ಬ್ರೇಕಿಂಗ್ ನ್ಯೂಸ್
01-06-25 11:50 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್.1: ಮಂಡ್ಯ ಪೊಲೀಸರ ಕರ್ತವ್ಯ ಲೋಪದಿಂದ ಮಗುವೊಂದು ಮೃತಪಟ್ಟ ಬೆನ್ನಲ್ಲೇ ಎಚ್ಚತ್ತಿರುವ ಪೊಲೀಸ್ ಇಲಾಖೆ ತಪಾಸಣೆ ನೆಪದಲ್ಲಿ ಸಕಾರಣವಿಲ್ಲದೆ ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ನಿಲ್ಲಿಸಬಾರದು ಎಂದು ಆದೇಶ ಹೊರಡಿಸಿದೆ.
ಈ ಕುರಿತು ಶನಿವಾರ ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸರಿಗೆ ಸುತ್ತೋಲೆ ಹೊರಡಿಸಿರುವ ಡಿಜಿಪಿ ಡಾ.ಎಂ.ಎ ಸಲೀಂ, ವಾಹನಗಳ ತಪಾಸಣೆ ಸಂಬಂಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಆದೇಶಿಸಿದ್ದಾರೆ.
ಹೆದ್ದಾರಿಗಳಲ್ಲಿ ಜಿಗ್ ಜಾಗ್ ಬ್ಯಾರಿಕೇಡ್ ಅಳವಡಿಸಿ ವಾಹನಗಳನ್ನು ತಡೆಯಬಾರದು. ರಸ್ತೆಯಲ್ಲಿ ಏಕಾಏಕಿ ಅಡ್ಡಬಂದು ವಾಹನಗಳನ್ನು ನಿಲ್ಲಿಸಬಾರದು. ವಾಹನಗಳನ್ನು ನಿಲ್ಲಿಸಿ ಕೀ ಕಸಿದು ಅಡ್ಡಿ ಪಡಿಸಬಾರದು. ಬೈಕ್ ಹಿಂಬದಿ ಕುಳಿತಿರುವ ಸವಾರನನ್ನು ಹಿಡಿದೆಳೆಯುವುದು ಮಾಡುವಂತಿಲ್ಲ. ಪ್ರಮುಖವಾಗಿ ಇಂಟಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ಜಾರಿಯಿರುವ ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ತಂತ್ರಜ್ಞಾನ ಆಧರಿತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲು ಆದ್ಯತೆ ನೀಡಬೇಕು ಎಂದು ಸೂಚಿಸಿದ್ದಾರೆ.
ರಸ್ತೆಗಳಲ್ಲಿ ಅತಿ ವೇಗವಾಗಿ ಚಲಾಯಿಸುವ ವಾಹನಗಳನ್ನು ಬೆನ್ನಟ್ಟುವ ಬದಲಿಗೆ ವಾಹನಗಳ ಸಂಖ್ಯೆ ಗುರುತು ಮಾಡಿಕೊಂಡು ಜಿಲ್ಲಾ ಸರಹದ್ದುಗಳ ನಿಯಂತ್ರಣ ಕೊಠಡಿಗಳಿಗೆ ಮಾಹಿತಿ ರವಾನಿಸಿ ಪ್ರಕರಣ ದಾಖಲಿಸಬೇಕು. ಸಂಚಾರ ನಿಯಮ ಉಲ್ಲಂಘನೆ ಸಲುವಾಗಿ ವಾಹನಗಳನ್ನು ತಪಾಸಣೆ ಮಾಡುವಾಗ ಪ್ರತಿಫಲನ ಜಾಕೆಟ್ ಗಳನ್ನು ಧರಿಸಬೇಕು. ಸಂಜೆ ವೇಳೆ ಎಲ್ ಇಡಿ ಬಟನ್ ಗಳನ್ನು ಉಪಯೋಗಿಸಬೇಕು. ಕರ್ತವ್ಯ ನಿರ್ವಹಣೆ ವೇಳೆ ಕಡ್ಡಾಯವಾಗಿ ಬಾಡಿ ವೋರ್ನ್ ಕ್ಯಾಮೆರಾ ಧರಿಸಿರಬೇಕು ಎಂದು ನಿರ್ದೇಶನ ನೀಡಲಾಗಿದೆ.
Director General and Inspector General of Police (DG&IGP) M A Saleem on Saturday issued new guidelines to the traffic policemen in the state.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm