ಬ್ರೇಕಿಂಗ್ ನ್ಯೂಸ್
31-05-25 09:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.31: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ರಹೀಂ ಎಂಬಾತನ ಕೊಲೆ ನಡೆದಿದೆ. ಕೆಲವೇ ತಿಂಗಳ ಅಂತರದಲ್ಲಿ ಹಲವು ಕೊಲೆಗಳು ನಡೆದಿವೆ. ಹೀಗಿರುವಾಗ ಸರ್ಕಾರ ಇದನ್ನು ತಡೆಯುತ್ತಿಲ್ಲ ಯಾಕೆ, ಇದನ್ನೂ ರಾಜಕೀಯಕ್ಕೆ ಕೂಳು ಬೇಯಿಸಿಕೊಳ್ಳುತ್ತಿದೆಯಾ ಎಂದು ಗಂಭೀರ ಆರೋಪವನ್ನು ಕೇಂದ್ರ ಸಚಿವ , ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಒಂದೆಡೆ ನಿರಂತರ ಮಳೆ ಅವಾಂತರ, ಇನ್ನೊಂದೆಡೆ ಕೊಲೆಗಳು, ಇದ್ಯಾವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ, ಜನರ ಕಣ್ಣಲ್ಲಿ ರಕ್ತಕಣ್ಣೀರು ನೋಡಲು ಸರ್ಕಾರ ಹಪಹಪಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಕರಾವಳಿ ಭಾಗ ಸೇರಿ ರಾಜ್ಯದ ಉದ್ದಗಲಕ್ಕೂ ನಿರಂತರ ಧಾರಾಕಾರ ಮಳೆ ಜನಜೀವನವನ್ನು ಛಿದ್ರಗೊಳಿಸಿದೆ. ಜನ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ, ಕರಾವಳಿಗರ ಕಣ್ಣೀರು ಒರೆಸುವ ಬದಲು ಅವರ ಕಣ್ಣಲ್ಲಿ 'ರಕ್ತಕಣ್ಣೀರು' ಸುರಿಯಲಿ ಎಂದು ಹಪಾಹಪಿಸುತ್ತಿದೆ!
ಮನೆ, ರಸ್ತೆ, ಸೇತುವೆಗಳು ಕುಸಿದಿವೆ. ನಗರ, ಪಟ್ಟಣ, ಹಳ್ಳಿಗಳು ಜಲದಿಗ್ಬಂಧನಕ್ಕೆ ಸಿಲುಕಿ ಜನ ವಿಲವಿಲವೆನ್ನುತ್ತಿದ್ದಾರೆ. ಮೂರಾಬಟ್ಟೆಯಾಗಿರುವ ಅವರ ಬದುಕಿನ ರಕ್ಷಣೆಗೆ ಸರಕಾರದ ಕ್ರಮವೇನು?
'ಕೋಟೆ ಕೊಳ್ಳೆ ಹೋದ ಮೇಲೆ ದಿಡ್ಡಿ ಬಾಗಿಲು ಬಡಿದುಕೊಂಡರು' ಎನ್ನುವಂತೆ ಮಳೆಯಲ್ಲಿ ಬದುಕು ಕೊಚ್ಚಿಹೋದ ಮೇಲೆ ಸಚಿವರಿಗೆ ಹೋಗಿ ಎಂದು ಮುಖ್ಯಮಂತ್ರಿ ಅಪ್ಪಣೆ ಕೊಟ್ಟರೆ ಫಲವೇನು? ಮಳೆ ಬರುವ ಮೊದಲು ಏನು ಮಾಡಿದ್ದೀರಿ? ಇದೇನಾ ಜನಪರ ಆಡಳಿತ? ನುಡಿದಂತೆ ನಡೆಯುವುದು ಎಂದರೆ ಹೀಗೆನಾ?
ಕಾಂಗ್ರೆಸ್ ಸರಕಾರಕ್ಕೆ ಕರಾವಳಿ ಮಳೆ ಬಗ್ಗೆ ಚಿಂತೆ ಇಲ್ಲ. ಆದರೆ, ಕರಾವಳಿ ಕೊಲೆಗಳ ಬಗ್ಗೆ ಎಲ್ಲಿಲ್ಲದ ಕಾಳಜಿ. ಆ ಕಾಳಜಿ ಕೊಲೆಗಳನ್ನು ಹತ್ತಿಕ್ಕಲಿಕ್ಕಲ್ಲ, ಕೊಲೆಗಳಲ್ಲೂ 'ರಾಜಕೀಯ ಕೂಳು' ಬೇಯಿಸಿಕೊಳ್ಳಲು!
ಸಿದ್ದರಾಮಯ್ಯನವರೇ, ಎರಡು ವರ್ಷದಿಂದ ಅಧಿಕಾರದಲ್ಲಿದ್ದೀರಿ. ಅನ್ಯಪಕ್ಷಗಳನ್ನು ದೂರುತ್ತಾ ಕಾಲಹರಣ ಮಾಡುತ್ತಿದ್ದೀರಿ. ನೀವು ಅಧಿಕಾರಕ್ಕೆ ಬಂದ ಮೇಲೆ ಕರಾವಳಿ ಭಾಗದಲ್ಲಿ ಎಷ್ಟು ಹತ್ಯೆಗಳಾದವು? ಅವನ್ನು ಹತ್ತಿಕ್ಕಲಿಲ್ಲ ಯಾಕೆ? ಒಂದು ಸಮುದಾಯ ನಿಮ್ಮ ಪಕ್ಷಕ್ಕೆ ನೂರಕ್ಕೆ ನೂರರಷ್ಟು ವೋಟು ಕೊಟ್ಟಿದೆಯಲ್ಲವೇ? ಅವರನ್ನು ರಕ್ಷಿಸಲು ವಿಫಲರಾಗಿರುವ ನೀವು, ಇತರೆ ಕೋಮುಗಳ ಮೇಲೆ ವಿಷ ಕಕ್ಕುತ್ತಿದ್ದೀರಿ!!
ಸರ್ವ ಜನಾಂಗದ ಶಾಂತಿಯ ತೋಟವನ್ನು ವಿಷ ಸರ್ಪಗಳ ತೋಟವನ್ನಾಗಿ ಪರಿವರ್ತಿಸಿದ್ದೀರಿ. ಸಿದ್ದರಾಮಯ್ಯನವರೇ, ನೀವೂ ಮತ್ತು ನಿಮ್ಮ ಸಂಗಡಿಗರ ಸದಾರಮೆ ಸಾಕು. ಕೂಡಲೇ ಕರಾವಳಿಗೆ ಭೇಟಿ ನೀಡಿ. ಮಳೆ, ಕೊಲೆಗಳಿಂದ ತತ್ತರಿಸಿರುವ ಅಲ್ಲಿನ ಜನತೆಗೆ ಧೈರ್ಯ ತುಂಬಿ. ಪ್ರಕೃತಿ ಪ್ರೇರಿತ ಮಳೆ ವಿಕೋಪ, ನಿಮ್ಮ ಪಕ್ಷ ಪ್ರೇಷಿತ 'ಕೊಲೆ ವಿಕೋಪ'ಕ್ಕೆ ಪರಿಹಾರ ಕಂಡುಕೊಳ್ಳಿ. ಮುಖ್ಯಮಂತ್ರಿಯಾಗಿ ಇದು ನಿಮ್ಮ ತಕ್ಷಣದ ಕರ್ತವ್ಯ. ಎಂದು ಕಿಡಿಕಾರಿದ್ದಾರೆ.
Siddaramaiah, Stand with Mangalore People Amid Rains, Killings, Kumaraswamy Slams Govt.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm