೂ ಕೂಡ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾರು ಕಾನೂನಿನಿಂತ ದೊಡ್ಡ ವರು ಅಲ್ಲ, ಕಾನೂನೇ ಎಲ್ಲರಿಗಿಂತ ದೊಡ್ಡದು. ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೂರು ಕೊಲೆಗಳು ನಡೆದಿವೆ. ಅಶ್ರಫ್, ಸುಹಾಸ್ ಶೆಟ್ಟಿ ಹತ್ಯೆ ನಡೆದಿತ್ತು. ಇದೀಗ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಅಬ್ದುಲ್ ರೆಹ್ಮಾನ್ ಹತ್ಯೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣ ಆಗಿದೆ. ಮೇ 30 ರವರೆಗೆ ನಿಷೇಧಾಜ಼್ಞೆ ಜಾರಿಗೊಳಿಸಲಾಗಿದೆ.
CM Holds Breakfast Meeting with Congress MLC B K Hariprasad, Plans Visit to Mangalore Amid Communal Tensions.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm