ಬ್ರೇಕಿಂಗ್ ನ್ಯೂಸ್
31-05-25 04:33 pm HK News Desk ಕರ್ನಾಟಕ
ಕಾರ್ಕಳ, ಮೇ 31 : ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಶನಿವಾರ ನಸುಕಿನ ವೇಳೆಗೆ ನಡೆದ ಅಗ್ನಿ ದುರಂತದಲ್ಲಿ ಕರಾವಳಿಯ ಕಂಬಳದಲ್ಲಿ ಜನಪ್ರಿಯರಾಗಿರುವ ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರಿಗೆ ಸೇರಿದ ಕಂಬಳ ಕೋಣಗಳಾದ ಅಪ್ಪು ಮತ್ತು ತೋನ್ಸೆ ದುರಂತ ಸಾವಿಗೀಡಾಗಿವೆ.
ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗುತ್ತಿದ್ದು, ಬೆಳಗ್ಗೆ ಕೆಲಸದಾಳು ಹಟ್ಟಿಗೆ ತೆರಳಿದಾಗ ಬೆಂಕಿಯಿಂದ ಸುಟ್ಟು ಕರಕಲಾಗಿದ್ದು ಕಂಡುಬಂದಿದೆ. ಹಲವು ಕಂಬಳ ಕೂಟಗಳಲ್ಲಿ ಚಾಂಪ್ಯನ್ ಶಿಪ್ ಗಳನ್ನು ಗೆದ್ದಿದ್ದ ಅಪ್ಪು ಮತ್ತು ತೋನ್ಸೆ ಕೋಣಗಳ ಸಾವು ಕಂಬಳ ಪ್ರೇಮಿಗಳಿಗೆ ಆಘಾತ ತಂದಿದೆ. ಬೆಂಕಿ ಹೇಗೆ ಉಂಟಾಯಿತು, ಇದರ ಹಿಂದೆ ಯಾರದ್ದಾದರೂ ಕೈವಾಡ ಇದ್ದಿರಬಹುದೇ ಎನ್ನುವ ಬಗ್ಗೆ ತನಿಖೆ ಆಗಬೇಕಾಗಿದೆ.





ಅಪ್ಪು ಕೋಣಗಳ ಜೋಡಿಯು ಹಲವು ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ಗೆದ್ದು ಜನಪ್ರಿಯರಾಗಿದ್ದವು. 2022-23ರ ಸಾಲಿನಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಸರಣಿ ಶ್ರೇಷ್ಠ ಬಿರುದು ಪಡೆದಿತ್ತು. ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ವಿಭಾಗಗಳಲ್ಲಿ ಸ್ಪರ್ಧಿಸಿ ಎಲ್ಲ ವಿಭಾಗದಲ್ಲಿ ಪ್ರಶಸ್ತಿಗಳನ್ನು ಗೆದ್ದಿತ್ತು. ಈ ಕೋಣವನ್ನು 15 ವರ್ಷಗಳ ಹಿಂದೆ ಅಲೆವೂರು ತೆಂಕುಮನೆ ರಾಘು ಶೆಟ್ಟಿಯವರಿಂದ ಖರೀದಿಸಿ ಬೇಲಾಡಿ ಅಶೋಕ್ ಶೆಟ್ಟಿಯವರು ಕಂಬಳದಲ್ಲಿ ಪಳಗಿಸಿದ್ದರು. ಈ ನಡುವೆ, ಕರಿಂಜೆ ವಿನು ವಿಶ್ವನಾಥ ಶೆಟ್ಟಿಯವರ ಬಳಿಯೂ ಈ ಕೋಣ ಇತ್ತು. ಹಗ್ಗ ಹಿರಿಯ ವಿಭಾಗದಲ್ಲಿ 10-12 ವರ್ಷಗಳಲ್ಲಿ ಅದೆಷ್ಟೋ ಪ್ರಶಸ್ತಿಗಳನ್ನು ತನ್ನದಾಗಿಸಿತ್ತು. ಇಂಥ ಕೋಣಗಳ ಜೋಡಿ ಅಗ್ನಿ ದುರಂತದಲ್ಲಿ ಜೀವಂತ ದಹನವಾಗಿರುವುದು ಕಂಬಳ ಪ್ರಿಯರನ್ನು ಮತ್ತು ಅದನ್ನು ಸಲಹಿ ಸಾಕುತ್ತಿದ್ದ ಮಾಲೀಕರು ಮತ್ತು ಕೆಲಸದವರನ್ನು ರೋದಿಸುವಂತೆ ಮಾಡಿದೆ.
Karkala Appu, Decorated Winner of Hundreds of Kambala Awards, and Pair of Thonse Buffaloes Burnt Alive in Tragic Fire at Beladi Home.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm