ಬ್ರೇಕಿಂಗ್ ನ್ಯೂಸ್
31-05-25 04:33 pm HK News Desk ಕರ್ನಾಟಕ
ಕಾರ್ಕಳ, ಮೇ 31 : ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಶನಿವಾರ ನಸುಕಿನ ವೇಳೆಗೆ ನಡೆದ ಅಗ್ನಿ ದುರಂತದಲ್ಲಿ ಕರಾವಳಿಯ ಕಂಬಳದಲ್ಲಿ ಜನಪ್ರಿಯರಾಗಿರುವ ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರಿಗೆ ಸೇರಿದ ಕಂಬಳ ಕೋಣಗಳಾದ ಅಪ್ಪು ಮತ್ತು ತೋನ್ಸೆ ದುರಂತ ಸಾವಿಗೀಡಾಗಿವೆ.
ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗುತ್ತಿದ್ದು, ಬೆಳಗ್ಗೆ ಕೆಲಸದಾಳು ಹಟ್ಟಿಗೆ ತೆರಳಿದಾಗ ಬೆಂಕಿಯಿಂದ ಸುಟ್ಟು ಕರಕಲಾಗಿದ್ದು ಕಂಡುಬಂದಿದೆ. ಹಲವು ಕಂಬಳ ಕೂಟಗಳಲ್ಲಿ ಚಾಂಪ್ಯನ್ ಶಿಪ್ ಗಳನ್ನು ಗೆದ್ದಿದ್ದ ಅಪ್ಪು ಮತ್ತು ತೋನ್ಸೆ ಕೋಣಗಳ ಸಾವು ಕಂಬಳ ಪ್ರೇಮಿಗಳಿಗೆ ಆಘಾತ ತಂದಿದೆ. ಬೆಂಕಿ ಹೇಗೆ ಉಂಟಾಯಿತು, ಇದರ ಹಿಂದೆ ಯಾರದ್ದಾದರೂ ಕೈವಾಡ ಇದ್ದಿರಬಹುದೇ ಎನ್ನುವ ಬಗ್ಗೆ ತನಿಖೆ ಆಗಬೇಕಾಗಿದೆ.





ಅಪ್ಪು ಕೋಣಗಳ ಜೋಡಿಯು ಹಲವು ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ಗೆದ್ದು ಜನಪ್ರಿಯರಾಗಿದ್ದವು. 2022-23ರ ಸಾಲಿನಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಸರಣಿ ಶ್ರೇಷ್ಠ ಬಿರುದು ಪಡೆದಿತ್ತು. ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ವಿಭಾಗಗಳಲ್ಲಿ ಸ್ಪರ್ಧಿಸಿ ಎಲ್ಲ ವಿಭಾಗದಲ್ಲಿ ಪ್ರಶಸ್ತಿಗಳನ್ನು ಗೆದ್ದಿತ್ತು. ಈ ಕೋಣವನ್ನು 15 ವರ್ಷಗಳ ಹಿಂದೆ ಅಲೆವೂರು ತೆಂಕುಮನೆ ರಾಘು ಶೆಟ್ಟಿಯವರಿಂದ ಖರೀದಿಸಿ ಬೇಲಾಡಿ ಅಶೋಕ್ ಶೆಟ್ಟಿಯವರು ಕಂಬಳದಲ್ಲಿ ಪಳಗಿಸಿದ್ದರು. ಈ ನಡುವೆ, ಕರಿಂಜೆ ವಿನು ವಿಶ್ವನಾಥ ಶೆಟ್ಟಿಯವರ ಬಳಿಯೂ ಈ ಕೋಣ ಇತ್ತು. ಹಗ್ಗ ಹಿರಿಯ ವಿಭಾಗದಲ್ಲಿ 10-12 ವರ್ಷಗಳಲ್ಲಿ ಅದೆಷ್ಟೋ ಪ್ರಶಸ್ತಿಗಳನ್ನು ತನ್ನದಾಗಿಸಿತ್ತು. ಇಂಥ ಕೋಣಗಳ ಜೋಡಿ ಅಗ್ನಿ ದುರಂತದಲ್ಲಿ ಜೀವಂತ ದಹನವಾಗಿರುವುದು ಕಂಬಳ ಪ್ರಿಯರನ್ನು ಮತ್ತು ಅದನ್ನು ಸಲಹಿ ಸಾಕುತ್ತಿದ್ದ ಮಾಲೀಕರು ಮತ್ತು ಕೆಲಸದವರನ್ನು ರೋದಿಸುವಂತೆ ಮಾಡಿದೆ.
Karkala Appu, Decorated Winner of Hundreds of Kambala Awards, and Pair of Thonse Buffaloes Burnt Alive in Tragic Fire at Beladi Home.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm