ಬ್ರೇಕಿಂಗ್ ನ್ಯೂಸ್
01-06-25 11:50 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್.1: ಮಂಡ್ಯ ಪೊಲೀಸರ ಕರ್ತವ್ಯ ಲೋಪದಿಂದ ಮಗುವೊಂದು ಮೃತಪಟ್ಟ ಬೆನ್ನಲ್ಲೇ ಎಚ್ಚತ್ತಿರುವ ಪೊಲೀಸ್ ಇಲಾಖೆ ತಪಾಸಣೆ ನೆಪದಲ್ಲಿ ಸಕಾರಣವಿಲ್ಲದೆ ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ನಿಲ್ಲಿಸಬಾರದು ಎಂದು ಆದೇಶ ಹೊರಡಿಸಿದೆ.
ಈ ಕುರಿತು ಶನಿವಾರ ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸರಿಗೆ ಸುತ್ತೋಲೆ ಹೊರಡಿಸಿರುವ ಡಿಜಿಪಿ ಡಾ.ಎಂ.ಎ ಸಲೀಂ, ವಾಹನಗಳ ತಪಾಸಣೆ ಸಂಬಂಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಆದೇಶಿಸಿದ್ದಾರೆ.
ಹೆದ್ದಾರಿಗಳಲ್ಲಿ ಜಿಗ್ ಜಾಗ್ ಬ್ಯಾರಿಕೇಡ್ ಅಳವಡಿಸಿ ವಾಹನಗಳನ್ನು ತಡೆಯಬಾರದು. ರಸ್ತೆಯಲ್ಲಿ ಏಕಾಏಕಿ ಅಡ್ಡಬಂದು ವಾಹನಗಳನ್ನು ನಿಲ್ಲಿಸಬಾರದು. ವಾಹನಗಳನ್ನು ನಿಲ್ಲಿಸಿ ಕೀ ಕಸಿದು ಅಡ್ಡಿ ಪಡಿಸಬಾರದು. ಬೈಕ್ ಹಿಂಬದಿ ಕುಳಿತಿರುವ ಸವಾರನನ್ನು ಹಿಡಿದೆಳೆಯುವುದು ಮಾಡುವಂತಿಲ್ಲ. ಪ್ರಮುಖವಾಗಿ ಇಂಟಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ಜಾರಿಯಿರುವ ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ತಂತ್ರಜ್ಞಾನ ಆಧರಿತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲು ಆದ್ಯತೆ ನೀಡಬೇಕು ಎಂದು ಸೂಚಿಸಿದ್ದಾರೆ.
ರಸ್ತೆಗಳಲ್ಲಿ ಅತಿ ವೇಗವಾಗಿ ಚಲಾಯಿಸುವ ವಾಹನಗಳನ್ನು ಬೆನ್ನಟ್ಟುವ ಬದಲಿಗೆ ವಾಹನಗಳ ಸಂಖ್ಯೆ ಗುರುತು ಮಾಡಿಕೊಂಡು ಜಿಲ್ಲಾ ಸರಹದ್ದುಗಳ ನಿಯಂತ್ರಣ ಕೊಠಡಿಗಳಿಗೆ ಮಾಹಿತಿ ರವಾನಿಸಿ ಪ್ರಕರಣ ದಾಖಲಿಸಬೇಕು. ಸಂಚಾರ ನಿಯಮ ಉಲ್ಲಂಘನೆ ಸಲುವಾಗಿ ವಾಹನಗಳನ್ನು ತಪಾಸಣೆ ಮಾಡುವಾಗ ಪ್ರತಿಫಲನ ಜಾಕೆಟ್ ಗಳನ್ನು ಧರಿಸಬೇಕು. ಸಂಜೆ ವೇಳೆ ಎಲ್ ಇಡಿ ಬಟನ್ ಗಳನ್ನು ಉಪಯೋಗಿಸಬೇಕು. ಕರ್ತವ್ಯ ನಿರ್ವಹಣೆ ವೇಳೆ ಕಡ್ಡಾಯವಾಗಿ ಬಾಡಿ ವೋರ್ನ್ ಕ್ಯಾಮೆರಾ ಧರಿಸಿರಬೇಕು ಎಂದು ನಿರ್ದೇಶನ ನೀಡಲಾಗಿದೆ.
Director General and Inspector General of Police (DG&IGP) M A Saleem on Saturday issued new guidelines to the traffic policemen in the state.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm