ಬ್ರೇಕಿಂಗ್ ನ್ಯೂಸ್
29-05-25 02:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರಿಗೆ ಸಿಎಂ ಸಿದ್ದರಾಮಯ್ಯ ಹೊಸ ಜವಾಬ್ದಾರಿ ನೀಡಿದ್ದಾರೆ. ಗುರುವಾರ ಸದಾಶಿವ ನಗರದಲ್ಲಿ ಇರುವ ಅವರ ನಿವಾಸಕ್ಕೆ ದಿಢೀರ್ ಭೇಟಿ ಕೊಟ್ಟ ಸಿಎಂ ಕೆಲ ಹೊತ್ತು ಮಾತುಕತೆ ನಡೆಸಿದರು. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜವಾಬ್ದಾರಿ ನೀಡಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಹರಿಪ್ರಸಾದ್ ಅವರು ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಹಾಗಾಗಿ ಬರುತ್ತೇನೆ ಎಂದಿದ್ದೆ. ಅದರಂತೆ ಇಲ್ಲಿಗೆ ಬಂದಿದ್ದೆ. ರಾಜಕೀಯ ಚರ್ಚೆ ಸೇರಿ ಮಂಗಳೂರಿನ ವಿಚಾರ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಭೇಟಿ ಸಂದರ್ಭದಲ್ಲಿ ರಾಜಕೀಯ ಚರ್ಚೆ ಅಂತ ಮಾಡಿಲ್ಲ. ಬದಲಾಗಿ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಅದರಲ್ಲಿ ಮಂಗಳೂರು ವಿಚಾರ ಚರ್ಚೆ ಯಾಗಿದೆ. ಅಲ್ಲಿ ಸೌಹಾರ್ದತೆ ಸೃಷ್ಟಿ ಆಗಬೇಕು. ಹಿಂದುಗಳು ಮುಸ್ಲಿಂ ನಡುವೆ ಯಾವುದೇ ದ್ವೇಷ ಇರಬಾರದು. ಈ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದೇವೆ ಎಂದರು.
ಮಂಗಳೂರಿಗೆ ಬಿಕೆ ಹರಿಪ್ರಸಾದ್;
ಬಿಕೆ ಹರಿಪ್ರಸಾದ್ ಗೆ ಮಂಗಳೂರಿಗೆ ಹೋಗಿ ಬನ್ನಿ ಎಂದಿದ್ದೇನೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕಿಸಿ ಬನ್ನಿ ಎಂದಿದ್ದೇನೆ ಎಂದರು.
ಮಂಗಳೂರಲ್ಲಿ ಸಾಲು ಸಾಲು ಹತ್ಯೆಗಳ ಬಗ್ಗೆ ಮಾತನಾಡಿ, ಯಾರೇ ಎಷ್ಟೇ ಪ್ರಭಾವಿ ಇದ್ದರೂ ಕೂಡ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾರು ಕಾನೂನಿನಿಂತ ದೊಡ್ಡ ವರು ಅಲ್ಲ, ಕಾನೂನೇ ಎಲ್ಲರಿಗಿಂತ ದೊಡ್ಡದು. ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೂರು ಕೊಲೆಗಳು ನಡೆದಿವೆ. ಅಶ್ರಫ್, ಸುಹಾಸ್ ಶೆಟ್ಟಿ ಹತ್ಯೆ ನಡೆದಿತ್ತು. ಇದೀಗ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಅಬ್ದುಲ್ ರೆಹ್ಮಾನ್ ಹತ್ಯೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣ ಆಗಿದೆ. ಮೇ 30 ರವರೆಗೆ ನಿಷೇಧಾಜ಼್ಞೆ ಜಾರಿಗೊಳಿಸಲಾಗಿದೆ.
CM Holds Breakfast Meeting with Congress MLC B K Hariprasad, Plans Visit to Mangalore Amid Communal Tensions.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am